ದಾವಣಗೆರೆ | ಕೆಚ್ಚೇನಹಳ್ಳಿ ಗ್ರಾ.ಪಂ. ಕಾರ್ಯದರ್ಶಿ ಗಾಯತ್ರಿದೇವಿ ಅಮಾನತಿಗೆ ಆಗ್ರಹ

Date:

ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಕೆಚ್ಚೇನಹಳ್ಳಿ ಗ್ರಾಮ ಪಂಚಾಯಿತಿಯ ಕರ್ತವ್ಯ ಮತ್ತು ಕಾರ್ಯನಿರ್ವಹಣೆಯಲ್ಲಿ ನಿರ್ಲಕ್ಷ್ಯ ತೋರುತ್ತಿರುವ ಕಾರ್ಯದರ್ಶಿ ಗಾಯತ್ರಿ ದೇವಿ ಎಂಬುವವರನ್ನು ಕೂಡಲೇ ಬೇರೆಡೆಗೆ ವರ್ಗಾಯಿಸುವಂತೆ ಆಗ್ರಹಿಸಿ ಸಾರ್ವಜನಿಕರು ಮತ್ತು ಗ್ರಾಮ ಪಂಚಾಯಿತಿ ಸದಸ್ಯರು ಕಚೇರಿಗೆ ಬೀಗ ಜಡಿದು ಪ್ರತಿಭಟನೆ ನಡೆಸಿದರು.

“ಗ್ರಾಮ ಪಂಚಾಯಿತಿ ಕಾರ್ಯದರ್ಶಿಯ ಕರ್ತವ್ಯ ನಿರ್ಲಕ್ಷ್ಯದಿಂದ ಕಚೇರಿಯ ಕೆಲಸಗಳು ಬಾಕಿ ಉಳಿದಿದೆ. ಗ್ರಾಮ ಪಂಚಾಯಿತಿಯಲ್ಲಿ ಯಾವುದೇ ಕೆಲಸಗಳು ಆಗುತ್ತಿಲ್ಲ. ಗ್ರಾಮದ ಅಭಿವೃದ್ಧಿ ಮರೀಚಿಕೆಯಾಗಿದೆ. ಮನರೇಗಾ ಸಮರ್ಪಕವಾಗಿ ಜಾರಿಯಾಗಿಲ್ಲ. ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಇ-ಸ್ವತ್ತು ನಿರ್ವಹಣೆ ಸರಿಯಾಗಿ ಆಗುತ್ತಿಲ್ಲ. ಸಮರ್ಪಕ ಮೂಲಭೂತ ಸೌಕರ್ಯಗಳ ಕೊರತೆಗಳು ಎದುರಾಗಿದೆ. ಇದರಿಂದ ಗ್ರಾಮಸ್ಥರಿಗೆ ತೊಂದರೆಯಾಗುತ್ತದೆ” ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಗ್ರಾಮ ಪಂಚಾಯಿತಿ ಸದಸ್ಯ ಚಿಕ್ಕಮ್ಮನಹಟ್ಟಿ ಮಂಜಣ್ಣ ಮಾತನಾಡಿ, “ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಗಾಯತ್ರಿ ದೇವಿಯವರು ಸಾರ್ವಜನಿಕರೊಡನೆ ಮತ್ತು ಅಧ್ಯಕ್ಷರು, ಸದಸ್ಯರೊಡನೆ ಸೂಕ್ತವಾಗಿ ಸ್ಪಂದಿಸದೆ ಸರಿಯಾಗಿ ಕಾರ್ಯ ನಿರ್ವಹಣೆಯಾಗುತ್ತಿಲ್ಲ. ಕಳೆದ ಕೋವಿಡ್‌ನಿಂದಲೂ ಗ್ರಾಮ ಪಂಚಾಯಿತಿಯಲ್ಲಿ ಅಭಿವೃದ್ಧಿ ಕಾರ್ಯಗಳು ಕುಂಠಿತಗೊಂಡಿದೆ. ಕಂಪ್ಯೂಟರ್ ಆಪರೇಟರ್ ಇಲ್ಲದೆ ಮನರೇಗಾ ಕಾಮಗಾರಿ ಕೂಡ ಸಾಧ್ಯವಾಗುತ್ತಿಲ್ಲ. ಅಲ್ಲದೆ ಇ-ಸ್ವತ್ತು ವಿಳಂಬವಾಗುತ್ತಿದ್ದು, ಸಾರ್ವಜನಿಕರಿಗೂ ತೊಂದರೆಯಾಗುತ್ತಿದೆ. ಕಾರ್ಯದರ್ಶಿಗಳು ಸಾರ್ವಜನಿಕರಿಗೆ ಮತ್ತು ಫಲಾನುಭವಿಗಳಿಗೆ ಸೂಕ್ತವಾಗಿ ಸ್ಪಂದಿಸುತ್ತಿಲ್ಲ. ಸಾಕಷ್ಟು ದೂರುಗಳೂ ಕೂಡ ಕೇಳಿಬಂದಿವೆ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಾಸದೇವ ಅವರು ಬೇರೊಂದು ಗ್ರಾಮ ಪಂಚಾಯಿತಿಯಲ್ಲಿ ಪ್ರಭಾರಿಯಾಗಿದ್ದು, ಮೂರು ದಿನಗಳ ಕಾಲ ಮಾತ್ರ ಇಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಪ್ರಶ್ನಿಸಿದರೆ ಕಾರ್ಯದರ್ಶಿಯ ಮೇಲೆ ಪಿಡಿಒ, ಪಿಡಿಒ ಮೇಲೆ ಕಾರ್ಯದರ್ಶಿ ಸಬೂಬು ಹೇಳಿಕೊಂಡು ಅಭಿವೃದ್ಧಿ ಮರೀಚಿಕೆಯಾಗಿದೆ “ಎಂದು ಆರೋಪಿಸಿದರು.

“ಸಂಬಂಧಪಟ್ಟ ಮೇಲಧಿಕಾರಿಗಳು ಎಚ್ಚೆತ್ತು ಕಾರ್ಯದರ್ಶಿ ಗಾಯತ್ರಿ ದೇವಿ ಅವರನ್ನು ಬೇರೆಡೆಗೆ ವರ್ಗಾವಣೆ ಮಾಡಿ ಸೂಕ್ತ ಅಧಿಕಾರಿಯನ್ನು ನಿಯೋಜಿಸಬೇಕು. ಇಲ್ಲವಾದಲ್ಲಿ ಪಂಚಾಯಿತಿಯ ಎಲ್ಲ ಸದಸ್ಯರು ಸಾಮೂಹಿಕ ರಾಜೀನಾಮೆಗೆ ಸಿದ್ದರಿದ್ದೇವೆ” ಎಂದು ತಾಲೂಕು ಕಾರ್ಯ ನಿರ್ವಹಣಾಧಿಕಾರಿ ಕೆಂಚಪ್ಪ ಅವರ ಬಳಿ ತಮ್ಮ ಅಸಮಾಧಾನ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಕರ್ನಾಟಕದ ಕಾಶ್ಮೀರ ಎನಿಸಿಕೊಂಡಿರುವ ಕೊಡಗಿನ ‘ಮಡಿಕೇರಿ’ಗೆ ಪರಿಶುದ್ಧ ಗಾಳಿ ಪಟ್ಟಿಯಲ್ಲಿ ಅಗ್ರಸ್ಥಾನ

ಈ ವೇಳೆ ಸ್ಥಳಕ್ಕೆ ಆಗಮಿಸಿದ ತಾಲೂಕು ಕಾರ್ಯ ನಿರ್ವಹಣಾಧಿಕಾರಿ ಕೆಂಚಪ್ಪ ಸಮಸ್ಯೆ ಬಗ್ಗೆ ಪ್ರತಿಕ್ರಿಯಿಸಿ, “ಕೆಚ್ಚೇನಹಳ್ಳಿ ಗ್ರಾಮ ಪಂಚಾಯಿತಿಗೆ ದೇವಿಕೆರೆ ಗ್ರಾಮ ಪಂಚಾಯಿತಿಯ ಆಪರೇಟರ್‌ಗೆ ಪೂರ್ಣಾವಧಿಗೆ ಕಾರ್ಯ ನಿರ್ವಹಿಸುವಂತೆ ನಿಯೋಜಿಸಲಾಗುತ್ತದೆ. ರಾಜ್ಯದಲ್ಲಿ ಕಂಪ್ಯೂಟರ್ ಆಪರೇಟರ್ ನೇಮಕಾತಿ ಪ್ರಕ್ರಿಯೆಯಲ್ಲಿದೆ.‌ ಗ್ರಾ.ಪಂ ಅಧ್ಯಕ್ಷ ರು, ಸದಸ್ಯರುಗಳು ಸಹಕರಿಸಬೇಕು. ಇ-ಸ್ವತ್ತು ಸೇರಿದಂತೆ ಇತರೆ ಸಾರ್ವಜನಿಕರ ದೂರುಗಳನ್ನು ಪರಿಶೀಲಿಸಿ ಅಗತ್ಯ ಕ್ರಮ ಕೈಗೊಂಡು ಸಮಸ್ಯೆ ಇತ್ಯರ್ಥಪಡಿಸಲಾಗುವುದು” ಎಂದು ಗ್ರಾಮಸ್ಥರಿಗೆ ಗ್ರಾಮ ಪಂಚಾಯಿತಿ ಸದಸ್ಯರಿಗೆ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ತಾ.ಪಂ ಸಹಾಯಕ ನಿರ್ದೇಶಕ ಬೋರಯ್ಯ, ಗ್ರಾ.ಪಂ ಅಧ್ಯಕ್ಷೆ ಲಕ್ಷಮ್ಮ ಮಾರಪ್ಪ, ಸದಸ್ಯರಾದ ಕೆಚ್ಚೇನಹಳ್ಳಿ ಓಬಳೇಶ್, ಬೊಮ್ಮಕ್ಕ, ಸುಧಾಮಣಿ, ಮುಖಂಡರಾದ ಚಿಕ್ಕಮ್ಮನ ಹಟ್ಟಿ ಕಾಟಪ್ಪ, ಮಹಾಂತೇಶ್, ಲೋಕೇಶ್ ಸೇರಿದಂತೆ ಗ್ರಾಮಸ್ಥರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...