ದಾಣಗೆರೆ | ಮೇಲ್ದಂಡೆ ನಾಲೆ ದುರಸ್ತಿಗೆ ಆಗ್ರಹ; ನೀರಾವರಿ ಇಲಾಖೆ ಕಚೇರಿಗೆ ರೈತರಿಂದ ಮುತ್ತಿಗೆ

Date:

ಮೇಲ್ದಂಡೆ ನಾಲೆ ದುರಸ್ತಿ ಮಾಡಿ, ನಾಲೆಗಳ ಹೂಳು ತೆಗೆಯುವಂತೆ ಆಗ್ರಹಿಸಿ ರಾಜ್ಯ ರೈತ ಸಂಘ, ಹಸಿರುಸೇನೆ (ಹುಚ್ಚವ್ವನಹಳ್ಳಿ ಮಂಜುನಾಥ್‌ ಬಣ)ದಿಂದ ದಾವಣಗೆರೆಯ ಹದಡಿ ರಸ್ತೆಯಲ್ಲಿರುವ ನೀರಾವರಿ ಇಲಾಖೆ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಯಿತು.

ಸಂಘದ ರಾಜ್ಯಾಧ್ಯಕ್ಷ ಹುಚ್ಚವ್ವನಹಳ್ಳಿ ಮಂಜುನಾಥ್ ಮಾತನಾಡಿ, “ದಾವಣಗೆರೆ ತಾಲೂಕಿನ ಕುರ್ಕಿ ಭಾಗದ ಭದ್ರಾನಾಲಾ 7ನೇ ವಿಭಾಗದಲ್ಲಿ ಕಾಲುವೆಗಳಲ್ಲಿ ಸಾಕಷ್ಟು ತೊಂದರೆಗಳಿದ್ದು, ಇವುಗಳನ್ನು ತ್ವರಿತಗತಿಯಲ್ಲಿ ಸರಿಪಡಿಸಬೇಕು” ಎಂದು ಆಗ್ರಹಿಸಿದರು.

“ಚಿಕ್ಕತೊಗಲೇರಿಯಿಂದ ಕುಕ್ಕವಾಡ ಗ್ರಾಮದವರೆಗೆ ಕೋಲ್ ಕುಂಟೆ, ಯರವನಾಗತಿಹಳ್ಳಿ, ಕಲ್ಕೆರೆ, ಕುಕ್ಕವಾಡ, ಗೋಪನಾಳು ಗ್ರಾಮದ ನಡುವೆ ಹರಿಯುವ 7ನೇ ವಿಭಾಗದ ಕಾಲುವೆಗಳಲ್ಲಿ ಬರುವ ಲೋಕಿಕೆರೆ, ಯರವನಾಗತಿಹಳ್ಳಿ, ಕೋಲ್ಕುಂಟೆ ಸಣ್ಣ ಗೇಟುಗಳು ಶಿಥಿಲಗೊಂಡಿದ್ದು, ನೀರು ಸಾಕಷ್ಟು ಪ್ರಮಾಣದಲ್ಲಿ ಸೋರಿಕೆಯಾಗುತ್ತಿದೆ. ಇದರಿಂದ ಅಣೆಕಟ್ಟು ಭಾಗದ ರೈತರಿಗೆ ನೀರು ತಲುಪದೇ ಸಾಕಷ್ಟು ಸಮಸ್ಯೆಗಳಾಗಿವೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕುರ್ಕಿ ಎಡದಂಡೆ ಮತ್ತು ಬಲದಂಡೆ ದೊಡ್ಡ ಕಾಲುವೆಯಲ್ಲಿ ಕಳೆದ ಅನೇಕ ವರ್ಷಗಳಿಂದ ಹೂಳು ತುಂಬಿರುವುದರಿಂದ ನೀರು ಸರಾಗವಾಗಿ ಹೋಗುತ್ತಿಲ್ಲ. ಮುಂದೆ ಇದರಿಂದ ಮೇಲ್ಭಾಗದ ರೈತರಿಗೆ ತೊಂದರೆ ಉಂಟಾಗಿದೆ. ಪೈಪುಗಳನ್ನು ಅಳವಡಿಸಿ ಈ ನಾಲೆ ದುರಸ್ತಿಗೊಳಿಸಬೇಕು” ಎಂದು ಆಗ್ರಹಿಸಿದರು.

“ಮುಂದಿನ ದಿನಗಳಲ್ಲಿ ಬೇಡಿಕೆಗಳು ಈಡೇರದೇ ಹೋದಲ್ಲಿ ಕೈದಾಳೆ ರಸ್ತೆಯಲ್ಲಿ ಬೃಹತ್ ರಸ್ತೆ ತಡೆ ಚಳುವಳಿ ಮತ್ತು ಲೋಕಿಕೆರೆ ರಸ್ತೆಯಲ್ಲಿ ಯರನಾಗತಿಹಳ್ಳಿ ರಸ್ತೆ ಬಂದ್, ಕುರ್ಕಿ ಗ್ರಾಮದಲ್ಲಿ ಬೀರೂರು – ಬಾಡ ರಸ್ತೆಯನ್ನು ಬಂದ್ ಮಾಡಿ ಏಕಕಾಲಕ್ಕೆ ಹೋರಾಟ ಮಾಡಲಾಗುವುದು” ಎಂದು ಎಚ್ಚರಿಸಿದರು.

ಮನವಿ ಸ್ವೀಕರಿಸಿದ ಇಲಾಖೆಯ ಎಂಜಿನಿಯರ್‌ ಮಂಜುನಾಥ್ ಮತ್ತು ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ ಮನೋಜ್ ಮಾತನಾಡಿ, “ಕಳೆದ ವರ್ಷ ನಾಲಾ ದುರಸ್ತಿಗೆ ಸರ್ಕಾರದಿಂದ ಯಾವುದೇ ಅನುದಾನ ಬಿಡುಗಡೆಯಾಗಿಲ್ಲ. ಹಾಗಾಗಿ ಈ ಸಮಸ್ಯೆಗಳು ಎದುರಾಗಿವೆ. ಕಳೆದ ಅನೇಕ ವರ್ಷಗಳಿಂದ ನಾಲೆ ದುರಸ್ತಿಗೆ ಹಣ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದರೂ ಅನುದಾನ ಬಿಡುಗಡೆಯಾಗಿಲ್ಲ. ಇದೀಗ ಮಾಯಕೊಂಡ ವಿಧಾನಸಭಾ ಕ್ಷೇತ್ರದ ಶಾಸಕ ಕೆ ಎಸ್ ಬಸವಂತಪ್ಪ ಅವರಿಗೂ ಮನವಿ ಮಾಡಲಾಗಿದೆ”  ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಬರಗೂರು ಪ್ರಶಸ್ತಿಗೆ ಕೋಟಿಗಾನಹಳ್ಳಿ ರಾಮಯ್ಯ, ಸುಂದರರಾಜ್ ಆಯ್ಕೆ

“ದಾವಣಗೆರೆ ದಕ್ಷಿಣ ಕ್ಷೇತ್ರದ ಶಾಸಕ ಡಾ. ಶಾಮನೂರು ಶಿವಶಂಕರಪ್ಪ ಅವರು ಈ ಸಂಬಂಧ ಸಭೆ ಕರೆದಿದ್ದಾರೆ. ಸಮಸ್ಯೆಗಳ ಕುರಿತು ಶಾಸಕರ ಗಮನ ಸೆಳೆದು ಅನುದಾನ ಬಿಡುಗಡೆಗೆ ಮಾಡುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು” ಎಂದು ಇಲಾಖೆಯ ಎಂಜಿನಿಯರ್ ಮಂಜುನಾಥ್‌ ಹೇಳಿದರು.

ಈ ಸಂದರ್ಭದಲ್ಲಿ ಕೈದಾಳೆ ವಸಂತಕುಮಾರ್‌, ಯರವನಾಗತಿಹಳ್ಳಿ ಬಾಲಾಜಿ,ಮಂಜುನಾಥ್, ಕುರ್ಕಿ ಹನುಮಂತ, ಹಿರೇ ಮಲ್ಲನಹೊಳೆಚಿರಂಜೀವಿ, ಕುಕವಾಡ ಬಸವರಾಜ್ ಸೇರಿದಂತೆ ಅನೇಕ ರೈತರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...