ದಾವಣಗೆರೆ | ಆದೇಶ ಉಲ್ಲಂಘಿಸಿ ಸರ್ಕಾರಿ ಕಟ್ಟಡ ತೆರವಿಗೆ ಒಪ್ಪಿಗೆ ಆರೋಪ; ಕ್ರಮಕ್ಕೆ ಆಗ್ರಹಿಸಿ ಧರಣಿ

Date:

ಸರ್ಕಾರಿ ಕಟ್ಟಡಗಳನ್ನು ನೆಲಸಮ ಮಾಡಲು ಅವಕಾಶ ಮಾಡಿಕೊಟ್ಟಿರುವ ಕುಂದೂರು ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷೆ ಸೇರಿದಂತೆ 11 ಮಂದಿ ಸದಸ್ಯರನ್ನು ಕೂಡಲೇ ಬಂಧಿಸಿ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ ಸಾಮಾಜಿಕ ಕಾರ್ಯಕರ್ತ ಕುಂದೂರು ಪ್ರಸನ್ನ ಕುಮಾರ್‌ ನೇತೃತ್ವದಲ್ಲಿ ನಾಲ್ಕು ದಿನಗಳಿಂದ ಆಹೋರಾತ್ರಿ ಧರಣಿ ನಡೆಸುತ್ತಿದ್ದಾರೆ.

“ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಕುಂದೂರು ಗ್ರಾಮ ಪಂಚಾಯಿತಿ ಕಚೇರಿ ಮುಂಭಾಗ ಇರುವ ನಾಡಕಚೇರಿ ಕಟ್ಟಡ ನೆಲಸಮಕ್ಕೆ ಸಂಬಂಧಿಸಿದಂತೆ ಸರ್ಕಾರದ ಆದೇಶವನ್ನು ಉಲ್ಲಂಘಿಸಲಾಗಿದೆ. ಸುಮಾರು 40 ಲಕ್ಷ ರೂ. ಮೌಲ್ಯದ ಮತ್ತು ಇನ್ನೂ 30 ವರ್ಷ ಬಾಳಿಕೆ ಬರುತ್ತಿದ್ದ ಎರಡು ಸರ್ಕಾರಿ ಕಟ್ಟಡಗಳನ್ನು ಸರ್ಕಾರದ ಇತರೆ ಇಲಾಖೆ ಅಧಿಕಾರಿಗಳ ಅನುಮತಿ ಪಡೆಯದೆ ಕಟ್ಟಡಗಳನ್ನು ನೆಲಸಮ ಮಾಡಲು ಅವಕಾಶ ಮಾಡಿಕೊಟ್ಟಿದ್ದಾರೆ” ಎಂದು ಪ್ರತಿಭಟನಾಕಾರರು ಆರೋಪಿಸಿದರು.

“ಕಟ್ಟಡ ತೆರವು ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರಮ ಜರುಗಿಸುವಂತೆ ಆಗ್ರಹಿಸಿ ತಾಲೂಕು ಪಂಚಾಯಿತಿ ಇಒ, ಜಿಲ್ಲಾ ಪಂಚಾಯಿತಿ ಸಿಇಒ ಹಾಗೂ ಆರ್‌ಡಿಪಿಆರ್ ಪ್ರಿನ್ಸಿಪಾಲ್ ಸೆಕ್ರೆಟರಿಗಳಿಗೆ ಮೂರು ಬಾರಿ ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಈ ಹಿನ್ನೆಲೆ ಆಹೋರಾತ್ರಿ ಧರಣಿ ನಡೆಸುತ್ತಿದ್ದೇವೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸರ್ಕಾರದ ಎರಡು ಕಟ್ಟಡಗಳನ್ನು ನೆಲಸಮ ಮಾಡಿರುವ ಗ್ರಾಮ ಪಂಚಾಯಿತಿ ಆಡಳಿತ ಮಂಡಳಿಯ 11 ಮಂದಿ ವಿರುದ್ಧ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993ರ ಪ್ರಕಾರ 157(2), 246(8)ರ ಪ್ರಕಾರ ಪ್ರಕರಣ ದಾಖಲಿಸಿ ಬಂಧಿಸಬೇಕು” ಎಂದು ಒತ್ತಾಯಿಸಿದರು.

ಸಾಮಾಜಿಕ ಕಾರ್ಯಕರ್ತ ಪ್ರಸನ್ನಕುಮಾರ್ ಅವರ ಆರೋಪಕ್ಕೆ  ಪ್ರತಿಕ್ರಿಯಿಸಿದ ಗ್ರಾಮ ಪಂಚಾಯಿತಿ ಅಧ್ಯಕ್ಷ ರಹಮತ್ ಉಲ್ಲಾಖಾನ್, ಹೊನ್ನಾಳಿ ತಹಶೀಲ್ದಾ‌ರ್ ಪತ್ರವೊಂದನ್ನು ಬರೆದಿದ್ದು, “ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರಿದ ನಾಡ ಕಚೇರಿ ಶಿಥಿಲಗೊಂಡಿದ್ದು, ಆ ಕಟ್ಟಡವನ್ನು ಮರು ನಿರ್ಮಾಣ ಮಾಡಬೇಕಾಗಿರುವುದರಿಂದ ಕೂಡಲೆ ಅದೇ ಜಾಗದಲ್ಲಿ ನೂತನ ನಾಡ ಕಚೇರಿ ನಿರ್ಮಾಣಕ್ಕೆ ತಮ್ಮ ಆಡಳಿತ ಮಂಡಲಿ ಅವಕಾಶ ಮಾಡಿಕೊಡಬೇಕೆಂದು ಪತ್ರ ಬರೆದಿದ್ದರು” ಎಂದು ಉಲ್ಲೇಖಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಶ್ರೀಗಂಧ ಬೆಳೆಯಲು ಹೊಸ ನೀತಿ: ಸಚಿವ ಈಶ್ವರ್ ಖಂಡ್ರೆ

“ಪತ್ರದನ್ವಯ ಅಂದಿನ ಗ್ರಾಮ ಪಂಚಾಯಿತಿ ಅಧ್ಯಕ್ಷ ಚಿದಾನಂದಮೂರ್ತಿ ಅಧ್ಯಕ್ಷತೆಯಲ್ಲಿ ನಡೆದ ಆಡಳಿತ ಮಂಡಳಿ ಸಭೆಯಲ್ಲಿ ಹೊನ್ನಾಳಿ ತಹಸೀಲ್ದಾರ್ ಅವರು ಗ್ರಾಮ ಪಂಚಾಯಿತಿಗೆ ಬರೆದ ಪತ್ರದ ಬಗ್ಗೆ ಚರ್ಚಿಸಿ ಸದರಿ ಗ್ರಾಮ ಪಂಚಾಯಿತಿಯ ವ್ಯಾಪ್ತಿಯಲ್ಲಿರುವ ನಾಡ ಕಚೇರಿಯ ಕಟ್ಟಡ ನಿರ್ಮಾಣ ಮಾಡಲು ಇಲಾಖೆ ನಿಯಾಮಾನುಸಾರ ಹಸ್ತಾಂತರ ಮಾಡಿಕೊಡಲು ಮೇಲಾಧಿಕಾರಿಗಳ ಗಮನಕ್ಕೆ ತರಬೇಕು ಎಂದು ಸಭೆಯಲ್ಲಿ ಚರ್ಚಿಸಲಾಗಿತ್ತು. ಇದನ್ನು ಹೊರತುಪಡಿಸಿ ನಾಡಕಚೇರಿ ನೆಲಸಮ ಮಾಡಿರುವುದಕ್ಕೂ ನಮಗೂ ಸಂಬಂಧವಿಲ್ಲ” ಎಂದು ವಿವರಿಸಿದ್ದಾರೆ.

ಧರಣಿಯಲ್ಲಿ ಸುಜ್ಞಾನಮೂರ್ತಿ, ಇತರೆ ಕಾರ್ಯಕರ್ತರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...