ದಾವಣಗೆರೆ | ಭದ್ರಾ ಡ್ಯಾಂನಿಂದ ಕೂಡಲೇ ನೀರು ಹರಿಸಿ, ರೈತರ ಹಿತಾಸಕ್ತಿ ಕಾಪಾಡಿ: ರೈತ ಮುಖಂಡ ಕೊಳೇನಹಳ್ಳಿ ಸತೀಶ್

Date:

ಭದ್ರಾ ಡ್ಯಾಂನಿಂದ ಕೂಡಲೇ ನೀರು ಹರಿಸಿ, ರೈತರ ಹಿತಾಸಕ್ತಿ ಕಾಪಾಡಿ ಎಂದು ದಾವಣಗೆರೆ ಜಿಲ್ಲಾ ರೈತ ಮುಖಂಡ ಕೊಳೇನಹಳ್ಳಿ ಸತೀಶ್ ಆಗ್ರಹಿಸಿದ್ದಾರೆ.

ದಾವಣಗೆರೆಯಲ್ಲಿ ಪತ್ರಿಕೆ ಹೇಳಿಕೆ ನೀಡಿರುವ ಅವರು, “ಆಗಸ್ಟ್ 5 ಅಥವಾ 6ರಂದು ಭದ್ರಾ ನೀರಾವರಿ ಸಲಹಾ ಸಮಿತಿ(ಐಸಿಸಿ) ಸಭೆ ಕರೆದು, ತದನಂತರ ನಾಲೆಗೆ ನೀರು ಹರಿಸಲು ತೀರ್ಮಾನಿಸಬೇಕೆಂದು ಕರ್ನಾಟಕ ನೀರಾವರಿ ನಿಗಮದ ಸಭೆಯಲ್ಲಿ ಭದ್ರಾ ಅಚ್ಚುಕಟ್ಟು ಪ್ರದೇಶದ ಶಾಸಕರು, ಸಚಿವರು ಚರ್ಚಿಸಿರುವುದು ಅವೈಜ್ಞಾನಿಕ, ದುರ್ದೈವದ ಸಂಗತಿ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ಜಿಲ್ಲೆಯ ಜನರ, ರೈತರಿಗೆ ಜೀವಜಲಕ್ಕೆ ಆಧಾರವಾದ ಭದ್ರಾ ಡ್ಯಾಂ ನೀರಿನ ಮಟ್ಟ ದಿನೇ ದಿನೆ ಹೆಚ್ಚಾಗುತ್ತಿದೆ. ನೀರಿನ ಮಟ್ಟ ಗುರುವಾರ ಬೆಳಿಗ್ಗೆ 6 ಗಂಟೆಗೆ 171 ಅಡಿ 6 ಇಂಚು ಇದ್ದು, 26,044 ಕ್ಯೂಸೆಕ್ ಒಳಹರಿವು ಇದೆ. ನಿನ್ನೆ ಅಂದರೆ ಬುಧವಾರ ಒಳಹರಿವು 15,383 ಕ್ಯೂಸೆಕ್ ಇದ್ದದ್ದು ಇಂದು ಏರಿಕೆಯಾಗಿದೆ. ಡ್ಯಾಂ ತುಂಬುವುದು ಖಚಿತವಾಗಿದೆ. ರೈತರಲ್ಲಿ ಸಂತಸ ಮನೆ ಮಾಡಿದೆ. ಮೊನ್ನೆ ನಡೆದ ರೈತರ ಸಭೆಯಲ್ಲಿ ಜಿಲ್ಲಾಧಿಕಾರಿಯವರು ಇನ್ನೊಂದೆರಡು ದಿನಗಳಲ್ಲಿ ನಾಲೆಗೆ ನೀರು ಹರಿಸಲಾಗುವುದೆಂದು ಹೇಳಿದ್ದರು. ಅದರಂತೆ ಇಂದಿನಿಂದ ನೀರು ಹರಿಸಿದರೆ, ಕಳೆದ ಹಂಗಾಮಿನಲ್ಲಿ ಭೀಕರ ಬಿಸಿಲಿನ ತಾಪಮಾನದಿಂದ ಒಣಗಿರುವ ಕೆರೆ ಕಟ್ಟೆಗಳನ್ನು ತುಂಬಿಸಿಕೊಳ್ಳಬಹುದು ಮತ್ತು ರೈತರು ಭತ್ತ ಬೀಜ ಚೆಲ್ಲಿಕೆಗೆ ಅನುಕೂಲವಾಗುತ್ತದೆ” ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಮೈಸೂರು | ಹೆಚ್ ಡಿ ಕೋಟೆ; ಮೂಲಭೂತ ಸೌಕರ್ಯ ಒದಗಿಸಲು ಆಗ್ರಹಿಸಿ ಗ್ರಾ. ಪಂ. ಮುಂದೆ ಆದಿವಾಸಿ ಜನರಿಂದ ಧರಣಿ

“ಭದ್ರಾ ಡ್ಯಾಂ ಸಂಪೂರ್ಣ ತುಂಬುವ ಎಲ್ಲ ಲಕ್ಷಣಗಳಿದ್ದು, ಸಾಮಾನ್ಯವಾಗಿ ಡ್ಯಾಂ ಗರಿಷ್ಟ ನೀರಿನ ಮಟ್ಟ 186 ಅಡಿ ಇದ್ದು, ಪೂರ್ಣ ತುಂಬಲು ಬಿಡುವುದಿಲ್ಲ. ಮುಂಜಾಗರೂಕತೆ ಕ್ರಮವಾಗಿ ನೀರಿನ ಮಟ್ಟ 182-183 ಅಡಿ ತಲುಪಿದ ಕೂಡಲೇ ಹೊಳೆಗೆ ಹರಿಸಲಾಗುತ್ತದೆ. ಇದರಿಂದ ನೀರು ವ್ಯರ್ಥವಾಗಿ ಹರಿದು ಹೋಗುತ್ತದೆ. ಆದ್ದರಿಂದ ನಾಲೆಗೆ ನೀರು ಹರಿಸಬೇಕು. ಇದರಿಂದ ರೈತರು ಕೃಷಿ ಚಟುವಟಿಕೆಗಳಿಗೆ ಸನ್ನದ್ಧರಾಗಲು, ಕೆರೆಕಟ್ಟೆಗಳಿಗೆ ನೀರು ತುಂಬಿಸಲು ಅನುಕೂಲವಾಗಲಿದೆ” ಎಂದು ರೈತ ಮುಖಂಡ ಬಿ ಎಂ ಸತೀಶ್ ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...