ದಾವಣಗೆರೆ | ನ. 8-9ರಂದು ಅಖಿಲ ಭಾರತ ದಲಿತ ಹಕ್ಕುಗಳ ಆಂದೋಲನದ ಮೊದಲ ರಾಜ್ಯ ಸಮ್ಮೇಳನ

Date:

ದಲಿತರ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ದಿಕ್ಕು, ನೆಡೆಗೆ ಸಂಬಂಧಿಸಿದಂತೆ ಚರ್ಚಿಸಲು ಅಖಿಲ ಭಾರತ ದಲಿತ ಹಕ್ಕುಗಳ ಆಂದೋಲನವು(AIDRM) ಕರ್ನಾಟಕದಲ್ಲಿ ತನ್ನ ಮೊದಲ ರಾಜ್ಯ ಸಮ್ಮೇಳನವನ್ನು ಹಮ್ಮಿಕೊಂಡಿದೆ. ಈ ಸಮ್ಮೇಳನವನ್ನು ನವೆಂಬರ್ 8, 9ರಂದು ದಾವಣಗೆರೆಯಲ್ಲಿ ಆಯೋಜಿಸಲಾಗುವುದು ಎಂದು ಎಐಡಿಆರ್‌ಎಂ ರಾಷ್ಟ್ರೀಯ ಮಂಡಳಿ ಸದಸ್ಯರಾದ ಮಹೇಶ್ ರಾಥೋಡ್ ತಿಳಿಸಿದ್ದಾರೆ.

ದಾವಣಗೆರೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ರಾಜ್ಯದಲ್ಲಿ ಹಲವಾರು ದಲಿತ ಸಂಘಟನೆಗಳು ಅಸ್ತಿತ್ವದಲ್ಲಿವೆ. ಆ ಸಂಘಟನೆಗಳಿಗೆ ಇದು ಪರ್ಯಾಯ ಸಂಘಟನೆಯಾಗಿ ಕಾರ್ಯ ನಿರ್ವಹಿಸದೇ, ಎಲ್ಲಾ ದಲಿತ ಸಮುದಾಯಗಳ ಧ್ವನಿಯಾಗಿ ದಲಿತ ಸಮುದಾಯಗಳ ಹಕ್ಕುಗಳಿಗಾಗಿ ಜೊತೆಗೂಡಿ ಆಂದೋಲನವನ್ನು ನಡೆಸುವ ವೇದಿಕೆಯಾಗಿ ಕಾರ್ಯನಿರ್ವಹಿಸುವ ಯೋಜನೆಯನ್ನು ಇಟ್ಟುಕೊಂಡಿದ್ದೇವೆ. ದಲಿತರ ಹಕ್ಕುಗಳಿಗೆ ಹೋರಾಟ ನಡೆಸುವ ಯಾವುದೇ ಸಂಘ-ಸಂಸ್ಥೆ ನಮ್ಮ ಅಖಿಲ ಭಾರತ ದಲಿತ ಹಕ್ಕುಗಳ ಆಂದೋಲನದ ಭಾಗವಾಗಿ ಕಾರ್ಯನಿರ್ವಹಿಸಬಹುದಾಗಿದೆ ಎಂದು ತಿಳಿಸಿದರು.

ಇದು ರಾಜ್ಯದ ಎಲ್ಲಾ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಜನರ ಆಂದೋಲನದ ವೇದಿಕೆಯಾಗಿ ರೂಪುಗೊಳ್ಳಲಿರುವ ಕಾರಣಕ್ಕಾಗಿ, ಈ ಪ್ರಥಮ ರಾಜ್ಯ ಸಮ್ಮೇಳನದಲ್ಲಿ ಭಾಗವಹಿಸಲು ಕರ್ನಾಟಕದ ಎಲ್ಲಾ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಸೇರಿದ ಪ್ರತಿನಿಧಿಗಳಿಗೆ ಆಹ್ವಾನ ನೀಡಲಾಗಿದೆ. ಕರ್ನಾಟಕ ರಾಜ್ಯ ದೇವದಾಸಿ ಮಹಿಳೆಯರನ್ನೂ ಸಹ ಇದು ಒಳಗೊಳ್ಳಲಿದೆ. ಈ ಸಮ್ಮೇಳನದಲ್ಲಿ ರಾಜ್ಯದ ದಲಿತ ಸಮುದಾಯಗಳು ಎದುರಿಸುತ್ತಿರುವ ಹಲವಾರು ಸಮಸ್ಯೆಗಳ ಕುರಿತು ಚರ್ಚಿಸಿ ಅವರ ಹಕ್ಕುಗಳ ರಕ್ಷಣೆಗಾಗಿ ಬಲಿಷ್ಠ ಚಳುವಳಿಯನ್ನು ಕಟ್ಟುವ ಕುರಿತು ರೂಪ ರೇಷೆಗಳನ್ನು ಸಿದ್ಧಪಡಿಸಲಾಗುವದು ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಲಲಲ

ಸಮ್ಮೇಳನದಲ್ಲಿ ಸಾರ್ವಜನಿಕ ಆಸ್ತಿ ದಲಿತರಿಗೆ ಸಮಾನವಾಗಿ ದೊರೆಯಲು ಅಗತ್ಯ ಕಾಯ್ದೆಯ ರಚನೆ, ಮಹಿಳೆಯರ ಆರೋಗ್ಯ ಮತ್ತು ರಕ್ಷಣೆ ಖಚಿತಪಡಿಸಲು, ಅವರ ಹಕ್ಕುಗಳಿಗೆ ರಕ್ಷಣೆ ಮತ್ತು ಜೀವನ ಕ್ರಮವನ್ನು ಸಮಾನವಾಗಿಸುವುದು, ಪರಿಶಿಷ್ಟ ಜಾತಿ-ಜನರ ಆಹಾರ, ಶುದ್ಧ ಕುಡಿಯುವ ನೀರು, ಬಟ್ಟೆ, ವಾಸಕ್ಕೆ ಮನೆ, ಸಾರ್ವಜನಿಕ ಆರೋಗ್ಯ, ಸಾರ್ವಜನಿಕ ಚಿಕಿತ್ಸೆ, ಸಾಮಾಜಿಕ ಭದ್ರತೆ, ಸಾಮಾಜಿಕ ಸೇವೆಗಳು, ಸಾರ್ವಜನಿಕ ಸೌಕರ್ಯಗಳು, ಸಾರ್ವಜನಿಕ ಸ್ಥಳಗಳನ್ನು ಒದಗಿಸಬೇಕು. ಗ್ರಾಮೀಣ ಭೂರಹಿತರಿಗೆ ಜೀವನಾವಶ್ಯಕ ಕೂಲಿ ಮತ್ತು ದಲಿತರಿಗೆ ಐದು ಎಕರೆ ಭೂ ಒಡೆತನವನ್ನು ನೀಡಬೇಕು. ಕೊಳವೆ ಬಾವಿ ಸೌಲಭ್ಯ ಒದಗಿಸಿ ಕೊಡಬೇಕು ಎಂದು ಆಗ್ರಹಿಸಿದರು.

ಇದನ್ನು ಓದಿದ್ದೀರಾ? ಶಿವಮೊಗ್ಗ | ಕಾರು ಅಡ್ಡ ಹಾಕಿದ್ದಕ್ಕೆ ಬಾನೆಟ್‌ ಮೇಲೆ ಟ್ರಾಫಿಕ್‌ ಪೊಲೀಸ್ ಸಿಬ್ಬಂದಿಯನ್ನೇ ಎಳೆದೊಯ್ದ ಚಾಲಕ!

1976ರ ಜೀತ ನಿರ್ಮೂಲನಾ ಪದ್ಧತಿಯ ಜಾರಿ, ಬಾಲ ಕಾರ್ಮಿಕ ದುಡಿಮೆ ಪದ್ಧತಿಯ ರದ್ದು, ಸರ್ಕಾರದ ಎಲ್ಲಾ ಖರೀದಿ ಹಾಗೂ ಗುತ್ತಿಗೆಗಳಲ್ಲಿ ಪರಿಶಿಷ್ಟ ಜಾತಿ (ಎಸ್.ಸಿ)ಗಳಿಗೆ ಸರಿಯಾದ ಮೀಸಲಾತಿ, ನೂತನ ಶಿಕ್ಷಣ ನೀತಿ ಹಿಂತೆಗೆದುಕೊಳ್ಳಲು, ಖಾಸಗಿ ಕ್ಷೇತ್ರದಲ್ಲಿ ಮೀಸಲಾತಿ, ಮಲ ಹೊರುವ ಹಾಗೂ ಒಳ ಚರಂಡಿ (ಮ್ಯಾನುವೇಲ್ ಸ್ಕ್ಯಾವೆಂಜರ್) ಸ್ವಚ್ಛ ಗೊಳಿಸುವ ಕೆಲಸ ಮಾಡುವುದನ್ನು ರದ್ದುಗೊಳಿಸಲು, ಎಸ್‌ಸಿ-ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯನ್ನು ಸಮರ್ಪಕವಾಗಿ ಜಾರಿ ಸೇರಿದಂತೆ ಹಲವು ವಿಷಯಗಳ ಬಗ್ಗೆ ಚರ್ಚಿಸಲಾಗುವುದು. ಮತ್ತು ಅದಕ್ಕೆ ಸಂಬಂಧಿಸಿದಂತೆ ನಿರ್ಣಯ ಕೈಗೊಂಡು ಸರ್ಕಾರಕ್ಕೆ ಕ್ರಮ ಕೈಗೊಳ್ಳಲು ಒತ್ತಾಯಿಸಲಾಗುವುದು ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ರಾಜ್ಯ ಸಂಚಾಲಕ ವಾಸು ಅವರಗೆರೆ, ರಾಜು ಕೆರೆಯಾಗಲಳ್ಳಿ, ಲಕ್ಷ್ಮಣ ವಿ, ಪರಶುರಾಮ, ಜಯಣ್ಣ, ಮಂಜು ಡಿ, ಶಾರದಮ್ಮ, ನಾಗರಾಜ, ಗುರುಮೂರ್ತಿ, ಹನುಮಂತಪ್ಪ , ಚಂದ್ರಪ್ಪ ಹಾಗೂ ಇತರರು ಹಾಜರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...