ದಾವಣಗೆರೆ | ಗಾಂಧಿ ಜಯಂತಿ ಆಚರಣೆ

Date:

ಭಾರತಕ್ಕೆ ಸ್ವಾತಂತ್ರ್ಯಕ್ಕೆ ತಂದುಕೊಟ್ಟ ಗಾಂಧೀಜಿಯವರ ಸತ್ಯ ಮತ್ತು ಅಹಿಂಸಾ ತತ್ವಗಳು ಇಂದಿಗೂ ಪ್ರಸ್ತುತವಾಗಿವೆ ಎಂದು ದಾವಣಗೆರೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ರಾಜೇಶ್ವರಿ ಎನ್ ಹೆಗಡೆ ಅಭಿಪ್ರಾಯಪಟ್ಟರು.

ದಾವಣಗೆರೆ ಜಿಲ್ಲಾ ನ್ಯಾಯಾಲಯಗಳ ಆವರಣದಲ್ಲಿ ರಾಷ್ಟ್ರಪಿತ ಮಹಾತ್ಮಗಾಂಧಿ ಜಯಂತಿ ಅಂಗವಾಗಿ ಆಯೋಜಿಸಲಾಗಿದ್ದ ಸ್ವಚ್ಛತಾ ಸೇವಾ ದಿವಸ್ ನಿಮಿತ್ತ ಶ್ರಮದಾನ ನಡೆಸಿ, ಮಾನವ ಸರಪಳಿ, ಚಿಂತನ ಮಂಥನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

“ನಾವೆಲ್ಲರೂ ಜೀವನದಲ್ಲಿ ಸತ್ಯ ಮತ್ತು ಅಹಿಂಸಾ ತತ್ವಗಳನ್ನು ಪಾಲಿಸುವ ಮೂಲಕ ನ್ಯಾಯ ಮತ್ತು ಸೌಹಾರ್ದತೆಯ ಜಗತ್ತಿನ ನಿರ್ಮಾಣಕ್ಕೆ ಶ್ರಮಿಸಬೇಕು. ಸರಳತೆ ಮತ್ತು ಸತ್ಯದ ಮಹತ್ವನ್ನು ಕಲಿಸಿದ ಮಹಾತ್ಮಾ ಗಾಂಧಿಯವರ ಆದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಅವರ ತತ್ವಗಳಿಗೆ ಬದ್ದರಾಗಿರೋಣ. ವೈಯಕ್ತಿಕ ಯೋಗಕ್ಷೇಮ ಮತ್ತು ರಾಷ್ಟ್ರೀಯ ಪ್ರಗತಿ ಎರಡಕ್ಕೂ ಸ್ವಚ್ಛತೆ ಅತ್ಯಗತ್ಯವೆಂದು ಗಾಂಧೀಜಿ ಬಲವಾಗಿ ನಂಬಿದ್ದರು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಎಂ ಹೆಚ್ ಅಣ್ಣಯ್ಯನವರು ಮಾತನಾಡಿ, “ಗಾಂಧಿಜೀಯವರು ಹಲವಾರು ಚಳುವಳಿಗಳ ಮೂಲಕ ಶಾಂತಿಯುತ ಹೋರಾಟ ಕಟ್ಟಿ, ಶಾಂತಿ ಮತ್ತು ಅಹಿಂಸಾ ಮಾರ್ಗಗಳ ಮೂಲಕ ಸ್ವಾತಂತ್ರ್ಯ ಸಾಧಿಸಿದ್ದು, ಜಗತ್ತಿನ ಇತಿಹಾಸವಾಗಿದೆ” ಎಂದು ತಿಳಿಸಿದರು.

ಜಿಲ್ಲಾ ನ್ಯಾಯಾಲಯ ಮುಖ್ಯ ಆಡಳಿತಾಧಿಕಾರಿ ಬಿ ಶ್ರೀನಿವಾಸ್ ಪ್ರಾಸ್ತಾವಿಕವಾಗಿ ಮಾತನಾಡಿ, ಗಾಂಧಿಜೀಯವರು ತಮ್ಮ ಬದುಕು ಹಾಗೂ ಚಿಂತನೆಗಳಲ್ಲಿ ನುಸುಳಿದ ಹಲವು ಬಗೆಯ ವೈರುಧ್ಯಗಳಿಗೆ ಸ್ವತಃ ಪರೀಕ್ಷೆಗೆ ಒಳಪಡಿಸಿಕೊಂಡ ಸ್ವಪರೀಕ್ಷಕ. ಆಳವಾಗಿ ಚಿಂತಿಸಿ ಪ್ರಯೋಗ ಮಾಡಿದ ಪ್ರಯೋಗ ಶೀಲ. ಒಟ್ಟಾರೆ ಅವರನ್ನು ಬಣ್ಣಿಸಲು ಹೊರಟರೆ ಅವರ ವ್ಯಕ್ತಿತ್ವದ ಹಲವು ಮುಖಗಳ ಪರಿಚಯವಾಗುತ್ತದೆ” ಎಂದು ಹೇಳಿದರು.

ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಲ್ ಎಚ್ ಅರುಣ್‌ಕುಮಾರ್ ಮಾತನಾಡಿ, “ಗಾಂಧಿಯವರು ಕಾನೂನು ಕಲಿತು ಸ್ಪಷ್ಟವಾಗಿ ಯೋಚಿಸಿದ ನ್ಯಾಯಯುತ ಹೋರಾಟವನ್ನು ತರ್ಕಬದ್ದವಾಗಿ ಕಟ್ಟಿದ ಸತ್ಯ ಪ್ರತಿಪಾದನೆ ಮಾಡಿದ ವ್ಯಕ್ತಿ. ಗಾಂಧಿಜೀ ನ್ಯಾಯವಾದಿಯಾಗಿ, ಪತ್ರಕರ್ತರಾಗಿ, ಬರಹಗಾರರಾಗಿ, ತತ್ವಜ್ಞಾನಿಯಾಗಿ ನಮ್ಮೊಡನೆ ಇದ್ದಾರೆ. ಇತಿಹಾಸದಲ್ಲಿ ಮೊಟ್ಟಮೊದಲ ಬಾರಿಗೆ ಒಂದು ದೇಶದ ಸ್ವಾತಂತ್ರ್ಯ ಹೋರಾಟವನ್ನು ಸಾಮಾಜಿಕ ಪರಿವರ್ತನೆಯ ಹೋರಾಟವನ್ನಾಗಿ ಪರಿವರ್ತಿಸಿ, ದೇಶದ ಮೂಲ ಕಾಯಿಲೆಗಳಾದ ಅಸ್ಪೃಶ್ಯತೆ, ಅಸಮಾನತೆ, ಮೂಲಭೂತವಾದ, ಕೋಮುವಾದಗಳನ್ನು ನಿವಾರಣೆ ಮಾಡಲು ಶ್ರಮಿಸಿದರು” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಮಂಡ್ಯ | ಬೀದಿ ನಾಯಿಗಳ ದಾಳಿಗೆ ಬಡರೈತನ ಮೇಕೆಗಳು ಬಲಿ

ಕಾರ್ಯಕ್ರಮದಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ ಮಾ.ಕರೆಣ್ಣವರ್, ಜಿಲ್ಲಾ ನ್ಯಾಯಾಧೀಶರಾದ ಆರ್ ಎನ್ ಪ್ರವೀಣ್‌ಕುಮಾರ್, ಶ್ರೀರಾಮ ನಾರಾಯಣ ಹೆಗಡೆ, ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರಾದ ಟಿ ಎಂ ನಿವೇದಿತಾ, ನ್ಯಾಯಾಧೀಶರಾದ ರೇಷ್ಮಾ, ನಾಗೇಶ್, ಅಮರ್, ಗಾಯತ್ರಿ, ಮಲ್ಲಿಕಾರ್ಜುನ್, ಪ್ರಶಾಂತ್, ಸಿದ್ದರಾಜ್, ನಾಝೀಯಾ ಕೌಸರ್, ವಕೀಲರ ಸಂಘದ ಕಾರ್ಯದರ್ಶಿ ಎಸ್ ಬಸವರಾಜ್, ಸಹಕಾರ್ಯದರ್ಶಿ ಎ ಎಸ್ ಮಂಜುನಾಥ್, ಕಾರ್ಯಕಾರಿ ಸಮಿತಿ ಸದಸ್ಯರಾದ ಕೆ ಎಂ ನೀಲಕಂಠಯ್ಯ, ಎಂ ರಾಘವೇಂದ್ರ, ಆರ್ ಭಾಗ್ಯಲಕ್ಷ್ಮೀ, ಸೇರಿದಂತೆ ನ್ಯಾಯಾಲಯದ ಸಿಬ್ಬಂದಿಗಳು, ವಕೀಲರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...