ದಾವಣಗೆರೆ | ನಾಟಕ ಬಿಟ್ಟು ಪರಿಹಾರ ನೀಡಿ, ಇಲ್ಲವೇ ಮತ ಕೇಳಬೇಡಿ: ಕುರುಬೂರು ಶಾಂತಕುಮಾರ್

Date:

ಬರಗಾಲದಿಂದ ತತ್ತರಿಸಿ ರುವ ರೈತರ ಸಂಕಷ್ಟ ಆಲಿಸಲು ಯಾರು ಇಲ್ಲ ಅಧಿಕಾರ ಹಿಡಿಯಲು ಪೈಪೋಟಿ – ನಡೆಸುತ್ತಿದ್ದಾರೆ. ರಾಜಕೀಯ ಕ್ಷೇತ್ರ ವ್ಯಾಪಾರಕ್ಕಿಂತಲೂ ಹೆಚ್ಚು ಲಾಭಗಳಿಸುವ ಕ್ಷೇತ್ರವಾಗಿದೆ ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟ, ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಆಕ್ರೋಶ ವ್ಯಕ್ತಪಡಿಸಿದರು.

ದಾವಣಗೆರೆ ನಗರದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, “ಕೇಂದ್ರ ಹಾಗೂ ಈ ರಾಜ್ಯ ಸರ್ಕಾರಗಳು ರೈತರ ಬರದ ಸಂಕಷ್ಟವನ್ನು ಈ ಕಾಲದಲ್ಲಿ ಜಗಳವಾಡುತ್ತಾ ಮನರಂಜನೆ ನೀಡುತ್ತಿದ್ದಾರೆ. ಇದರಿಂದ ರೈತರ ಹೊಟ್ಟೆ ತುಂಬುವುದಿಲ್ಲ. ʼಈ ನಾಟಕ ಬಿಡಿ, ಪರಿಹಾರ ನೀಡಿ. ಇಲ್ಲವೇ ಮತ ಕೇಳಲು ಬರಬೇಡಿʼ ಎಂದು ಮತ ಕೇಳಲು ಬರುವ ಅಭ್ಯರ್ಥಿಗಳನ್ನು ಊರಿಂದ ಹೊರಗಿಡಿ” ಎಂದು ರೈತರಿಗೆ ಕರೆ ನೀಡಿದರು.

“ಬರಗಾಲದಿಂದ ತತ್ತರಿಸಿರುವ ರೈತರ ಸಂಕಷ್ಟ ಆಲಿಸಲು ಯಾರೂ ಇಲ್ಲವಾಗಿದ್ದಾರೆ. ರಾಜ್ಯದಲ್ಲಿ ದನಕರುಗಳಿಗೆ ಕುಡಿಯುವ ನೀರು, ಮೇವು ಸಿಗದಂತಾಗಿದೆ. ಅಧಿಕಾರಿಗಳು ಚುನಾವಣೆ ಕಾರಣ ಹೇಳಿ ರೈತರನ್ನು ನಿರ್ಲಕ್ಷ್ಯ ಮಾಡಿದ್ದಾರೆ. ರಾಜಕೀಯ ಪಕ್ಷದ ಮುಖಂಡರು ಅಧಿಕಾರ ಹಿಡಿಯುವ ಹುಚ್ಚಿನಲ್ಲಿ ತೇಲಾಡುತ್ತಿದ್ದಾರೆ. ಬರಗಾಲದ ನೀರಿನ ಸಮಸ್ಯೆಯಿಂದ ರೈತರ ಬೆಳೆಗಳು ಒಣಗುತ್ತಿವೆ. ಕೊಳವೆ ಬಾವಿಗಳಲ್ಲಿ ನೀರು ಹಿಂಗುತ್ತಿವೆ. ಕೃಷಿ ಕ್ಷೇತ್ರ ದುರ್ಬಲವಾಗುತ್ತಿದೆ. ಇದು ರಾಜಕೀಯ ಪಕ್ಷಗಳಿಗೆ ಕಾಣುತ್ತಿಲ್ಲವೇ, ರೈತರು ಎಚ್ಚೆತ್ತುಕೊಂಡು ಸ್ವಾಭಿಮಾನದಿಂದ ಹಳ್ಳಿಗಳಲ್ಲಿ ಗುಡಿ ಗೋಪುರ ಕಟ್ಟುವ ಚಿಂತನೆ ಮಾಡುವ ಬದಲು, ಕೆರೆ ಕಟ್ಟೆಗಳ ಹೂಳೆತ್ತುವ ಮೂಲಕ ಪುನಶ್ವೇತನಗೊಳಿಸುವ ಹಾಗೂ ಹೊಸದಾಗಿ ಕೆರೆಕಟ್ಟೆ ನಿರ್ಮಿಸುವ ಕೆಲಸದಲ್ಲಿ ಶ್ರದ್ದೆ ವಹಿಸಿದರೆ ಮುಂದಿನ ತಲೆಮಾರಿಗೆ ಕೊಳವೆ ಬಾವಿಗಳಲ್ಲಿ ನೀರು ಶೇಖರಣೆಯಾಗಿ ಕೃಷಿ ಕ್ಷೇತ್ರ ಸಮೃದ್ಧಿಯಾಗಲು ಸಹಕಾರಿಯಾಗುತ್ತದೆ. ಇಂದಿನ ರಾಜಕಾರಣಿಗಳಿಗೆ ಇದೆಲ್ಲ ಕಾಣುವುದಿಲ್ಲ. ಅವರಿಗೆ ಬೇಕಾಗಿಯೂ ಇಲ್ಲ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬಂಡವಾಳ ಶಾಹಿಗಳ ₹14 ಲಕ್ಷ ಕೋಟಿ ಸಾಲ ಮನ್ನಾ ಮಾಡಿರುವ ಕೇಂದ್ರ ಸರ್ಕಾರ ಸಂಕಷ್ಟದಲ್ಲಿರುವ ರೈತರ ಸಾಲ ಮನ್ನಾ ಮಾಡದೆ ನಿರ್ಲಕ್ಷ್ಯ ತೋರುತ್ತಿದೆ. ಪ್ರವಾಹ ಹಾನಿ ಅತಿವೃಷ್ಟಿ, ಅನಾವೃಷ್ಟಿ ಬರಗಾಲದ ನಷ್ಟ ಪರಿಹಾರದ ಬಗ್ಗೆ ಯಾವುದೇ ಬಗೆಯ ಗಂಭೀರ ಚಿಂತನೆ ನಡೆಸುತ್ತಿಲ್ಲ. ಈ ರೀತಿಯಾಗಿ ಸರ್ಕಾರಗಳು ರೈತರನ್ನು ನಿರ್ಲಕ್ಷ್ಯ ಮಾಡುತ್ತಿವೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಮೋದಿ-ಅಮಿತ್ ಶಾ ಬಳಿ ಮನುಷ್ಯರನ್ನು ಶುದ್ಧಗೊಳಿಸಬಲ್ಲ ವಾಷಿಂಗ್ ಮಷೀನ್ ಇದೆ : ಮಲ್ಲಿಕಾರ್ಜುನ ಖರ್ಗೆ

ಪತ್ರಿಕಾಗೋಷ್ಟಿಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಕಾರ್ಯದರ್ಶಿ ಬಲ್ಲೂರ್ ರವಿಕುಮಾರ್, ಪೂಜಾರ್, ಅಂಜನಪ್ಪ ಹತ್ತಳ್ಳಿ, ದೇವರಾಜ್, ಬಸವರಾಜ್, ಅಶೋಕ್, ವಕೀಲ ಮಂಜುನಾಥ್, ತಿರುಮಲ್ಲೇಶ್, ಕರಬಸಪ್ಪ, ಬಸಣ್ಣ ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...