ದಾವಣಗೆರೆ | ಸರ್ವಾಂಗೀಣ ಅಭಿವೃದ್ಧಿಗೆ ಅನುದಾನ; ಸಿಎಂ ಬಳಿ ನಿಯೋಗ ಹೋಗುವಂತೆ ಶಾಸಕ ಬಿ ಪಿ ಹರೀಶ್ ಸಲಹೆ

Date:

ಹರಿಹರ ನಗರದ ಸರ್ವಾಂಗೀಣ ಅಭಿವೃದ್ಧಿಗಾಗಿ ನಗರಸಭೆ ಸದಸ್ಯರೆಲ್ಲ ಒಟ್ಟಾಗಿ ಸಿಎಂ ಸಿದ್ದರಾಮಯ್ಯನವರ ಬಳಿಗೆ ನಿಯೋಗ ಹೋಗಿ ಅನುದಾನ ಕೋರಿಕೆ ಇಡೋಣ ಎಂದು ಶಾಸಕ ಬಿ ಪಿ ಹರೀಶ್ ಸಲಹೆ ನೀಡಿದರು.

ದಾವಣಗೆರೆ ಜಿಲ್ಲೆಯ ಹರಿಹರ ನಗರಸಭೆ ಸಭಾಂಗಣದಲ್ಲಿ ನೂತನ ನಗರಸಭೆ ಅಧ್ಯಕ್ಷರು ಮತ್ತು ಉಪಾಧ್ಯಕ್ಷರನ್ನು ಅಭಿನಂದಿಸಿ ಮಾತನಾಡಿ, “ಸಾರ್ವಜನಿಕರು ನಗರಸಭೆಯ ಆಡಳಿತ ವ್ಯವಸ್ಥೆ ನೋಡಿ ಬೇಸರಗೊಂಡಿದ್ದಾರೆ. ನಗರಸಭೆ ವ್ಯವಸ್ಥೆ ಹದಗೆಟ್ಟಿದೆ. ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲವಾದರಿಂದ, ಆಡಳಿತ ವ್ಯವಸ್ಥೆ ಸಂಪೂರ್ಣವಾಗಿ ಅಧೋಗತಿಯತ್ತ ಸಾಗಿದೆ” ಎಂದು ಹೇಳಿದರು.

“ಹಲವಾರು ಗ್ರಾಮೀಣ ಭಾಗದ ಕೆರೆಗಳಿಗೆ ಹರಿಹರದಿಂದಲೇ ನೀರು ಸರಬರಾಜಾಗುತ್ತದೆ. ಆದರೆ, ಹರಿಹರದ ಜನತೆಗೆ ಬೇಸಿಗೆ ಕಾಲದಲ್ಲಿ ಕುಡಿಯಲು ನೀರಿಲ್ಲದೇ ಪರದಾಡುವಂತಾಗಿದೆ. ಇದಕ್ಕೆ ಯಾವುದೇ ಯೋಜನೆ, ನೀರು ಶೇಖರಣಾ ಸಂಗ್ರಹಾಗಾರ ಇಲ್ಲ. ಮೊದಲು ಇಲ್ಲಿನ ಜನರಿಗೆ ನೀರು ಕೊಟ್ಟು ನಂತರ ಜಗಳೂರು ಸೇರಿದಂತೆ ಇತರೆ ಕೆರೆಗಳಿಗೆ ಸರಬರಾಜಾಗುವ ನಿಟ್ಟಿನಲ್ಲಿ ಎಲ್ಲರೂ ಒಗ್ಗೂಡಿಕೊಂಡು ಹೋರಾಟ ಮಾಡಬೇಕಿದೆ. ಕೆರೆಗಳಿಗೆ ನೀರು ಸರಬರಾಜಾಗುವ ಜಾಕ್‌ವೆಲ್ ಹತ್ತಿರ ಪ್ರತ್ಯೇಕವಾದ ಪೈಪ್‌ಲೈನ್ ವ್ಯವಸ್ಥೆ ಮಾಡಿಕೊಂಡು ಆ ಮೂಲಕ ನಗರದ ಜನತೆಗೆ ನೀರು ಸರಬರಾಜು ಮಾಡಬೇಕಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಮಂಡ್ಯ | ಕೆ ಆರ್ ಪೇಟೆ ಪುರಸಭೆ ಉಪಾಧ್ಯಕ್ಷರಾಗಿ ಸೌಭಾಗ್ಯ ಉಮೇಶ್ ಆಯ್ಕೆ

“ನಗರದಲ್ಲಿ ಹರಿಹರ-ದಾವಣಗೆರೆ ವಾಟರ್ ಹೌಸ್ ಬಳಿ ಇರುವ ಜಾಗದಲ್ಲಿ ನೀರು ಶೇಖರಣಾ ಘಟಕದ ಸ್ಥಾಪನೆ ವಿಚಾರಕ್ಕೆ ಸಂಬಂಧಿಸಿದಂತೆ ತಹಶೀಲ್ದಾರ್ ನೀಲ ನಕ್ಷೆಯನ್ನು ತಯಾರಿಸಿದ್ದು, ಶೇಖರಣಾ ಘಟಕಕ್ಕೆ ಅದು ಸಮಂಜಸವಾದ ಸ್ಥಳವಲ್ಲವೆಂದು ತಜ್ಞರು ನನಗೆ ವರದಿ ನೀಡಿದ್ದಾರೆ. ನಗರಸಭೆಯ ಸರ್ವ ಸದಸ್ಯರನ್ನು ಒಗ್ಗೂಡಿಸಿಕೊಂಡು ಸಿಎಂ ಬಳಿ ನಿಯೋಗ ಹೋಗಿ, ಕುಡಿಯುವ ನೀರಿನ ಶೇಖರಣಾ ಘಟಕ ಸ್ಥಾಪನೆ ಸೇರಿದಂತೆ ನಗರದ ಸರ್ವಾಂಗೀಣ ಅಭಿವೃದ್ಧಿಗೆ ಎಲ್ಲ ಬಗೆಯ ಸಹಕಾರವನ್ನು ನೀಡುವಂತೆ ಕೋರಿಕೆ ಇಡೋಣ” ಎಂದು ತಿಳಿಸಿದರು.

ಇದೇ ವೇಳೆ ಹರಿಹರ ನಗರಸಭೆಗೆ ನೂತನವಾಗಿ ಆಯ್ಕೆಯಾದ ಅಧ್ಯಕ್ಷೆ ಮತ್ತು ಉಪಾಧ್ಯಕ್ಷರಿಗೆ ಸನ್ಮಾನಿಸಿದರು. ನಗರಸಭೆ ಅಧ್ಯಕ್ಷರಾಗಿ ಜೆಡಿಎಸ್ ಕವಿತಾ ಮಾರುತಿ ಬೇಡರ್ ಮತ್ತು ಉಪಾಧ್ಯಕ್ಷರಾಗಿ ಜಂಬಣ್ಣಗುತ್ತೂರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...