ದಾವಣಗೆರೆ | ಭಾರೀ ಮಳೆ; ಸಂಕಷ್ಟದಲ್ಲಿರುವ ಕುಟುಂಬಗಳ ಆಸರೆಗೆ ಶಾಸಕ ಹರೀಶ್‌ ಸೂಚನೆ

Date:

ಬಿಡುವಿಲ್ಲದೆ ಸುರಿಯುತ್ತಿರುವ ಭಾರೀ ಮಳೆಗೆ ಗ್ರಾಮೀಣ ನಗರ ಪ್ರದೇಶಗಳಲ್ಲಿ ಮನೆಗಳು ಕುಸಿದು ಬಿದ್ದಿದ್ದು, ಬೆಳೆಹಾನಿ ಉಂಟಾಗಿದೆ. ಇದರಿಂದ ರೈತರು ಸಂಕಷ್ಟ ಅನುಭವಿಸುತ್ತಿದ್ದಾರೆ. ಕೂಡಲೇ ಜಿಲ್ಲಾ ಮತ್ತು ತಾಲೂಕು ಆಡಳಿತ ಹಾನಿಗೊಳಗಾದ ಪ್ರದೇಶಗಳಿಗೆ ತೆರಳಿ ಸಂಕಷ್ಟದಲ್ಲಿರುವ ಜನರಿಗೆ ನೆರವಾಗಬೇಕೆಂದು ದಾವಣಗೆರೆ ಜಿಲ್ಲೆಯ ಹರಿಹರ ಶಾಸಕ ಬಿ ಪಿ ಹರೀಶ್ ಸೂಚನೆ ನೀಡಿದರು.

“ಭಾರೀ ಮಳೆಗೆ ಹಳ್ಳ-ಕೊಳ್ಳ, ಚರಂಡಿಗಳು ತುಂಬಿದ್ದು, ನದಿಗಳಲ್ಲಿ ನೀರಿನ ಪ್ರಮಾಣ ಹೆಚ್ಚಳವಾಗುತ್ತಿದೆ. ತಗ್ಗು ಪ್ರದೇಶದಲ್ಲಿರುವಂತ ನಾಗರಿಕರು, ರೈತರು ನದಿ ತೀರಕ್ಕೆ ಜನಜಾನುವಾರುಗಳನ್ನು ಬಿಡದಂತೆ ಜಾಗೃತರಾಗಬೇಕು. ಕೆಂಚನಹಳ್ಳಿ, ಮಲೆಬೆನ್ನೂರು, ಎಳೆ ಹೊಳೆ, ಬನ್ನಿಕೋಡು ಭಾನುವಳ್ಳಿ, ರಾಜನಹಳ್ಳಿ, ವಾಸನ, ಉಕ್ಕಡಗಾತ್ರಿ, ಸೇರಿದಂತೆ ಸಾಕಷ್ಟು ಪ್ರದೇಶದಲ್ಲಿ ಮನೆಗಳು ಕುಸಿದು ಬೆಳೆ ಹಾನಿ, ಸಾವು ಸಂಭವಿಸಿ ಸಾರ್ವಜನಿಕರು ಸಂಕಷ್ಟಕ್ಕೆ ಸಿಲುಕಿಕೊಂಡಿದ್ದಾರೆ” ಎಂದು ತಿಳಿಸಿದರು.

ಶಾಸಕ ಬಿಪಿ ಹರೀಶ್ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡುವ ಸಂದರ್ಭದಲ್ಲಿ ಇಕ್ಕಟ್ಟಿನ ಪ್ರದೇಶಗಳಲ್ಲಿ ತಮ್ಮ ವಾಹನ ಸಿಲುಕಿದ ಕಾರಣ ದ್ವಿಚಕ್ರ ವಾಹನನೊಂದಿಗೆ ಸಂಚರಿಸಿ ಮನೆ ಕುಸಿದ ಹಾಗೂ ಮೃತಪಟ್ಟ ಕುಟುಂಬದ ಮನೆಗಳಿಗೆ ತೆರಳಿ ಸಾಂತ್ವಾನ ಹೇಳಿ ಧೈರ್ಯ ತುಂಬುವ ಕೆಲಸ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ವಿದ್ಯಾರ್ಥಿಗಳು ಜ್ಞಾನಾರ್ಜನೆಗೆ ಒತ್ತು ಕೊಡಬೇಕು

“ಮನೆ ಕಳೆದುಕೊಂಡ ಕುಟುಂಬದವರಿಗೆ ಪರಿಹಾರ ನೀಡಬೇಕೆಂದು ತಾಲೂಕು, ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದೇನೆ. ಕುಂಬಳೂರಿನಲ್ಲಿ ಕೆಂಚಪ್ಪನವರ ಪುತ್ರಿ ಒಂದು ವರ್ಷದ ಸ್ಫೂರ್ತಿ ಮೃತಪಟ್ಟ ಹಿನ್ನೆಲೆಯಲ್ಲಿ ಪ್ರಕೃತಿ ವಿಕೋಪ ಯೋಜನೆಯಡಿಯಲ್ಲಿ ಪರಿಹಾರ ನೀಡಲಾಗಿದೆ” ಎಂದು ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...