ದಾವಣಗೆರೆ | ಗುಡುಗು ಸಹಿತ ಭಾರೀ ಮಳೆ; ಅಪಾರ ಬೆಳೆ ಹಾನಿ

Date:

ದಾವಣಗೆರೆ ಜಿಲ್ಲೆಯಲ್ಲಿ ಬಿರುಗಾಳಿ, ಗುಡುಗು, ಸಿಡಿಲು ಸಹಿತ ಭಾರೀ ಮಳೆಯಾಗಿದ್ದು ಭತ್ತ, ಅಡಿಕೆ, ಬಾಳೆ ಸೇರಿದಂತೆ ಅಪಾರ ಪ್ರಮಾಣದ ಬೆಳೆ ಹಾನಿ ಸಂಭವಿಸಿದೆ. ಜಿಲ್ಲೆಯಲ್ಲಿ ಮಳೆ ಹಾನಿಯಿಂದ ಒಟ್ಟು ₹10.90 ಲಕ್ಷಕ್ಕೂ ಹೆಚ್ಚು ನಷ್ಟವಾಗಿದೆ.

ದಾವಣಗೆರೆ ತಾಲೂಕಿನ ಕೊಡಗನೂರು ಗ್ರಾಮದಲ್ಲಿ 3 ಎಕರೆ, ಜರೀಕಟ್ಟೆ ಗ್ರಾಮದಲ್ಲಿ 2.15 ಎಕರೆಯಲ್ಲಿ ಅಡಿಕೆ ಬೆಳೆ ಹಾಳಾಗಿದ್ದು, 1 ಲಕ್ಷ ರೂ. ನಷ್ಟವಾಗಿದೆ. ಗಿರಿಯಾಪುರದಲ್ಲಿ ಜಿ ಎಸ್ ಅಜ್ಜಪ್ಪ ಹಾಗೂ ನಾಗರಾಜಪ್ಪ ಅವರಿಗೆ ಸೇರಿದ ಹತ್ತಾರು ಎಕರೆ ಪ್ರದೇಶದ ಭತ್ತ ನಾಶವಾಗಿದೆ ಎಂದು ವರದಿಯಾಗಿದೆ.

ಹರಿಹರ ತಾಲೂಕು ವ್ಯಾಪ್ತಿಯ ಇಂಗಳಗೊಂದಿ, ಧೂಳೆಹೊಳೆ ಗ್ರಾಮದಲ್ಲಿ 30 ಎಕರೆ ಭತ್ತದ ಬೆಳೆ ಹಾನಿಯಾಗಿದ್ದು, ₹1.80 ಲಕ್ಷ ಹಾನಿಯಾಗಿರುವುದಾಗಿ ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬೆಂಗಳೂರಿಗೆ ಅಗತ್ಯವಿದೆ 658 ಕಿ.ಮೀ ಒಳಚರಂಡಿ

ಜಗಳೂರು ತಾಲೂಕು ವ್ಯಾಪ್ತಿಯಲ್ಲಿ ಬಿರುಗಾಳಿ ಸಹಿತ ಮಳೆಗೆ 2 ಕಚ್ಚಾ ಮನೆ, 15 ಎಕರೆ ಬಾಳೆ, 5 ಎಕರೆಯಲ್ಲಿ ಬೆಳೆದಿದ್ದ ಅಡಿಕೆ ಬೆಳೆ ನಷ್ಟವಾಗಿದ್ದು, 6 ಲಕ್ಷ ನಷ್ಟವಾಗಿದೆ. ಹೊನ್ನಾಳಿ ತಾಲೂಕಿನಲ್ಲಿ 20 ಎಕರೆ ಭತ್ತ ಹಾನಿಯಾಗಿದ್ದು, 2 ಲಕ್ಷ ರೂ. ನಷ್ಟವಾಗಿದೆ. ಚನ್ನಗಿರಿ ತಾಲೂಕು ವ್ಯಾಪ್ತಿಯಲ್ಲಿ 1 ಎಕರೆ ಬಾಳೆ ಹಾನಿಯಾಗಿದ್ದು, ₹10,000 ನಷ್ಟವಾಗಿದೆ.

ಹರಿಹರ ತಾಲೂಕಿನಲ್ಲಿ 14.5 ಮಿ.ಮೀ, ಹೊನ್ನಾಳಿಯಲ್ಲಿ 13.1 ಮಿ.ಮೀ. ದಾವಣಗೆರೆಯಲ್ಲಿ 3 ಮಿ.ಮೀ, ನ್ಯಾಮತಿಯಲ್ಲಿ 12.1 ಮಿ.ಮೀ, ಜಗಳೂರಿನಲ್ಲಿ 5 ಮಿ.ಮೀ ಮಳೆಯಾಗಿರುವುದು ವರದಿಯಾಗಿದೆ‌.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...