ದಾವಣಗೆರೆ | ಭಾರೀ ಗಾಳಿ ಮಳೆ; ಸಿಡಿಲ ಹೊಡೆತಕ್ಕೆ 25 ಮೇಕೆಗಳು ಬಲಿ

Date:

ದಾವಣಗೆರೆ ಜಿಲ್ಲೆಯ ಹಲವೆಡೆ ಗುರುವಾರ ಸಂಜೆ ಭಾರೀ ಗಾಳಿಯೊಂದಿಗೆ ಗುಡುಗು ಸಿಡಿಲಿನ ಮಳೆ ಸುರಿದಿದ್ದು, ನೀರಿಲ್ಲದೆ ಕಂಗೆಟ್ಟಿರುವ ರೈತರ ಮೊಗದಲ್ಲಿ ಸಂತಸ ತಂದಿದೆ. ಭಾರೀ ಗಾಳಿ ಜತೆಗೆ ದಿಗಿಲು ಹುಟ್ಟಿಸುವಂತಹ ಸಿಡಿಲು ಮಿಂಚು ಜೋರಾಗಿದ್ದು, ಹಲವೆಡೆ ಮರಗಿಡಗಳು ರೆಂಬೆಗಳು ಮುರಿದು ಬಿದ್ದು, ರಸ್ತೆ ಮಾರ್ಗಗಳು, ಕೆಲವೆಡೆ ವಿದ್ಯುತ್ ಸಂಪರ್ಕ ಅಸ್ತವ್ಯಸ್ತಗೊಂಡಿದೆ. ಈ ಮಧ್ಯೆ ಸಿಡಿಲಿನ ಹೊಡೆತಕ್ಕೆ ಬರೋಬ್ಬರಿ 25 ಮೇಕೆಗಳು ಆಹುತಿಯಾದ ಘಟನೆ ವರದಿಯಾಗಿದೆ.

ದಾವಣಗೆರೆ ತಾಲೂಕಿನ ಆನಗೋಡು ಸಮೀಪದ ಈಚಘಟ್ಟ ಗ್ರಾಮದಲ್ಲಿ ಸಿಡಿಲು ಬಡಿದು 16 ಆಡುಗಳು ಸೇರಿದಂತೆ 25 ಮೇಕೆಗಳು ಮೃತಪಟ್ಟಿರುವ ಘಟನೆ ಗುರುವಾರ ಸಂಜೆ ನಡೆದಿದೆ.

ದಾವಣಗೆರೆ ತಾಲೂಕಿನ ಸುತ್ತಮುತ್ತ ಗುರುವಾರ ಸಂಜೆ ಭಾರೀ ಗುಡುಗು, ಮಿಂಚು, ಗಾಳಿ ಸಹಿತ ಮಳೆ ಸುರಿಯಿತು. ಎಂದಿನಂತೆ ಈಚಘಟ್ಟ ಗ್ರಾಮದ ರೈತ ಪಾಪ್ಯಾನಾಯ್ಕ ಮತ್ತು ರೇವತಿಬಾಯಿ ಅವರು ತಮ್ಮ ಮೇಕೆಗಳನ್ನು ಮೇಯಿಸಲು ಜಮೀನಿಗೆ ತೆರಳಿದ್ದರು. ಮಳೆ ಜೋರಾಗಿ, ಗುಡುಗು ಆರಂಭವಾದಾಗ ಮೇಕೆಗಳು ಮರದ ಕೆಳಗೆ ಬಂದು ಆಶ್ರಯಿಸಿವೆ. ಈ ವೇಳೆ ಸಿಡಿಲಿನ ಹೊಡೆತಕ್ಕೆ 16 ಆಡುಗಳು ಮತ್ತು 9 ಗಂಡು ಮೇಕೆ ಸ್ಥಳದಲ್ಲೇ ಮೃತಪಟ್ಟಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ವಿಜಯಪುರ | ಉಪಹಾರ ಸೇವಿಸುತ್ತಾ ಜನರೊಂದಿಗೆ ಬೆರೆತು ಚರ್ಚಿಸಿದ ಕಾಂಗ್ರೆಸ್‌ ಅಭ್ಯರ್ಥಿ ರಾಜು ಆಲಗೂರ

ಈ ವೇಳೆ ಸ್ಥಳದಲ್ಲಿದ್ದ ಪಾಪ್ಯಾನಾಯ್ಕ ಅವರು ಉಳಿದ ಮೇಕೆಗಳನ್ನು ಅಟ್ಟಿಕೊಂಡು ಬರಲೆಂದು ಸಿಡಿಲು ಬಡಿದ ಸ್ಥಳದಿಂದ ದೂರ ಹೋಗಿದ್ದರಿಂದ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಂದಾಜು ₹4 ರಿಂದ ₹5 ಲಕ್ಷ ನಷ್ಟವಾಗಿದ್ದು, ಸ್ಥಳಕ್ಕೆ ಸ್ಥಳೀಯ ಶಾಸಕ ಕೆ ಎಸ್ ಬಸವಂತಪ್ಪ ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ. ಪೊಲೀಸರು, ಕಂದಾಯ ಅಧಿಕಾರಿಗಳು ಪರಿಶೀಲನೆ ನಡೆಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...