ದಾವಣಗೆರೆ | ಹಾಸ್ಟೆಲ್‌ಗಳು ಮಕ್ಕಳ ಉಜ್ವಲ ಭವಿಷ್ಯ ರೂಪಿಸುವ ಕೇಂದ್ರವಾಗಬೇಕು: ಶಾಸಕ ದೇವೇಂದ್ರಪ್ಪ

Date:

ಗ್ರಾಮೀಣ ಭಾಗದ ಹಾಸ್ಟೆಲ್‌ಗಳು ಮಕ್ಕಳ ಉಜ್ವಲ ಭವಿಷ್ಯ ರೂಪಿಸುವ ಕೇಂದ್ರಗಳಾಗಿದ್ದು, ಪ್ರತಿಯೊಬ್ಬರೂ ಇವುಗಳ ಸದುಪಯೋಗ ಪಡೆದುಕೊಳ್ಳಬೇಕಿದೆ ಎಂದು ಶಾಸಕ ದೇವೇಂದ್ರಪ್ಪ ಅಭಿಮತ ವ್ಯಕ್ತಪಡಿಸಿದರು.

ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಗುತ್ತಿದುರ್ಗ ಗ್ರಾಮದಲ್ಲಿ ಬಿಸಿಎಂ ಇಲಾಖೆ ನೂತನ ವಿದ್ಯಾರ್ಥಿನಿಲಯ ಉದ್ಘಾಟಿಸಿ ಮಾತನಾಡಿದರು. “ವಿದ್ಯಾರ್ಥಿಗಳು ಹಾಸ್ಟೆಲ್‌ನಲ್ಲಿ ಕಾಯಕ ಮನೋಭಾವ ಮೈ ಗೂಡಿಸಿಕೊಳ್ಳಬೇಕಿದೆ. ಅಕ್ಷರ, ಅನ್ನ, ಆಧ್ಯಾತ್ಮಿಕತೆಗಳ ತ್ರಿವಿಧದ ದಾಸೋಹ ಕೇಂದ್ರಗಳು ಹಾಸ್ಟೆಲ್‌ಗಳಾಗಿವೆ. ತಾಲೂಕಿನ ಉದ್ಗಟ್ಟ ಗ್ರಾಮದ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ವ್ಯವಸ್ಥೆ, ವಿದ್ಯಾರ್ಥಿಗಳ ತೇಜಸ್ಸು ಕಂಡು ಮೂಕವಿಸ್ಮಿತನಾಗಿ ವೃತ್ತಾಂತದ ಹಾಡು ಕೇಳಿಸಿದೆ” ಎಂದು ನಿರ್ದೇಶನ ನೀಡಿದರು.

“80ರ ದಶಕದಲ್ಲಿ ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವಾಗ ಸರ್ಕಾರಿ ಹಾಸ್ಟೆಲ್ ಸಿಗದಿದ್ದಾಗ, ಬಿಇಒ ಅವರ ಶಿಫಾರಸಿನ ಮೇರೆಗೆ ಹಾಸ್ಟೆಲ್ ಸೌಲಭ್ಯ ಪಡೆದರೂ, ಹಾಸಿಗೆ ವಿತರಣೆ ವಿಳಂಬವಾದ ವೇಳೆ ನಾನು ಗೋಣಿ ಚೀಲವನ್ನು ಹೊದಿಕೆಯಾಗಿಸಿಕೊಂಡಿದ್ದೆ.ಇದೀಗ ಐಷರಾಮಿ ಬದುಕು ಅನುಭವಿಸುತ್ತಿರುವೆ. ಕಡುಬಡತನದಲ್ಲಿ ಜನಿಸಿದ ನಾನು ಶಾಸಕನಾಗಿ ಹಾಸ್ಟೆಲ್‌ನ ಲೋಕಾರ್ಪಣೆ ಮಾಡಿದ್ದು ಸಂತಸ ತಂದಿದೆ” ಎಂದು ಭಾವುಕರಾದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಾಜಿ ಶಾಸಕ ಎಸ್ ವಿ ರಾಮಚಂದ್ರ ಮಾತನಾಡಿ, “ನನ್ನ ಆಡಳಿತಾವಧಿಯಲ್ಲಿ ಶಂಕುಸ್ಥಾಪನೆ ನೆರವೇರಿಸಿದ್ದೆ. ಇದೀಗ ಲೋಕಾರ್ಪಣೆಗೊಂಡಿದೆ. ಮಕ್ಕಳ ಉಜ್ವಲ ಭವಿಷ್ಯ ರೂಪಿಸಲಿ. ತಾಲೂಕಿಗೆ ಕೀರ್ತಿ ತರಬೇಕು. ನೀರಾವರಿ ಯೋಜನೆಗಳು ಸೇರಿದಂತೆ ಅಭಿವೃದ್ಧಿ ವಿಚಾರದಲ್ಲಿ ಸಂಪೂರ್ಣ ಬೆಂಬಲವಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ಗದಗ | ಮಾಲಿನ್ಯಯುತ ಮನಸ್ಸೇ ಮಸಣ: ಪ್ರಜ್ಞಾ ಮತ್ತೀಹಳ್ಳಿ

ಈ ಸಂದರ್ಭದಲ್ಲಿ ಗ್ರಾ.ಪಂ ಅಧ್ಯಕ್ಷೆ ಮಾನಸ ನಿಂಗಪ್ಪ, ಉಪಾಧ್ಯಕ್ಷ ಅರ್ಜುನ್, ವಿಸ್ತರಣಾಧಿಕಾರಿ ಅಸಬಾನು, ಪ್ರಭಾರಿ ಬಿಇಒ ಸುರೇಶ್‌ ರೆಡ್ಡಿ, ನಿವೃತ್ತ ಸಮಾಜ ಕಲ್ಯಾಣ ಅಧಿಕಾರಿ ಬಿ ಮಹೇಶ್ವರ, ಎಸ್‌ಡಿಎಂಸಿ ಅಧ್ಯಕ್ಷ ಕಲ್ಲೇಶ್‌, ರೇವಣಸಿದ್ದಪ್ಪ, ಶಿವಣ್ಣ, ರುದ್ರೇಶ್‌, ಮುಖ್ಯ ಶಿಕ್ಷಕಿ ಶಿವಮ್ಮ, ನಿಲಯ ಮೇಲ್ವಿಚಾರಕ ದೇವೇಂದ್ರಪ್ಪ ಸೇರಿದಂತೆ ಸಿಬ್ಬಂದಿಗಳು, ಗ್ರಾಮಸ್ಥರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...