ದಾವಣಗೆರೆ | ಅಕ್ರಮ ಆರೋಪ; ಮಹಾನಗರ ಪಾಲಿಕೆ ಬಿಲ್‌ ಕಲೆಕ್ಟರ್‌ ಅಮಾನತು

Date:

ಭೂ-ಅಕ್ರಮ ಆರೋಪದ ಹಿನ್ನೆಲೆ ದಾವಣಗೆರೆ ಮಹಾನಗರ ಪಾಲಿಕೆ‌ ಬಿಲ್ ಕಲೆಕ್ಟರ್ ಸುನಿತಾ ಅವರನ್ನು ಅಮಾನತು ಮಾಡಿ ಪಾಲಿಕೆ ಆಯುಕ್ತರು ಆದೇಶ ಮಾಡಿದ್ದಾರೆ.

ಉದ್ಯಾನಕ್ಕೆ ಮೀಸಲಿಟ್ಟ‌ ಜಾಗವನ್ನು ಅಕ್ರಮವಾಗಿ ಖಾತಾ ಉತಾರ ನೀಡುವ ಮೂಲಕ ಕರ್ತವ್ಯ ಲೋಪ ಎಸಗಿದ ಆರೋಪ ಸುನಿತಾ ಮೇಲಿತ್ತು. ಇವರು ಡೋರ್ ನಂ 1882/81ಎನಲ್ಲಿ ಡಿ ಎಲ್ ರಾಮಚಂದ್ರಪ್ಪ ಎಂಬುವವರ ಹೆಸರಿಗೆ ಮೇಲಾಧಿಕಾರಿಗಳ ಆದೇಶವಿಲ್ಲದ ಹಾಗೂ ಯಾವುದೇ ಅಧಿಕೃತ ಷರಾ ಇಲ್ಲದೇ ಹೆಚ್ಚುವರಿಯಾಗಿ ಸೇರ್ಪಡೆ ಮಾಡಿದ್ದರು. ಖಾತೆ ಸೇರಿಸಲು ಯಾವುದೇ ಮೂಲ ದಾಖಲೆಗಳನ್ನು ಕೂಲಂಕುಶವಾಗಿ ಪರಿಶೀಲಿಸದೇ 2022 ಆಗಸ್ಟ್‌ 11ರಂದು ನಮೂನೆ-3 ನೀಡಿದ್ದರು.

ಸದರಿ ಖಾತಾ ಎಕ್ಸ್‌ಟ್ಯಾಕ್ ಆಧಾರದ ಮೇಲೆ ಸುಧಾ ಬಿ ಹಾಗೂ ಪೂಜಾ ಟಿ ಎಂಬುವವರು ಸಬ್ ರೆಜಿಸ್ಟಾರ್ ಕಚೇರಿಯಲ್ಲಿ 2022ರ ಆಗಸ್ಟ್‌ 15ರಂದು ದಾನ ಪತ್ರದ ಆಧಾರದ ಮೇಲೆ ನೋಂದಾವಣೆ ಮಾಡಿಸಿಕೊಂಡು, 2022ರ ಅಕ್ಟೋಬರ್‌ 10ರಂದು ಖಾತಾ ವರ್ಗಾವಣೆಗೆ ಅರ್ಜಿ ಸಲ್ಲಿಸಿದ್ದರು. ಈ ಬಗ್ಗೆ ವಾರ್ಡ್‌ ನಂಬರ್-20 ರ ಸಾರ್ವಜನಿಕರು, ಆಯುಕ್ತರಿಗೆ ದೂರು ನೀಡಿದ್ದರು. ಸರ್ವೆ ನಂ. 51ರ ಉದ್ಯಾನ ಜಾಗವನ್ನು ಖಾಸಗಿ ವ್ಯಕ್ತಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಸದರಿ ಸ್ವತ್ತನ್ನು ಯಾವುದೇ ಕಾರಣಕ್ಕೂ ಖಾತೆ ಮಾಡಬಾರದೆಂದು ದೂರು ಸಲ್ಲಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಧಾರವಾಡ | ನೀರಿಗಾಗಿ ವಿದ್ಯಾರ್ಥಿಗಳ ಪರದಾಟ

ಆಯುಕ್ತರು ಈ ಬಗ್ಗೆ ತನಿಖೆ ಮಾಡಿ ವರದಿ ನೀಡುವಂತೆ ಉಪ ಆಯುಕ್ತರು(ಕಂದಾಯ) ಹಾಗೂ ಎಸ್ಟೇಟ್‌ ಆಫೀಸರ್‌ಗೆ ಆದೇಶಿದ್ದರು. ಇದೀಗ ತನಿಖಾ ವರದಿ ಸಲ್ಲಿಸಿದ್ದು, ʼಮೇಲಾಧಿಕಾರಿ ಆದೇಶ ಇಲ್ಲದೆ, ಸುನೀತಾ ಅವರು ಖಾತೆ ಪುಸ್ತಕದಲ್ಲಿ ಹೆಸರು ಸೇರಿಸಿದ್ದರುʼ ಎಂದು ವರದಿಯಲ್ಲಿ ಹೇಳಲಾಗಿದೆ. ಈ ಬಗ್ಗೆ ಕ್ರಮಗೊಂಡಿರುವ ಪಾಲಿಕೆ ಆಯುಕ್ತರು ಅಮಾನತುಗೊಳಿಸಿ ಮುಂದಿನ
ತನಿಖೆಗೆ ಆದೇಶ ನೀಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...