ದಾವಣಗೆರೆ | ಅಕ್ರಮವಾಗಿ ಮರ ಮಾರಾಟ: ಉಪ ಅರಣ್ಯಾಧಿಕಾರಿ, ಗಸ್ತು ಅರಣ್ಯ ರಕ್ಷಕ ಅಮಾನತು

Date:

ದಾವಣಗೆರೆಯಲ್ಲಿ ಜಿಲ್ಲೆ ಚನ್ನಗಿರಿ ತಾಲೂಕಿನ ಜೋಳದಹಾಳ್ ಅಮ್ಮನ ಗುಡ್ಡ ಅರಣ್ಯ ವಲಯದ ವ್ಯಾಪ್ತಿಯಲ್ಲಿ ಎರಡು ಸಾಗುವಾನಿ ಮರ(ತೇಗ)ಗಳನ್ನು ಅಕ್ರಮವಾಗಿ ಮಾರಾಟ ಮಾಡಿದ ಹಿನ್ನೆಲೆಯಲ್ಲಿ ಉಪ ಅರಣ್ಯಾಧಿಕಾರಿ ಮತ್ತು ಗಸ್ತು ಅರಣ್ಯ ರಕ್ಷಕರನ್ನು ಅಮಾನತು ಮಾಡಲಾಗಿದೆ.

ಜೋಳದಾಳ್ ಉಪವಲಯ ಅರಣ್ಯಾಧಿಕಾರಿ ಗಿರೀಶ್, ಮಾವಿನಕಟ್ಟೆ, ಶಾಂತಿಸಾಗರ ವಲಯದ ಗಸ್ತು ಅರಣ್ಯ ರಕ್ಷಕರಾದ ರಾಮು ಮತ್ತು ಜಯರಾಂ ಅವರನ್ನು ಅಮಾನತು ಮಾಡಲಾಗಿದೆ.

ಜೋಳದಾಳ್ ಅರಣ್ಯ ವಲಯದ ಅಮ್ಮನ ಗುಡ್ಡ ಪ್ರದೇಶದ ರಸ್ತೆ ಬದಿಯಲ್ಲಿ ಬಿದ್ದಿದ್ದ ಎರಡು ತೇಗದ ಮರಗಳನ್ನು ಅಕ್ರಮವಾಗಿ ಮಾರಾಟ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಅಮಾನತು ಮಾಡಲಾಗಿದೆ ಎಂದು ಭದ್ರಾವತಿ ಅರಣ್ಯ ವಿಭಾಗದ ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜೋಳದಾಳ್ ಹತ್ತಿರದ ಅಮ್ಮನ ಗುಡ್ಡ ಪ್ರದೇಶಕ್ಕೆ ಹೋಗುವ ರಸ್ತೆಯಲ್ಲಿ, ಇದೇ ವರ್ಷ ಜುಲೈ 7ರಂದು ಭಾರಿ ಗಾಳಿ ಮತ್ತು ಮಳೆಗೆ ರಸ್ತೆ ಬದಿಯಲ್ಲಿನ ಅರಣ್ಯ ಇಲಾಖೆಗೆ ಸೇರಿದ ಎರಡು ಸಾಗುವಾನಿ ಮರಗಳು ಉರುಳಿ ಬಿದ್ದಿದ್ದವು. ಅವುಗಳನ್ನು ಕಡಿತಲೆಗೊಳಿಸಿ ಅರಣ್ಯ ಇಲಾಖೆಯ ದಾಸ್ತಾನಿಗೆ ಸಾಗಿಸಲಾಗಿತ್ತು. ಆದರೆ, ರೈತ ಸಂಘದ ಮುಖಂಡರ ಮಾಹಿತಿಯ ಮೇರೆಗೆ ‘ಉರುಳಿ ಬಿದ್ದ ಈ ಮರಗಳನ್ನು ಅಕ್ರಮವಾಗಿ ಮಾರಾಟ ಮಾಡಲಾಗಿದೆ’ ಎಂದು ಆರೋಪಿಸಿ ಮೇಲಧಿಕಾರಿಗಳಿಗೆ ದೂರು ನೀಡಿದ್ದರು.

ಆರೋಪದ ಹಿನ್ನೆಲೆಯಲ್ಲಿ ತನಿಖೆ ಕೈಗೊಂಡ ಅರಣ್ಯ ಇಲಾಖೆಯ ಮೇಲಾಧಿಕಾರಿಗಳು ಅಕ್ರಮ ಮಾರಾಟವಾಗಿರುವುದು ಖಚಿತಗೊಂಡ ಹಿನ್ನೆಲೆಯಲ್ಲಿ ಅಧಿಕಾರಿಗಳನ್ನು ಅಮಾನತುಗೊಳಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಈ ಹಿಂದೆಯೂ ಇದೇ ಜೋಳದಾಳ್ ಕಾಡಿನ ಪ್ರದೇಶದೊಳಗೆ ಕಳ್ಳತನದಿಂದ ಕತ್ತರಿಸಿ ಸಾಗಾಟ ಮಾಡಲು ಬಚ್ಚಿಟ್ಟಿದ್ದ 10 ಲಕ್ಷ ಮೌಲ್ಯದ ಸಾಗುವಾನಿ ಮರದ ತುಂಡುಗಳು ಪತ್ತೆಯಾಗಿತ್ತು. ಅಲ್ಲದೆ, ಹಲವು ಈ ರೀತಿಯಲ್ಲಿ ಮರಗಳ್ಳತನ ಪ್ರಕರಣಗಳು ಈ ಅರಣ್ಯವಲಯದ ವ್ಯಾಪ್ತಿಯಲ್ಲಿ ದಾಖಲಾಗಿವೆ.

ಇದನ್ನು ಓದಿದ್ದೀರಾ? ಚನ್ನಪಟ್ಟಣ ಉಪಚುನಾವಣೆ | ‌ಮ‌ತ್ತೊಮ್ಮೆ ಅದೃಷ್ಟ ಪರೀಕ್ಷೆಗೆ ಮುಂದಾದ ನಿಖಿಲ್‌ ಕುಮಾರಸ್ವಾಮಿ

ಆಗಾಗ ಸಂಭವಿಸುತ್ತಿರುವ ಈ ಮರಗಳ್ಳತನ ಪ್ರಕರಣಗಳು ಅರಣ್ಯ ಇಲಾಖೆ ಸ್ಥಳೀಯ ಅಧಿಕಾರಿಗಳ, ಮೇಲಾಧಿಕಾರಿಗಳ ಗಮನಕ್ಕೆ ಬಂದಿದೆಯೋ ಬಂದಿಲ್ಲವೋ ಎಂಬುದು ಪ್ರಶ್ನೆಯಾಗಿದೆ ಎಂದು ರೈತ ಮುಖಂಡರು ಮತ್ತು ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...