ದಾವಣಗೆರೆ | ಜಿಲ್ಲಾಸ್ಪತ್ರೆಯಲ್ಲಿ ಕ್ಯಾಂಟಿನ್‌ಗಳ ಅಕ್ರಮ ಟೆಂಡರ್; ತನಿಖೆಗೆ ಒತ್ತಾಯ 

Date:

ದಾವಣಗೆರೆ-ಚಿಗಟೇರಿ ಜಿಲ್ಲಾಸತ್ರೆಯಲ್ಲಿ ಅಕ್ರಮವಾಗಿ ಕೆಲವೇ ಕೆಲವು ವ್ಯಕ್ತಿಗಳ ಹೆಸರಿಗೆ ಕ್ಯಾಂಟಿನ್‌ಗಳ ಟೆಂಡರ್ ನೀಡಿ, ಸರ್ಕಾರಿ ಅಧಿಕಾರಿಗಳು ಕೆಲವರ ಹಣದ ಆಮಿಷಕ್ಕೆ ಬಲಿಯಾಗಿ ಭ್ರಷ್ಟತೆಯಲ್ಲಿ ತೊಡಗಿದ್ದಾರೆ. ಈ ಕುರಿತು ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕೆಂದು ಕರ್ನಾಟಕ ಭೀಮ್ ಸೇನೆಯ ದಾವಣಗೆರೆ ಜಿಲ್ಲಾಧ್ಯಕ್ಷ ಆರ್ ಸೂರ್ಯಪ್ರಕಾಶ್ ಒತ್ತಾಯಿಸಿದರು.

ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, “ಜಿಲ್ಲೆಯಲ್ಲಿ ಒಳರೋಗಿಗಳಿಗೆ, ಹೊರ ರೋಗಿಗಳಿಗೆ, ಆಸ್ಪತ್ರೆಯ ಸಿಬ್ಬಂದಿಗಳಿಗೆ ಅನುಕೂಲವಾಗುವ ಉದ್ದೇಶಕ್ಕಾಗಿ ಕ್ಯಾಂಟಿನ್‌ಗಳನ್ನು ತೆರೆಯಬೇಕೆಂಬ ನಿಯಮಾವಳಿಗಳಿದ್ದು, ಅದಕ್ಕೆ ಸರ್ಕಾರಿ ಆದೇಶದಂತೆ ಕೆಲವೊಂದು ಮಾನದಂಡಗಳಿವೆ. ಅಂಗವಿಕಲರಿಗೆ, ವಿಧವೆಯವರಿಗೆ, ಪರಿಶಿಷ್ಟ ಜಾತಿ/ಪಂಗಡದವರಿಗೆ ಮತ್ತು ಸಹಕಾರಿ ಸಂಘಗಳ ಮಾಲೀಕರಿಗೆ ವರ್ಷಕ್ಕೊಮ್ಮೆ ಟೆಂಡರ್ ಪ್ರಕಟಣೆ ಹೊರಡಿಸಿ ಸರ್ಕಾರದ ಸುತ್ತೋಲೆಯಂತೆ ಪ್ರತಿ ತಿಂಗಳು ಬಾಡಿಗೆ, ವಿದ್ಯುತ್ ದರ ಪಾವತಿಸಿಕೊಂಡು ಸರ್ಕಾರದ ಖಜಾನೆಗೆ ಹಣ ಜಮೆ ಮಾಡಿಸಬೇಕೆಂಬ ನಿಯಮ ಇದೆ” ಎಂದರು.

“ದಾವಣಗೆರೆ-ಚಿಗಟೇರಿ ಜಿಲ್ಲಾಸತ್ರೆಯ ಆಡಳಿತ ವಿಭಾಗದ ಸಿಬ್ಬಂದಿಗಳು ಸೇರಿದಂತೆ ತ್ರಿಮೂರ್ತಿಗಳು ತಮಗೆ ಬೇಕಾದ ಏಜೆನ್ಸಿಗಳಿಗೆ ಟೆಂಡರ್‌ ನೀಡುತ್ತಾರೆ. ಈ ಕುರಿತು ಮಾಹಿತಿ ಹಕ್ಕು ಕಾಯಿದೆ ಅಡಿಯಲ್ಲಿ ಮಾಹಿತಿ ಕೇಳಿದರೆ ಜಿಲ್ಲಾಸತ್ರೆಯ ಅಧಿಕಾರಿಗಳು ʼಟೆಂಡರ್‌ದಾರರು ನ್ಯಾಯಾಲಯದ ಮೊರೆ ಹೋಗಿರುವ ಹಿನ್ನೆಲೆಯಲ್ಲಿ ನಾವು ಏನೂ ಮಾಡಲು ಆಗುವುದಿಲ್ಲʼವೆಂದು ಹಾರಿಕೆ ಉತ್ತರ ನೀಡುತ್ತಾರೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಟೆಂಡರ್‌ದಾರರು ಉತ್ತಮ ಜೀವನ ನಡೆಸುತ್ತಿದ್ದು, ಇವರಿಗೆ ಕ್ಯಾಂಟಿನ್‌ಗಳನ್ನು ತೆರೆಯುವುದು ಒಂದು ಉದ್ಯೋಗವಾಗಿದೆ. ಬೇರೆ ನಿರುದ್ಯೋಗಿಗಳಿಗೆ ಅವಕಾಶವಿಲ್ಲದಂತಾಗಿದೆ. ಈ ಕುರಿತು ಹಿಂದೆ ಇದ್ದಂತಹ ಟೆಂಡರ್‌ದಾರರು ಸಹಾಯಕ ಆಡಳಿತಾಧಿಕಾರಿಗಳ ಸಲಹೆಯ ಮೇರೆಗೆ ಸುಖಾ-ಸುಮ್ಮನೆ ಜಿಲ್ಲಾಸ್ಪತ್ರೆ ವಿರುದ್ಧ ನ್ಯಾಯಾಲಯದಲ್ಲಿ ದಾವೆ ಹೂಡಿದ್ದು, ದಾವೆಯ ಯಾವುದೇ ವಿವರಗಳಾಗಲಿ, ಕಾರಣಗಳನ್ನಾಗಲಿ ನೀಡದೆ ಕ್ಯಾಂಟಿನ್ ಆಡಳಿತಾಧಿಕಾರಿಗಳು ಇವರಿಗೆ ನಡೆಸಲು ಅನುಕೂಲ ಮಾಡಿಕೊಟ್ಟಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಇವರು ಪ್ರತಿ ತಿಂಗಳು ಮಾಮೂಲಿನ್ನು ಪಡೆದುಕೊಳ್ಳುತ್ತಿದ್ದಾರೆ ಎನ್ನುವ ಆರೋಪವಿದ್ದು, ಟೆಂಡರಿನ ಕಾರ್ಯಾದೇಶವು ಮುಗಿದಿದ್ದರೂ ಯಾವುದೇ ಹೊಸದಾಗಿ ಟೆಂಡ‌ರ್ ನಡೆಸುವ ಪ್ರಕಟಣೆಯಿಲ್ಲದಂತೆ ನಡೆಸಿಕೊಂಡು ಹೋಗುತ್ತಿದ್ದಾರೆ. ಈ ನಿಟ್ಟಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳು ಇವರ ವಿರುದ್ಧ ಶಿಸ್ತುಕ್ರಮ ಜರುಗಿಸಿ, ಭ್ರಷ್ಟತೆಯಲ್ಲಿ ಪಾಲ್ಗೊಂಡಿರುವ ಆರೋಗ್ಯ ಆಡಳಿತಾಧಿಕಾರಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ?  ದಾವಣಗೆರೆ | ಜಿಲ್ಲಾಸ್ಪತ್ರೆಯ ಮೇಲ್ಛಾವಣಿ ಪದರ ಕುಸಿತ; ಅಧಿಕಾರಿ, ಜನಪ್ರತಿನಿಧಿಗಳ ನಿರ್ಲಕ್ಷ್ಯದ ಆರೋಪ

“ಒಂದು ವೇಳೆ ಈ ಒಂದು ದೂರನ್ನು ಪರಿಗಣಿಸದೆ ಇದ್ದಲ್ಲಿ ಕರ್ನಾಟಕ ಲೋಕಾಯುಕ್ತ ಇಲಾಖೆಗೆ ಸಂಬಂಧಪಟ್ಟ ದಾಖಲೆಗಳನ್ನು ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ದೂರು ನೀಡಿ ತನಿಖೆಗೆ ಒಳಪಡಿಸಲಾಗುವುದು” ಎಂದು ಎಚ್ಚರಿಕೆ ನೀಡಿದರು.

ಈ ವೇಳೆ ಕೆ ರಾಘವೇಂದ್ರ, ಎನ್ ಸಂತೋಷ, ಪ್ರಕಾಶ್, ಶ್ರೀನಿವಾಸ್, ಚಂದನ್ ಬಳ್ಳಾರಿ, ಚೇತನ್ ಸೇರಿದಂತೆ ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...