ದಾವಣಗೆರೆ | ಚರಂಡಿಗಳಲ್ಲಿ ಕುಡಿಯುವ ನೀರಿನ ಪೈಪುಗಳ ಅಳವಡಿಕೆ; ದಸಂಸ ಆಕ್ರೋಶ

Date:

ಮನೆ, ಮನೆಗೆ ಕುಡಿಯುವ ನೀರು ತಲುಪಿಸಲು ಅಳವಡಿಸಿರುವ ಪೈಪುಗಳಲ್ಲಿ ಬಹುತೇಕ ಪೈಪುಗಳು ಚರಂಡಿಗಳಲ್ಲಿವೆ. ದಾವಣಗೆರೆ ಜಿಲ್ಲೆ ಹರಿಹರ ನಗರದ ಹೊರವಲಯದಲ್ಲಿರುವ ಗುತ್ತೂರು ಗ್ರಾಮದ ಊರು ಬಾಗಿಲು, ಎ ಕೆ ಕಾಲೋನಿ ಹಾಗೂ ಸುತ್ತಲಿನ ಪ್ರದೇಶಗಳಲ್ಲಿ ಚರಂಡಿಗಳಲ್ಲೇ ಕುಡಿಯುವ ನೀರಿನ ಪೈಪುಗಳನ್ನು ಅಳವಡಿಸಿದ್ದಾರೆ ಎಂದು ದಲಿತ ಸಂಘರ್ಷ ಸಮಿತಿ ತಾಲೂಕು ಸಂಚಾಲಕ ಪಿ ಜೆ ಮಹಾಂತೇಶ್ ಆರೋಪಿಸಿದ್ದಾರೆ.

ಜಿಲ್ಲೆಯ ಹರಿಹರ ನಗರದ ಹೊರವಲಯದ ಗುತ್ತೂರು ಗ್ರಾಮದಲ್ಲಿ ದಸಂಸ ಕಾರ್ಯಕರ್ತರು ಸ್ಥಳ ಪರಿಶೀಲನೆ ನಡೆಸಿದಾಗ “ಹರಿಹರದಲ್ಲಿ ಕೆಯುಐಡಿಎಫ್‌ಸಿ, ಕೆಐಯುಡಬ್ಲ್ಯೂ, ಎಂಐಪಿ, ಪಿಐಯು ಸಂಸ್ಥೆಗಳಿಂದ ಜಾರಿಯಾಗುತ್ತಿರುವ ಜಲಸಿರಿ ಕುಡಿಯುವ ನೀರಿನ ಯೋಜನೆಯ ನ್ಯೂನತೆಗಳು ನಿತ್ಯವೂ ಹೊರ ಬರುತ್ತಿವೆ. ಗ್ರಾಮದ ಮುಖ್ಯ ರಸ್ತೆ, ಓಣಿಗಳ ಕ್ರಾಸ್ ರಸ್ತೆಗಳಲ್ಲಿ ಸದರಿ ಜಲಸಿರಿ ಪೈಪುಗಳ ಜಾಯಿಂಟ್‌ಗಳು ಚರಂಡಿ ತ್ಯಾಜ್ಯದಲ್ಲಿ ಮುಳುಗಿವೆ” ಎಂದು ದೂರಿದರು.

“ಚರಂಡಿ ನೀರು ಸಣ್ಣ ಪ್ರಮಾಣದಲ್ಲಿ ಪೈಪಿನ ಒಳ ಹೊಕ್ಕಿದ್ದರೂ ಯಾರಿಗೂ ತಿಳಿಯುವುದಿಲ್ಲ. ಜನತೆ ಮಾತ್ರ ಇದು ಸ್ವಚ್ಚ ನೀರೆಂದು ಸೇವಿಸುತ್ತಾರೆ. ಕುಟುಂಬದ ಸದಸ್ಯರ ಆರೋಗ್ಯ ಹದಗೆಟ್ಟರೆ ಯಾರು ಜವಾಬ್ದಾರರು?” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಈ ಹಿಂದೆ ಜಲಸಿರಿ ನ್ಯೂನತೆಗಳ ಬಗ್ಗೆ ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಇವರಿಗೆ ಸಂಘಟನೆಯಿಂದ ದೂರು ನೀಡಿದ ನಂತರ ನಗರದ ಕೆಲವೆಡೆ ಚರಂಡಿಗಳಲ್ಲಿ ಹಾದು ಹೋಗಿರುವ ನೀರಿನ ಪೈಪುಗಳಿಗೆ ಹೊದಿಕೆ ಪೈಪುಗಳನ್ನು ಅಳವಡಿಸಲಾಗಿದೆ. ಆದರೆ ಚರಂಡಿ ಬಿಟ್ಟು ಬೇರೆಡೆಗೆ ನೀರಿನ ಪೈಪುಗಳನ್ನು ಸ್ಥಳಾಂತರಿಸಿಲ್ಲ. ಚರಂಡಿ ಹಾಗೂ ಒಳಚರಂಡಿ ಪೈಪುಗಳಿಂದ 8 ಅಡಿ ಅಂತರದಲ್ಲಿ ಜಲಸಿರಿ ನೀರಿನ ಪೈಪುಗಳನ್ನು ಅಳವಡಿಸಬೇಕೆಂದು ಸರ್ಕಾರ ಸ್ವಷ್ಟವಾಗಿ ನೀತಿ ರೂಪಿಸಿದ್ದರೂ ಕೆಯುಐಡಿಎಫ್‌ಸಿ, ಕೆಐಯುಡ‌ಬ್ಲ್ಯೂ, ಎಐಪಿ, ಪಿಐಯು ಸಂಸ್ಥೆಗಳು ಈ ನಿಯಮಗಳನ್ನು ಗಾಳಿಗೆ ತೂರಿವೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಬೀದರ್ | ಗ್ರಾಮ ಪಂಚಾಯತಿ ನಿರ್ಲಕ್ಷ್ಯ; ನಿವಾಸಿಗಳಿಂದಲೇ ಚರಂಡಿ ಸ್ವಚ್ಛತೆ ಕಾರ್ಯ

“ನಗರದಲ್ಲಿ ಜಲಸಿರಿ ಯೋಜನೆ ಜಾರಿಯಲ್ಲಿ ತೊಡಗಿರುವ ಸಂಸ್ಥೆಯ ಇಂಜಿನಿಯರ್‌ಗಳು, ಗುತ್ತಿಗೆದಾರರ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ಜೈಲಿಗೆ ಹಾಕಬೇಕು. ಹರಿಹರದ ಜನರ ಆರೋಗ್ಯವನ್ನು ಕಾಪಾಡಬೇಕು. ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಂಡು ಕಾಮಗಾರಿಯ ನ್ಯೂನತೆಗಳನ್ನು ಸರಿಪಡಿಸದಿದ್ದರೆ ನಗರಸಭೆ ಎದರು ಸಂಘಟನೆಯಿಂದ ಪ್ರತಿಭಟನೆ ಕೈಗೊಂಡು, ತನಿಖಾ ಸಂಸ್ಥೆಗಳಿಗೆ ದೂರು ನೀಡಿ ಹೋರಾಟ ಮುಂದುವರೆಸಲಾಗುತ್ತದೆ” ಎಂದು ಎಚ್ಚರಿಸಿದ್ದಾರೆ.

WhatsApp Image 2025 07 12 at 17.38.34 e1752322718567
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...