ದಾವಣಗೆರೆ | ವ್ಯವಸಾಯಗಾರರ ಪರಿವರ್ತನಾ ಕೈಗಾರಿಕಾ, ವ್ಯಾಪಾರೋದ್ಯಮ ಸಹಕಾರ ಸಂಘದಲ್ಲಿಅಕ್ರಮ: ತನಿಖೆಗೆ ಆಗ್ರಹ

Date:

ದಾವಣಗೆರೆ ಜಿಲ್ಲೆ ವ್ಯವಸಾಯಗಾರರ ಪರಿವರ್ತನಾ ಕೈಗಾರಿಕಾ ಮತ್ತು ವ್ಯಾಪಾರೋದ್ಯಮ ಸಹಕಾರ ಸಂಘ ನಿಯಮಿತದಲ್ಲಿ 17 ಕೋಟಿಗೂ ಹೆಚ್ಚು ಹಣದ ದುರುಪಯೋಗ ನಡೆದಿದ್ದು, ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವ ಜೊತೆಗೆ, ಯಾವುದೇ ಕಾರಣಕ್ಕೆ ಸಮಾಪನೆ ತೆರವು ಮಾಡಬಾರದು ಎಂದು ಸಹಕಾರ ಸಂಘದ ಮಾಜಿ ನಿರ್ದೆಶಕರು ಹಾಗೂ ಸದಸ್ಯರು ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಎಸ್ ಎನ್ ಚನ್ನಬಸಪ್ಪ, ಎಂ ಎಸ್ ಮಲ್ಲಿಕಾರ್ಜುನ, ಆರ್ ಎಸ್ ಗುರು ಶಾಂತಪ್ಪ ಜಂಟಿಯಾಗಿ ಮಾತನಾಡಿ, “2009ರಿಂದ 2018ರ ಅವಧಿಯಲ್ಲಿನ ಆಡಳಿತ ಮಂಡಳಿಯಲ್ಲಿ ಇದ್ದ ಕೆಲವರು ಆಡಳಿತದಲ್ಲಿ ಲೋಪ ಎಸಗಿದ್ದು, ಕಾಯಿದೆ ಮತ್ತು ನಿಯಮಗಳನ್ನು ಉಲ್ಲಂಘನೆ ಮಾಡಿದ್ದಾರೆ. ಈ ಕುರಿತು ಸಹಕಾರ ಇಲಾಖೆಯ ಅಧಿಕಾರಿಗಳಿಂದ ಕಲಂ 65, 68, 69ರ ಅಡಿಯಲ್ಲಿ ತನಿಖೆ ನಡೆಸಿ ವ್ಯವಸಾಯಗಾರರ ಪರಿವರ್ತನಾ ಕೈಗಾರಿಕಾ ಮತ್ತು ವ್ಯಾಪಾರೋದ್ಯಮ ಸಹಕಾರ ಸಂಘ ನಿಯಮಿತವನ್ನು ಸಮಾಪನೆ ಮಾಡಲಾಗಿದೆ” ಎಂದು ಮಾಹಿತಿ ನೀಡಿದರು.

“ಅಂದಿನ ಆಡಳಿತ ಮಂಡಳಿಯಲ್ಲಿದ್ದ ಸದಸ್ಯರ ಅಭಿಪ್ರಾಯಗಳಿಗೆ ಕಿವಿಗೊಡದೆ ಏಕಪಕ್ಷೀಯವಾಗಿ ಏಕಸ್ವಾಮ್ಯವನ್ನು ಸಾಧಿಸುವ ಉದ್ದೇಶದಿಂದ ಆಮಿಷ ಒಡ್ಡಿ, ಬೆದರಿಸಿ ತಾನು ಹೇಳಿದಂತೆ ಮಾಡಿಸಿಕೊಂಡಿದ್ದಾರೆ. ಅಲ್ಲದೇ ಸಂಘದ ಅಸ್ತಿತ್ವಕ್ಕೆ ಧಕ್ಕೆ ತಂದಿದ್ದಾರೆ” ಎಂದು ಕಿಡಿ ಕಾರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಗದಗ | ರೈತ – ಕಾರ್ಮಿಕ ವಿರೋಧಿ ನೀತಿಗಳನ್ನು ಕೈಬಿಡಲು ಸಿಐಟಿಯು ಒತ್ತಾಯ

“ಸಹಕಾರ ಸಂಘದಲ್ಲಿ ರೈತರ ಚಟುವಟಿಕೆಗಳನ್ನು ಬಿಟ್ಟು ಇನ್ನಿತರ ಅಕ್ರಮ ಚಟುವಟಿಕೆ ಮಾಡುತ್ತಾ, ಒತ್ತಾಯಪೂರ್ವಕವಾಗಿ ನಿರ್ದೇಶಕರ ಸಹಿ ಪಡೆದು ಸಂಘದಲ್ಲಿ ದುರಾಡಳಿತ, ಹಣ ದುರುಪಯೋಗ ಮಾಡಿದ್ದಾರೆ. ಹಾಗಾಗಿ ಈ ಎಲ್ಲ ದುರುಪಯೋಗಗಳ ಕುರಿತು ಸಮಗ್ರ ತನಿಖೆ ನಡೆಸಿ, ರೈತರು, ಸಾರ್ವಜನಿಕರ ಹಿತದೃಷ್ಟಿಯಿಂದ ಸೂಕ್ತ ಕ್ರಮ ಕೈಗೊಳ್ಳಬೇಕು. ಅಲ್ಲದೇ ನೂತನವಾಗಿ ವ್ಯವಸಾಯಗಾರರ ಪರಿವರ್ತನಾ ಕೈಗಾರಿಕಾ ಮತ್ತು ವ್ಯಾಪಾರೋದ್ಯಮ ಸಹಕಾರ ಸಂಘ ನಿಯಮಿತವನ್ನು ಆರಂಭಿಸಲು ಸಂಬಂಧಿಸಿದ ಅಧಿಕಾರಿಗಳು ಅವಕಾಶ ಮಾಡಿಕೊಡಬೇಕು” ಎಂದು ಆಗ್ರಹಿಸಿದರು.

ಎನ್‌ ಇ ಶಿವಕುಮಾರ್, ಎಂ ಆರ್ ಕುಬೇಂದ್ರಪ್ಪ, ಹೆಚ್ ಜಿ ಮರುಳಸಿದ್ದಪ್ಪ, ಆರ್ ಜಿ ನರೇಶ್‌ ಸೇರಿದಂತೆ ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...