ದಾವಣಗೆರೆ | ʼಭೀಮಾ ಕೋರೆಗಾಂವ್ ವಿಜಯʼ ಸ್ಮರಣೆ ನಮ್ಮೆಲ್ಲರ ಕರ್ತವ್ಯ: ಸತೀಶ್ ಅರವಿಂದ್

Date:

ʼಭೀಮಾ ಕೋರೆಗಾಂವ್ ವಿಜಯʼವನ್ನು ನೆನೆಯಬೇಕಾದ್ದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಭೀಮಾ ಕೋರೆಗಾಂವ್ ವಿಜಯೋತ್ಸವ ಸಮಿತಿಯ ಸತೀಶ್ ಅರವಿಂದ್ ಹೇಳಿದರು.

ದಾವಣಗೆರೆ ನಗರದ ಬೂದಾಳ್ ರಿಂಗ್ ರೋಡ್‌ನಲ್ಲಿ ಆಯೋಜಿಸಲಾಗಿದ್ದ ಭೀಮಾ ಕೋರೆಗಾಂವ್ ವಿಜಯೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

“ಇತಿಹಾಸದ ಪುಟಗಳಲ್ಲಿ ಶೋಷಿತ ಸಮುದಾಯಗಳ ಹೋರಾಟಗಳು ಅಡಗಿಹೋಗಿವೆ. ಅದರಲ್ಲಿ 1818ರಲ್ಲಿ ಮಹಾರ್ ಸೈನಿಕರಿಗೂ ಮತ್ತು ಮಹಾರಾಷ್ಟ್ರದ ಪೇಶ್ವೆಗಳ ನಡುವೆ ನಡೆದ ಭೀಮಾ ಕೋರೆಗಾಂವ್ ಯುದ್ಧವು ಪ್ರಮುಖವಾದದ್ದು.‌ ಅಸ್ಪೃಶ್ಯತೆ, ಜಾತಿಯ ಶೋಷಣೆ ಮತ್ತು ಗುಲಾಮಗಿರಿಯ ವಿರುದ್ಧ ಎರಡನೇ ಭಾಜಿರಾವ್‌ನ 28,000 ಪೇಶ್ವೆ ಸೈನಿಕರನ್ನು ಸ್ವಾಭಿಮಾನಿಗಳಾದ 500 ಜನ ಮಹಾರ್ ಸೈನಿಕರು ಹಗಲು ರಾತ್ರಿ ಯುದ್ದಮಾಡಿ ವಿಜಯಶಾಲಿಯಾಗಿರುವುದು ಅವಿಸ್ಮರಣೀಯ ಎಂದರೆ ತಪ್ಪಾಗಲಾರದು” ಎಂದು ಅಭಿಪ್ರಾಯಪಟ್ಟರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪುಣೆಯ ಭೀಮಾ ನದಿಯ ದಡದಲ್ಲಿ ನಡೆದ ಯುದ್ಧದ ನೆನಪಿಗಾಗಿ ವಿಜಯ ಸ್ಥಂಭವನ್ನು ನಿರ್ಮಾಣ ಮಾಡಿರುವ ಬಗ್ಗೆ ಭಾರತದಲ್ಲಿ ಎಲ್ಲೂ ಅದರ ಕುರುಹು ಇರಲಿಲ್ಲ. ಅಂಬೇಡ್ಕರ್ ಅವರು ಲಂಡನ್‌ನಲ್ಲಿ ಓದುತ್ತಿದ್ದಾಗ ಕೆಲವೊಂದು ದಾಖಲಾತಿಗಳಲ್ಲಿ ಕೋರೆಗಾಂವ್‌ನ ಕುರುಹು ಕುರಿತು ಮಾಹಿತಿ ಲಭ್ಯವಾಗುತ್ತದೆ. 1927ರಲ್ಲಿ ಅಂಬೇಡ್ಕರ್ ಅವರು ವಿಜಯ ಸ್ಥಂಭಕ್ಕೆ ಭೇಟಿ ನೀಡುತ್ತಾರೆ. ಅಲ್ಲಿಂದ ಭೀಮಾ ಕೋರೆಗಾಂವ್ ವಿಜಯೋತ್ಸವ ದೇಶದ್ಯಾಂತ ಪಸರಿಸುತ್ತದೆ. ಇದು ದಲಿತರ ಸ್ವಾಭಿಮಾನದ ವಿಜಯೋತ್ಸವ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಕತ್ತಲಾಗಿದ್ದ ಬುದ್ದಿನ್ನಿ ಸರ್ಕಾರಿ ಪ್ರೌಢಶಾಲೆ; ವಿದ್ಯುತ್‌ ಸಂಪರ್ಕ ಕಲ್ಪಿಸುತ್ತಿರುವ ಇಲಾಖೆ

ಕಾರ್ಯಕ್ರಮದಲ್ಲಿ ಸಿಹಿ ಹಂಚಿ ಸಂಭ್ರಮಿಸಲಾಯಿತು. ಕರ್ನಾಟಕ ಜನಶಕ್ತಿಯ ಆದಿಲ್ ಖಾನ್, ಪವಿತ್ರ, ಯಲ್ಲಪ್ಪ, ಆಂಜಿನಪ್ಪ, ರವೀಂದ್ರ, ಸುರೇಶ್, ಅಶ್ಲಾಕ್, ಹನುಮಂತಪ್ಪ ಕರೂರು, ಹನುಮಂತಪ್ಪ, ಯಮಾನೂರಿ, ಬಸವರಾಜ್ ಹಾಗೂ ಎಲ್ಲ ದಲಿತ, ದಮನಿತರು, ಅಂಬೇಡ್ಕರ್ ಅಭಿಮಾನಿಗಳು ಮತ್ತು ಪ್ರಗತಿಪರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...