ದಾವಣಗೆರೆ | ಸಂವಿಧಾನದ ಆಶಯ ಕಾಪಾಡುವ ಹೊಣೆ ವಕೀಲರದು: ವಿನಯ್ ಬಾಳಾ ಸಾಹೇಬ್

Date:

ಪರಿವರ್ತನೆಯ ದಿನಗಳಲ್ಲಿ ಸಂವಿಧಾನದ ಆಶಯ ಕಾಪಾಡುವ ಹೊಣೆ ವಕೀಲರದೇ ಆಗಿದ್ದು, ಸಂವಿಧಾನದ ಮೌಲ್ಯಗಳನ್ನು ಎತ್ತಿಹಿಡಿಯುವ ಕೆಲಸವನ್ನೂ ಮಾಡಬೇಕಿದೆ ಎಂದು ರಾಜ್ಯ ವಕೀಲರ ಪರಿಷತ್ ಉಪಾಧ್ಯಕ್ಷ ವಿನಯ್ ಬಾಳಾ ಸಾಹೇಬ್ ಮಾಂಗಳೆಕರ್ ಕರೆ ನೀಡಿದರು.

ದಾವಣಗೆರೆ ನಗರದ ವಕೀಲರ ಭವನದಲ್ಲಿ ಹಮ್ಮಿಕೊಂಡಿದ್ದ ವಕೀಲರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು “ಇಂದು ಕಾನೂನು ವಲಯ ಸಾಕಷ್ಟು ಬದಲಾಗುತ್ತಿದೆ. ಕೃತಕ ಬುದ್ಧಿಮತ್ತೆ ಸಾಕಷ್ಟು ಪರಿಣಾಮಕಾರಿ ಬದಲಾವಣೆ ತರುತ್ತಿದೆ. ಇದು ನಮ್ಮ ವೃತ್ತಿಗೆ ಸಹಕಾರಿ. ಇದನ್ನು ಬಳಸಿಕೊಂಡು ನಾವು ನಮ್ಮ ನೈತಿಕತೆ ಮರೆಯದೆ ಸಮಾಜದ ಪ್ರತಿಯೊಬ್ಬರಿಗೂ ನ್ಯಾಯ ಒದಗಿಸುವ ಕೆಲಸ ಮಾಡಬೇಕು” ಎಂದು ತಿಳಿಸಿದರು.

ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶೆ ರಾಜೇಶ್ವರಿ ಹೆಗಡೆ ಮಾತನಾಡಿ “ಅಂಬೇಡ್ಕರ್ ಅವರು ಸಂವಿಧಾನದ ರಚನಾಕಾರರು. ಅವರ ಕೊಡುಗೆ ದೊಡ್ಡದಿದೆ. ಆದರೂ ಸರ್ವಪಲ್ಲಿ ರಾಧಾಕೃಷ್ಣನ್ ಅವರ ವಕೀಲಿ ದಕ್ಷತೆ ಕಾರಣಕ್ಕೆ ಅವರ ಹೆಸರಲ್ಲಿ ವಕೀಲರ ದಿನ ಆಚರಿಸಲಾಗುತ್ತಿದೆ. ಯುವ ವಕೀಲರು ಆರಂಭದಲ್ಲೇ ಹಣಕ್ಕಾಗಿ ಕೆಲಸ ಮಾಡಬೇಡಿ. ಮೊದಲು ವೃತ್ತಿ ಕೌಶಲ್ಯ ಬೆಳೆಸಿಕೊಳ್ಳಿ. ಮುಂದೆ ದುಡ್ಡು ತಾನಾಗಿಯೇ ಬರುತ್ತದೆ” ಎಂದು ಸಲಹೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಲ್ ಎಚ್ ಅರುಣ್ ಕುಮಾರ್ ಮಾತನಾಡಿ “ಜಿಲ್ಲಾ ವಕೀಲರ ಸಂಘಕ್ಕೆ ರಾಜ್ಯ ಪರಿಷತ್‌ನಿಂದ ಬರುವ ಕಾರ್ಯಾಗಾರದ ಅನುದಾನ ಹೆಚ್ಚಿಸಬೇಕು. ಸಂವಿಧಾನ ರಚನಾ ಕರಡು ಸಮಿತಿಯಲ್ಲಿ ಸದಸ್ಯರಾಗಿದ್ದವರು ನಮ್ಮ ವಕೀಲರ ಸಂಘದವರು ಎಂಬುದು ನಾವೆಲ್ಲರೂ ಹೆಮ್ಮೆಪಡುವ ವಿಷಯ” ಎಂದರು.

ಈ ಸುದ್ದಿ ಓದಿದ್ದೀರಾ? ತುಮಕೂರು | ದೆಹಲಿ ಜಂತರ್ ಮಂತರ್ ಪ್ರತಿಭಟನೆಗೆ ಗ್ರಾಕೂಸು ಬೆಂಬಲ : ನರೇಗಾ ಕೂಲಿಕಾರರ ಬೇಡಿಕೆ ಈಡೇರಿಸುವಂತೆ ಒತ್ತಾಯ

ಕಾರ್ಯಕ್ರಮದಲ್ಲಿ ಜಿಲ್ಲಾ ಸರ್ಕಾರಿ ವಕೀಲರು, ಹಿರಿಯ ವಕೀಲರನ್ನು ಸನ್ಮಾನಿಸಲಾಯಿತು. ವೇದಿಕೆಯಲ್ಲಿ ವಿವಿಧ ಪೀಠದ ಜಿಲ್ಲಾ ನ್ಯಾಯಾಧೀಶರು ಇದ್ದರು. ಹಿರಿಯ ವಕೀಲ ಎಂ ಆರ್ ಮಹೇಶ್ವರಪ್ಪ ತಮ್ಮ ಪುಸ್ತಕ ಭಂಡಾರವನ್ನು ಜಿಲ್ಲಾ ನ್ಯಾಯಾಲಯದ ಗ್ರಂಥಾಲಯಕ್ಕೆ ಅರ್ಪಿಸಿದರು.

ಹಿರಿಯ ವಕೀಲರಾದ ಎ ಆರ್ ಗುರುಬಸವರಾಜ್, ಲೋಕೀಕೆರೆ ಸಿದ್ದಪ್ಪ, ಎಸ್ ಬಸವರಾಜು, ನ್ಯಾಯಾಲಯ ಸಿಬ್ಬಂದಿ ಅನಿತಾ, ಉಪಾಧ್ಯಕ್ಷ ಜಿ ಕೆ ಬಸವರಾಜ್, ಸಹ ಕಾರ್ಯದರ್ಶಿ ಎ ಎಸ್ ಮಂಜುನಾಥ್ ವಕೀಲರ ಸಂಘದ ಪದಾಧಿಕಾರಿಗಳು ಹಾಗೂ ವಕೀಲರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...