ದಾವಣಗೆರೆ | ಜಲಸಿರಿ ಯೋಜನೆಯಡಿ ಕಳಪೆ ಕಾಮಗಾರಿ; ಲೋಕಾಯುಕ್ತರಿಗೆ ದೂರು

Date:

ದಾವಣಗೆರೆಯಲ್ಲಿ ಜಲಸಿರಿ ಯೋಜನೆಯಡಿ ನಡೆಸಿರುವ ಕಾಮಗಾರಿ ಕಳಪೆಯಾಗಿದೆ ಎಂದು ಆರೋಪಿಸಲಾಗಿದೆ. ಕಾಮಗಾರಿ ನಡೆಸಿದ ಸುಯೇಜ್‌ ಪ್ರಾಜೆಕ್ಟ್‌ ಪ್ರೈವೇಟ್‌ ಲಿಮಿಟೆಡ್‌ ಎಂಬ ಗುತ್ತಿಗೆ ಕಂಪನಿ ವಿರುದ್ಧ ಜೆಡಿಎಸ್ ರಾಜ್ಯ ಕಾರ್ಯದರ್ಶಿ ಟಿ ಅಸ್ಗರ್ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ. ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

ಈ ಕುರಿತು ಈ ದಿನ.ಕಾಮ್ ಜೊತೆ ಮಾತನಾಡಿದ ಟಿ ಅಸ್ಗರ್, “ದಾವಣಗೆರೆ ನಗರಕ್ಕೆ ನಿತ್ಯ 770 ಲಕ್ಷ ಲೀಟರ್‌ (77 ಎಂಎಲ್‌ಡಿ) ನೀರು ಅಗತ್ಯವಿದೆ. 2046ಕ್ಕೆ ನಗರದ ಜನಸಂಖ್ಯೆ ಎಷ್ಟಾಗಬಹುದೆಂದು ಅಂದಾಜಿಸಿ, ನಿತ್ಯ 1,570 ಲಕ್ಷ ಲೀಟರ್‌ (157 ಎಂಎಲ್‌ಡಿ) ನೀರು ಪೂರೈಸುವ ಪರಿಕಲ್ಪನೆಯೊಂದಿಗೆ ₹472.20 ಕೋಟಿ ವೆಚ್ಚದಲ್ಲಿ ಜಲಸಿರಿ ಯೋಜನೆ ರೂಪಿಸಲಾಗಿತ್ತು. ‘ಸುಯೇಜ್‌ ಪ್ರಾಜೆಕ್ಟ್‌ ಪ್ರೈವೇಟ್‌ ಲಿಮಿಟೆಡ್‌’ ಕಂಪನಿಯು ಕಾಮಗಾರಿಯ ಗುತ್ತಿಗೆ ಪಡೆದುಕೊಂಡು, 2018ರ ಮೇ ತಿಂಗಳಿನಲ್ಲಿ ಕಾಮಗಾರಿ ಆರಂಭಿಸಿತ್ತು. 2022ರ ಜನವರಿಗೆ ಮುಗಿಸಬೇಕಿತ್ತು. ಆದರೆ, ಇನ್ನೂ ಕಾಮಗಾರಿ ಮುಗಿದಿಲ್ಲ” ಎಂದು ಆರೋಪಿಸಿದ್ದಾರೆ.

“ನೀರು ಶುದ್ಧೀಕರಣ ಘಟಕದಿಂದ ಓವರ್‌ಹೆಡ್‌ ಟ್ಯಾಂಕ್‌ಗಳಿಗೆ ನೀರು ಹರಿಸುವ ಪೈಪ್‌ಲೈನ್‌ ಕಾಮಗಾರಿಯ ವ್ಯಾಪ್ತಿ 70.35 ಕಿ.ಮೀ ಇದ್ದು, ಇದರಲ್ಲಿಯೂ ಅನೇಕ ಕಾಮಗಾರಿಗಳು ಬಾಕಿ ಉಳಿದಿವೆ. ಓವರ್‌ಹೆಡ್‌ ಟ್ಯಾಂಕ್‌ಗಳಿಂದ ಮನೆಗಳಿಗೆ ನೀರು ಸರಬರಾಜು ಪೈಪ್‌ಲೈನ್‌ ಕಾಮಗಾರಿ ವ್ಯಾಪ್ತಿ 1,339 ಕಿಮೀ ಇದ್ದು, ಇದರಲ್ಲಿಯೂ ಅನೇಕ ಕಾಮಗಾರಿಗಳು ಬಾಕಿ ಉಳಿದಿವೆ. ಒಟ್ಟು 97,200 ಮನೆಗಳಿಗೆ ಸಂಪರ್ಕ ಕಲ್ಪಿಸುವ ಗುರಿ ಹೊಂದಿದ್ದು, ಇದರಲ್ಲಿ ಇನ್ನೂ ಹಲವು ಮನೆಗಳಿಗೆ ಸಂಪರ್ಕ ಒದಗಿಸಲು ಸಾಧ್ಯವಾಗಿಲ್ಲ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕಳಪೆ ಗುಣಮಟ್ಟದ ಕಾಮಗಾರಿ ಮಾಡುತ್ತಿರುವ ಸುಯೇಜ್‌ ಪ್ರಾಜೆಕ್ಟ್‌ ಪ್ರೈವೇಟ್‌ ಲಿಮಿಟೆಡ್‌ ಕಂಪನಿಯ ವಿರುದ್ಧ ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಕುಡಿಯುವ ನೀರಿಗೆ ಹಾಹಾಕಾರ; ಪಂಪ್ ಹೌಸ್‌ಗೆ ಸ್ಥಳೀಯರ ಮುತ್ತಿಗೆ

“ಜಲಸಿರಿ ಯೋಜನೆಗಾಗಿ ಹೊಸದಾಗಿ 18 ಓವರ್‌ಹೆಡ್‌ ಟ್ಯಾಂಕ್‌ಗಳ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು, ಕೆಲವು ಕೆಲಸಗಳು ಬಾಕಿ ಉಳಿದಿವೆ. ಯೋಜನೆಗೆ ಮಹಾನಗರ ಪಾಲಿಕೆಯ 32 ಹಳೆಯ ಓವರ್‌ಹೆಡ್‌ ಟ್ಯಾಂಕ್‌ಗಳು ಬಳಕೆಯಾಗಲಿದ್ದು, ಪುನರ್‌ ನವೀಕರಣ ನಡೆಯುತ್ತಿದೆ. ಈ ಎಲ್ಲ ಕಾಮಗಾರಿಗಾಗಿ ಕೆಯುಐಡಿಎಫ್‌ಸಿಯಿಂದ ಟೆಂಡರ್ ಪಡೆದ ‘ಸುಯೇಜ್‌ ಪ್ರಾಜೆಕ್ಟ್‌ ಪ್ರೈವೇಟ್‌ ಲಿಮಿಟೆಡ್‌’ ಕಂಪನಿಯು ಕಾಮಗಾರಿ ಪೂರ್ಣಗೊಳಿಸುವ ನಿಗದಿತ ಅವಧಿಗಿಂತ ಹೆಚ್ಚು ವಿಳಂಬ ಮಾಡಿದೆ. ಓವರ್‌ಹೆಡ್‌ ಟ್ಯಾಂಕ್‌ಗಳ ನವೀಕರಣ ಹಾಗೂ ಯೋಜನೆಗೆ ಬಳಸಿದ ಕಬ್ಬಿಣದ ಪೈಪ್‌ಗಳ ಗುಣ ಮಟ್ಟ ಉತ್ತಮವಾಗಿಲ್ಲ” ಎಂದು ಆರೋಪಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...