ದಾವಣಗೆರೆ | ಲೋಕಾಯುಕ್ತ ಕೋರ್ಟ್ ಆದೇಶ; ಅಧಿಕಾರಿಗಳಿಂದ ಸ್ಥಳ ಮಹಜರು

Date:

ಗ್ರಾಮ ಪಂಚಾಯಿತಿ ಅಧಿಕಾರಿಗಳ ʼರೈತರ ಭೂ ಒತ್ತುವರಿʼ ಪ್ರಕರಣಕ್ಕೆ ಸಂಬಂಧಿಸಿದಂತೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ತಹಶೀಲ್ದಾರ್ ಮತ್ತು ತಾಲೂಕು ಪಂಚಾಯಿತಿಯ ಕಾರ್ಯ ನಿರ್ವಹಣಾಧಿಕಾರಿಗಳು ವಿವಾದಿತ ಜಾಗಕ್ಕೆ ಭೇಟಿ ನೀಡಿ ಲೋಕಾಯುಕ್ತ ನ್ಯಾಯಾಲಯಕ್ಕೆ ವರದಿ ನೀಡಲು ಸ್ಥಳ ಮಹಜರ್ ನಡೆಸಿದರು.

ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ದಿದ್ದಿಗೆ ಗ್ರಾಮ ಪಂಚಾಯಿತಿಯ ಉಜ್ಜಪ್ಪ ಒಡೆಯರಹಳ್ಳಿಯ ರೈತ 65 ವರ್ಷದ ಮೇಘರಾಜಪ್ಪನವರ ಸರ್ಕಾರಿ ಪ್ರಾಥಮಿಕ ಶಾಲೆಯ ಮುಂದಿರುವ ಗ್ರಾಮ ಠಾಣಾ ಜಾಗಕ್ಕೆ ಸಂಬಂಧಿಸಿದಂತೆ ಈ ದಿನ.ಕಾಮ್‌ನಲ್ಲಿ “ಅಧಿಕಾರಿಗಳಿಂದ ರೈತರ ಜಾಗ ಒತ್ತುವರಿ” ಹೆಸರಿನಡಿಯಲ್ಲಿ ವರದಿ ಪ್ರಕಟಿಸಲಾಗಿತ್ತು.

ಜಗಳೂರು ತಾಲೂಕು ನ್ಯಾಯಾಲಯ 1999ರಲ್ಲಿ ಜಮೀನು, ಮೇಘರಾಜಪ್ಪನವರದು ಎಂದು ತೀರ್ಪು ನೀಡಿರುವ ವಿವಾದಿತ ಜಾಗವು ಸುಮಾರು 70 ವರ್ಷಗಳಿಂದಲೂ ತಮ್ಮ ಪಿತ್ರಾರ್ಜಿತ ಮತ್ತು ಅನುಭವದಲ್ಲಿರುವ ಜಾಗಕ್ಕೆ ಮೇಘರಾಜಪ್ಪನವರಿಗೆ ಜಾಗವನ್ನು ಇ-ಸ್ವತ್ತು ಮಾಡಿಕೊಡದೆ ಗ್ರಾಮ ಪಂಚಾಯಿತಿ ಅಧಿಕಾರಿಯೊಬ್ಬರು ಲಂಚದ ಆಮಿಷ ಒಡ್ಡಿದ್ದು, ಲಂಚ ನೀಡಲು ತಿರಸ್ಕರಿಸಿದ್ದ ಮೇಘರಾಜಪ್ಪನ ಆಸ್ತಿಯನ್ನು ಶಾಲೆಯ ಆಸ್ತಿ, ಗ್ರಾಮ ಪಂಚಾಯಿತಿಗೆ ಸೇರಿದ್ದೆಂದು ಹೇಳಿ ವಶಪಡಿಸಿಕೊಳ್ಳಲು ಮುಂದಾಗಿದ್ದಾರೆ ಎಂದು ಹೈಕೋರ್ಟ್ ಮತ್ತು ಲೋಕಾಯುಕ್ತ ಕೋರ್ಟ್‌ನಲ್ಲಿ ದಾವೆ ಸಲ್ಲಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಸ್ಥಳ ಮಹಜರು 1

ಸುದೀರ್ಘ ವಿಚಾರಣೆಯನ್ನು ನಡೆಸಿದ ಲೋಕಾಯುಕ್ತ ನ್ಯಾಯಾಲಯ ತಹಶೀಲ್ದಾರ್, ಗ್ರಾಮ ಪಂಚಾಯಿತಿ ಅಧಿಕಾರಿಗಳು ಮತ್ತು ತಾಲೂಕು ಪಂಚಾಯತಿಯ ಕಾರ್ಯನಿರ್ವಾಹಣಾಧಿಕಾರಿಗಳಿಗೆ ಆದೇಶ ನೀಡಿ ಸ್ಥಳ ಮಹಜರು ನಡೆಸಿ ವರದಿ ನೀಡುವಂತೆ ಆದೇಶಿಸಿತ್ತು. ಈ ಹಿನ್ನೆಲೆಯಲ್ಲಿ ಉಜ್ಜಪ್ಪವಡೇರಹಳ್ಳಿಗೆ ಶನಿವಾರ ಬೆಳಗ್ಗೆ 11:30 ಕ್ಕೆ ಮೇಘರಾಜ್ ಅವರ ಹೆಸರಿನಲ್ಲಿರುವ 78×135 ಅಡಿ ಅಳತೆಯ ಜಾಗಕ್ಕೆ ಭೇಟಿ ನೀಡಿ ಲೋಕಾಯುಕ್ತಕ್ಕೆ ವರದಿ ನೀಡಲು ಸ್ಥಳ ಪರಿಶೀಲನೆ ನಡೆಸಿದರು.

ಈ ಸುದ್ದಿ ಓದಿದ್ದೀರಾ? ಬಿಡದಿ | ಮಂಚನಾಯಕನಹಳ್ಳಿಯಲ್ಲಿ ಹೆಚ್ಚಿದ ಕಳ್ಳತನ ಪ್ರಕರಣ; ಪೊಲೀಸರ ನಿರ್ಲಕ್ಷ್ಯ, ಆರೋಪ

ಈ ವೇಳೆ ಮಾತನಾಡಿದ ರೈತ ಮೇಘರಾಜಪ್ಪ ಮತ್ತು ಅವರ ಧರ್ಮಪತ್ನಿ, “ಈ ಜಾಗದಲ್ಲಿ ನಮ್ಮ ತಂದೆಯ ಕಾಲದಿಂದಲೂ 70-80 ವರ್ಷಗಳಿಂದಲೂ ನಾವು ಅನುಭವದಲ್ಲಿದ್ದೇವೆ. ಈ ಬಗ್ಗೆ ತಾಲೂಕು ನ್ಯಾಯಾಲಯದಲ್ಲಿ ತಕರಾರು ನಡೆದು 1999ರಲ್ಲಿ ನ್ಯಾಯಾಲಯ ಈ ಜಾಗ ನಮಗೆ ಸೇರಿದ್ದು ಎಂದು ಆದೇಶ ನೀಡಿದೆ. ಅಲ್ಲಿಂದ ಯಾವುದೇ ವಿವಾದ ಇಲ್ಲದಿದ್ದರೂ, 2021ರಲ್ಲಿ ನಮ್ಮ ಅನುಭವದಲ್ಲಿದ್ದ ಈ ಜಾಗಕ್ಕೆ ಇ-ಸ್ವತ್ತು ಮಾಡಿಕೊಡಲು ಕೇಳಿದಾಗ ಪಟ್ಟಭದ್ರ ಹಿತಾಸಕ್ತಿಗಳು ಲಂಚದ ಕಾರಣದಿಂದ ಯಾವುದೇ ದಾಖಲೆ ಇಲ್ಲದಿದ್ದರೂ ಪಂಚಾಯಿತಿಗೆ ಸೇರಿದ ಜಾಗವೆಂದು ಅಕ್ರಮವಾಗಿ ವಶಪಡಿಸಿಕೊಳ್ಳಲು ಮುಂದಾಗಿದ್ದಾರೆ.‌ ನಮಗೆ ಸಾಕಷ್ಟು ದೈಹಿಕ ಮತ್ತು ಮಾನಸಿಕ ಹಿಂಸೆ, ಕಿರುಕುಳವನ್ನು ನೀಡಿದ್ದಾರೆ. ಹಿರಿಯ ಅಧಿಕಾರಿಗಳು ಗಮನಹರಿಸಿ ನಮಗೆ ನ್ಯಾಯ ಕೊಡಿಸಲು ಮುಂದಾಗಬೇಕು” ಎಂದು ಕಣ್ಣೀರಿಟ್ಟರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...