ದಾವಣಗೆರೆ | ಒಳಮೀಸಲಾತಿಗೆ ಆಯೋಗ ರಚನೆ; ಮತ್ತೊಂದು ಮೂರ್ಖ ಭರವಸೆ: ಮಾದಿಗ ಜಾಗೃತಿ ಸಮಿತಿ

Date:

ಸುಪ್ರೀಂ ಕೋರ್ಟ್ ನ ಸೂಚನೆಯಂತೆ, ಒಳ ಮೀಸಲಾತಿಯನ್ನು ಜಾರಿಗೊಳಿಸಿ ಶೋಷಿತ ಸಮುದಾಯಗಳಿಗೆ ನ್ಯಾಯ ದೊರಕಿಸಿಕೊಡಲು ಒತ್ತಾಯಿಸಿ ದಾವಣಗೆರೆ ಜಿಲ್ಲಾ ಮಾದಿಗ ಜಾಗೃತಿ ಸಮಿತಿ ಮುಖ್ಯಮಂತ್ರಿಗಳಿಗೆ ಜಿಲ್ಲಾಧಿಕಾರಿಗಳ ಮುಖಾಂತರ ಮನವಿ ಸಲ್ಲಿಸಿ ಒತ್ತಾಯಿಸಿತು.

ಮನವಿ ಪತ್ರ ಸಲ್ಲಿಸಿ ಮಾತನಾಡಿದ ಮುಖಂಡರು, ಒಳಮಿಸಲಾತಿಗಾಗಿ ಮಾದಿಗ ಸಮುದಾಯ ಕಳೆದ 30 ವರ್ಷಗಳಿಂದ ಅನೇಕ ಹೋರಾಟ ಮಾಡುತ್ತಾ ಬಂದಿರುವುದು ಎಲ್ಲರಿಗೂ ತಿಳಿದಿರುವ ವಿಷಯ. ಈ ಹೋರಾಟದ ಫಲವಾಗಿ 2004 ರಲ್ಲಿ ಅಧಿಕಾರದಲ್ಲಿದ್ದ ಕಾಂಗ್ರೆಸ್ ಪಕ್ಷದ ನೇತೃತ್ವದ ಎಸ್.ಎಂ. ಕೃಷ್ಣ ಸರ್ಕಾರ ಹೋರಾಟದ ಮನವಿಗೆ ಸ್ಪಂದಿಸಿ ಹೈಕೋರ್ಟನ ನಿವೃತ್ತ ಮುಖ್ಯ ನ್ಯಾಯಾಧೀಶರಾದ ಎ.ಜೆ. ಸದಾಶಿವ ರವರ (ಆಯೋಗ) ರಚನೆ ಮಾಡಿ ನೂರಾರು ಕೋಟಿ ವ್ಯಯಮಾಡಿ ನಿಕಟವಾದ ವರದಿಯನ್ನು ತಯಾರು ಮಾಡಿತು ಎಂದರು.

ನಂತರ ಸದಾನಂದ ಗೌಡರ ಸರ್ಕಾರ ವರದಿಯನ್ನು ಅನುಷ್ಠಾನಗೊಳಿಸಲು ಪ್ರಯತ್ನಪಟ್ಟಿತು. ನಂತರ ಅನೇಕ ಸಮಸ್ಯೆಗಳ ನೆಪವೊಡ್ಡಿ ಸದಾಶಿವ ಆಯೋಗದ ವರದಿ ಮೂಲೆ ಗುಂಪಾಯಿತು. ಮತ್ತು ಈ ಹಿಂದೆ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಈ ಸಮುದಾಯದ ನ್ಯಾಯಕ್ಕೋಸ್ಕರ ಮಾಧುಸ್ವಾಮಿ ಆಯೋಗವನ್ನು ರಚನೆ ಮಾಡಿತ್ತು. ಈ ಆಯೋಗವು ವರದಿಯ ಎಲ್ಲಾ ದತ್ತಾಂಶಗಳನ್ನು ಕೂಲಂಕುಶವಾಗಿ ಅಧ್ಯಯನ ಮಾಡಿ ಸರ್ಕಾರಕ್ಕೆ ವರದಿಯನ್ನು ಸಲ್ಲಿಸಿತ್ತು. ಅದರ ಫಲವಾಗಿ ಬಸವರಾಜ ಬೊಮ್ಮಾಯಿ ರವರ ಸರ್ಕಾರ ಪರಿಶಿಷ್ಟ ಜಾತಿಯ ಮೀಸಲಾತಿಯನ್ನು ಶೇಕಡಾ 2% ಹೆಚ್ಚಿಸುವುದರೊಂದಿಗೆ ಮಾದಿಗ ಸಮುದಾಯಕ್ಕೆ ಶೇಕಡಾ 6%, ಛಲವಾದಿ ಸಮುದಾಯಕ್ಕೆ 5.5%, ಕೊರಚ,ಲಂಬಾಣಿ, ಭೋವಿ ಜಾತಿಗಳಿಗೆ 4%, ಇತರೆ 1.5% ಸಣ್ಣ ಮಟ್ಟ ಸಮುದಾಯಗಳಿಗೆ ನ್ಯಾಯ ಸಮ್ಮತವಾಗಿ ಮೀಸಲಾತಿಯನ್ನು ಹಂಚಿಕೆ ಮಾಡಿತ್ತು ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ದಾವಣಗೆರೆ

ಆದರೆ ಸಮಾಜವಾದಿ ಹಿನ್ನೆಲೆಯಿಂದ ಬಂದಿರುವಂತಹ ಸಾಮಾಜಿಕ ನ್ಯಾಯವನ್ನು ಎತ್ತಿ ಹಿಡಿಯುತ್ತೇನೆಂದು ಹೇಳುತ್ತಾ ಬಂದಿರುವ ಸಿದ್ದರಾಮಯ್ಯ ಸರ್ಕಾರವನ್ನು ನಮ್ಮ ಸಮುದಾಯವು ಹಿಂದಿನಿಂದಲೂ ಬೆಂಬಲಿಸಿತ್ತು. ಆದರೆ ನಮ್ಮ ಬೇಡಿಕೆಯನ್ನು ಅತಿ ಲಘುವಾಗಿ ತೆಗೆದುಕೊಂಡಿದ್ದರಿಂದ ನಮ್ಮ ಸಮುದಾಯ ಉಗ್ರವಾಗಿ ಖಂಡಿಸುತ್ತದೆ. ಈಗಲೂ ಸಹ ಮೂರು ಕ್ಷೇತ್ರಗಳ ಉಪ ಚುನಾವಣಾ ಸಂದರ್ಭದಲ್ಲಿಯೂ ಮೂರು ತಿಂಗಳ ಸಮಯದಲ್ಲಿ ಹೊಸದಾಗಿ ಆಯೋಗ ರಚನೆ ಮಾಡಿ ಒಳ ಮೀಸಲಾತಿ ಜಾರಿ ಮಾಡುತ್ತೇವೆ ಎಂದು ಹೇಳುತ್ತಿರುವುದು ಈ ಸಮುದಾಯಕ್ಕೆ ಮಾಡುತ್ತಿರುವ ಮತ್ತೊಂದು ಮೂರ್ಖ ಭರವಸೆ ಎಂದುಕೊಳ್ಳಬೇಕಾಗುತ್ತದೆ ಕಿಡಿಕಾರಿದರು.

ಇದನ್ನು ಓದಿದ್ದೀರಾ? ಅರಕಲಗೂಡು | ವೈದ್ಯಾಧಿಕಾರಿ ಡಾ. ಸ್ವಾಮಿಗೌಡ ಬಂಧಿಸಲು ಜನಪರ ಚಳುವಳಿಗಳ ಒಕ್ಕೂಟ ಆಗ್ರಹ

ಆದ್ದರಿಂದ ಸಮಾಜವಾದಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಎಲ್ಲ ಕಷ್ಟದ ಸಂದರ್ಭದಲ್ಲಿ ಅಹಿಂದ ಸಮುದಾಯವನ್ನು ಜಪಿಸುವ ನೀವು ಸುಪ್ರೀಂ ಕೋರ್ಟ್ ನೀಡಿರುವ ಆದೇಶದ ಅನ್ವಯ ಈ ಕೂಡಲೇ ಒಳ ಮೀಸಲಾತಿ ಜಾರಿಗೊಳಿಸಿ ಸಾಮಾಜಿಕವಾಗಿ ಶೋಷಣೆಗೊಳಗಾಗಿರುವ ಈ ಸಮುದಾಯಗಳಿಗೆ ನ್ಯಾಯ ಒದಗಿಸಬೇಕು ಎಂದು ಈ ಮನವಿಯಲ್ಲಿ ಒತ್ತಾಯಿಸಿದ್ದಾರೆ.

ಈ ಸಂದರ್ಭದಲ್ಲಿ ಮಾದಿಗ ಜಾಗೃತಿ ಸಮಿತಿಯ ಆಲೂರು ನಿಂಗರಾಜ್, ಗುಡ್ಡಪ್ಪ, ಜಯಪ್ರಕಾಶ್ ಎಂ, ಚಂದ್ರಪ್ಪ, ಜಿ ಎಚ್ ನಾಗರಾಜ್, ಮಹಾನಗರ ಪಾಲಿಕೆಯ ಮಾಜಿ ಸದಸ್ಯ ಎಂ. ಹಾಲೇಶ್, ಹೆಗ್ಗೆರೆ ರಂಗಪ್ಪ, ರವಿಕುಮಾರ್, ಶಿವಣ್ಣ ಹಾಗೂ ಕಾರ್ಯಕರ್ತರು ಹಾಜರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...