ದಾವಣಗೆರೆ | ಜಾತ್ಯತೀತ ಪಕ್ಷಕ್ಕೆ ಮತ ಹಾಕುವಂತೆ ಮಾನವ ಬಂಧುತ್ವ ವೇದಿಕೆ ಮನವಿ

Date:

ಮತದಾನದ ಹಕ್ಕು ಸಂವಿಧಾನ ನೀಡಿರುವ ಅತ್ಯಂತ ಶ್ರೇಷ್ಟವಾದದ್ದು ಮತ್ತು ಪವಿತ್ರವಾದ ಅವಕಾಶ. ಇಂತಹ ಮತವನ್ನು ನೀಡುವ ಮುಂಚೆ ಯಾರಿಗೆ ಮತದಾನ ಮಾಡಬೇಕು ಮತ್ತು ಏತಕ್ಕಾಗಿ ಎಂದು ಚಿಂತಿಸಿ ಮತದಾನ ಮಾಡಬೇಕಾದ ಜವಾಬ್ದಾರಿ ಎಲ್ಲ ನಾಗರಿಕರದ್ದಾಗಿದೆ ಎಂದು ಮಾನವ ಬಂಧುತ್ವ ವೇದಿಕೆ ರಾಜ್ಯ ಸಂಚಾಲಕ ಎ ಬಿ ರಾಮಚಂದ್ರಪ್ಪ ತಿಳಿಸಿದರು.

ದಾವಣಗೆರೆ ನಗರದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, “ಭಾರತವು ಜಾತ್ಯತೀತವಾದ ರಾಷ್ಟ್ರ. ಇಲ್ಲಿ ಎಲ್ಲ ಧರ್ಮದವರಿಗೆ, ಎಲ್ಲ ಜನವರ್ಗಕ್ಕೆ ಬದುಕುವ ಸಮಾನ ಹಕ್ಕುಗಳಿವೆ. ಇಂದು ಧರ್ಮ, ದೇವರ ಹೆಸರಿನಲ್ಲಿ ಮತವನ್ನು ಕೇಳುವ, ಕೋಮವಾದವನ್ನು ಪ್ರತಿಪಾದಿಸುವ, ಸಾಂವಿಧಾನಿಕ ಹಕ್ಕುಗಳನ್ನು ಕಸಿಯುವ ಯಾವುದೇ ಪಕ್ಷವಿದ್ದರೂ ಅದು ಜನವಿರೋಧಿ ಪಕ್ಷವಾಗಿದೆ” ಎಂದರು.

“ಕೇಂದ್ರ ಸರ್ಕಾರ ಕಳೆದ ಹತ್ತು ವರ್ಷದಲ್ಲಿ ಮಾಡಿದ ಸಾಧನೆ ಎಂದರೆ ಲಾಭದಾಯಕವಾಗಿದ್ದಂತಹ 27 ಬೃಹತ್‌ ಸಾರ್ವಜನಿಕ ಉದ್ಯಮಗಳನ್ನು ಖಾಸಗಿಯವರಿಗೆ ಮಾರಾಟ ಮಾಡಿದೆ. ಧರ್ಮವನ್ನು ರಾಜಕಾರಣಕ್ಕೆ ಎಳೆದು ತಂದು ದೇಶದ ಸಾಮರಸ್ಯ-ಭ್ರಾತೃತ್ವಕ್ಕೆ ಧಕ್ಕೆ ತಂದು ಹಾಗೂ ಸಂವಿಧಾನಕ್ಕೆ ಅಪಾಯವನ್ನು ತಂದೊಡ್ಡಲಾಗಿದೆ. ಸಂವಿಧಾನಕ್ಕಿಂತ ಮನು ಸಂಹಿತೆಯನ್ನು, ಪೌರೋಹಿತ್ಯವನ್ನು ಮುನ್ನಲೆಗೆ ತರಲಾಗುತ್ತಿದೆ. ಇಡಬ್ಲ್ಯೂಎಸ್ ಮೀಸಲಾತಿ ಮೂಲಕ ಮೀಸಲಾತಿಯ ಉದ್ದೇಶವನ್ನೇ ನಾಶಗೊಳಿಸಲಾಗಿದೆ” ಎಂದು ಆಕ್ಷೇಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ದೇಶದ ಪ್ರಗತಿಗಿಂತ ಭಾವನೆಗಳನ್ನು ಪ್ರಚೋದಿಸಿ, ದೇಶದ ತುಂಬಾ ಕೋಮು ಕಸವನ್ನು ಚೆಲ್ಲುತ್ತಿರುವ ಕೇಂದ್ರ ಸರ್ಕಾರ ಪ್ರಗತಿ ವಿರೋಧಿಯಾದದ್ದು. ರೈತರ ಸಮಸ್ಯೆ, ಮಹಿಳಾ ಸಮಸ್ಯೆ, ಕಾರ್ಮಿಕರ ಸಮಸ್ಯೆಗಳು ಹೆಚ್ಚಾಗುತ್ತಿವೆ. ದೇಶದ ಸಾಲದ ಪ್ರಮಾಣ ಹೆಚ್ಚಾಗುತ್ತಿದೆ. ದೇಶದ ಸಂಪತ್ತು ಖಾಸಗಿಯವರ ಪಾಲಾಗುತ್ತಿದೆ. ಆದ್ದರಿಂದ ಸಾಂವಿಧಾನಿಕ ಭಾರತ, ಬಹುತ್ವ ಭಾರತ, ಸಾಮರಸ್ಯ, ಸೌರ್ಹಾದತೆಯ ಭಾರತದ ಉಳುವಿಗಾಗಿ, ಪ್ರಜಾಪ್ರಭುತ್ವದ ಉಳುವಿಗಾಗಿ ಕೋಮುವಾದಿ ಧರ್ಮಾಂಧ ಪಕ್ಷಕ್ಕೆ ಮತ ನೀಡದೆ ಜಾತ್ಯತೀತ ಪಕ್ಷಕ್ಕೆ ಮತ ನೀಡಬೇಕು” ಎಂದು ಕರೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಕಾಂಗ್ರೆಸ್ ಪರಿಶಿಷ್ಟ ಪಂಗಡ ಘಟಕದ ಕಾರ್ಯಕರ್ತರ ಸಮಾವೇಶ

ಪ್ರಗತಿಪರ ಸಂಘಟನೆಗಳ ಒಕ್ಕೂಟದ ಮುಖಂಡ ಶಿವಕುಮಾರ್ ಮಾಡಾಲ್, ಅನೀಶ್ ಪಾಶ, ಪವಿತ್ರ, ಆವರಗೆರೆ ಎಚ್ ಜಿ ಉಮೇಶ್, ಸತೀಶ್ ಅರವಿಂದ್ ಸೇರಿದಂತೆ ಇತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...