ದಾವಣಗೆರೆ | ಮ್ಯಾನ್ ಹೋಲ್‌ ದುರಂತ; ಇಬ್ಬರು ಕಾರ್ಮಿಕರು ಉಸಿರುಗಟ್ಟಿ ಸಾವು

Date:

  • ಮುಂಜಾಗೃತ ಕ್ರಮ ಕೈಗೊಳ್ಳದೆ ಕೆಲಸದ ಆದೇಶ ನೀಡಿದ ಅಧಿಕಾರಿ ಬಂಧನಕ್ಕೆ ಆಗ್ರಹ
  • ಮೃತರ ಕುಟುಂಬಕ್ಕೆ ಪರಿಹಾರ, ಎಲ್ಲ ಸೌಲಭ್ಯ ವಿಸ್ತರಿಸುವ ಭರವಸೆ ನೀಡಿದ ಶಿವಣ್ಣ

ಮಲಗುಂಡಿ ಸ್ವಚ್ಛಗೊಳಿಸುತ್ತಿದ್ದ ವೇಳೆ ಅಸ್ವಸ್ಥರಾಗಿದ್ದ ಇಬ್ಬರು ಪೌರಕಾರ್ಮಿಕರು ಮೃತಪಟ್ಟಿರುವ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಬಸವನಕೋಟೆ ಗ್ರಾಮದಲ್ಲಿ ನಡೆದಿದೆ. ಈ ಸಂಬಂಧ ಬಿಳಿಚೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಸವನಕೋಟೆ ಗ್ರಾಮದ ದುಂಡಪ್ಪ (45) ಮತ್ತು ನಾಗಪ್ಪ (42) ಮೃತ ದುರ್ದೈವಿಗಳು. ಬಸವನಕೋಟೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶಶಿಧರ್ ಪಾಟೀಲ್ ಅವರು ದುಂಡಪ್ಪ ಮತ್ತು ನಾಗಪ್ಪ ಅವರಿಗೆ ಯಾವುದೇ ಸುರಕ್ಷತಾ ಸಾಧನಗಳನ್ನು ನೀಡದೆ ಮಲಗುಂಡಿ ಸ್ವಚ್ಛಗೊಳಿಸುವಂತೆ ಹೇಳಿದರು. ಇದರ ಪರಿಣಾಮವಾಗಿ ಮಲಗುಂಡಿಯಿಂದ ಹೊರಸೂಸುವ ವಿಷಕಾರಿ ಅನಿಲದಿಂದ ಉಸಿರುಗಟ್ಟಿದ ಕಾರ್ಮಿಕರು ಅಸ್ವಸ್ಥರಾಗಿದ್ದರು.

ಈ ಕುರಿತು ದೂರು ನೀಡಿದ ಕೂಡಲೇ ಅವರನ್ನು ಅರಸೀಕೆರೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಯಿತು. ಅವರಿಗೆ ಅರಸೀಕೆರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಜಿಲ್ಲಾ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಸಫಾಯಿ ಕರ್ಮಚಾರಿಗಳ ಮೃತಪಟ್ಟಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಡಕುಟುಂಬಗಳ ಆಧಾರ ಸ್ತಂಬಗಳ ಬಲಿ

ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಕೋಟೆ ಎಂ. ಶಿವಣ್ಣ, ಈ ದಿನ.ಕಾಮ್‌ ಜೊತೆಗೆ ಮಾತನಾಡಿ, “ಇಬ್ಬರು ಸಫಾಯಿ ಕರ್ಮಚಾರಿಗಳ ಸಾವಿಗೆ ಕಾರಣಗಳ ಕುರಿತು ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮತ್ತು ಜಿಲ್ಲಾ ಪಂಚಾಯಿತಿ ಸಿಇಒ ಅವರಿಂದ ವರದಿ ಕೇಳಿದ್ದೇನೆ” ಎಂದು ತಿಳಿಸಿದರು.

“ನಾವು ತನಿಖೆಗೆ ಒತ್ತಾಯಿಸಿದ್ದೇವೆ. ತನಿಖೆಗೆ ಅನುಗುಣವಾಗಿ ಕ್ರಮ ಕೈಗೊಳ್ಳಲಾಗುವುದು. ಎಂ.ಎಸ್. ಕಾಯ್ದೆ 2013ರ ಪ್ರಕಾರ ಮಲಗುಂಡಿಗಳಿಗೆ ಇಳಿಯುವಂತೆ ಆದೇಶ ನೀಡುವಂತಿಲ್ಲ. ಅದರಲ್ಲೂ ಮುಂಜಾಗೃತ ಕ್ರಮ ಕೈಗೊಳ್ಳದೆ ಕೆಲಸದ ಆದೇಶ ನೀಡಿದ ಅಧಿಕಾರಿಯನ್ನು ಕೂಡಲೇ ಬಂಧಿಸಬೇಕು” ಎಂದು ಆಗ್ರಹಿಸಿದರು.

“ಕಾರ್ಮಿಕರು ಯಾವುದೇ ಸುರಕ್ಷತಾ ಸಾಧನಗಳಿಲ್ಲದೆ 4 ಅಡಿ ಮಲಗುಂಡಿಗೆ ಇಳಿದಿದ್ದರು. ಉಸಿರಾಟಕ್ಕೆ ತೊಂದರೆಯಾಗಿರುವುದೇ ಅವರ ಸಾವಿಗೆ ಕಾರಣವಾಗಿದೆ. ಗುರುವಾರ ದುಂಡಪ್ಪ ಮತ್ತು ನಾಗಪ್ಪ ಅವರ ಕುಟುಂಬ ಸದಸ್ಯರನ್ನು ಭೇಟಿ ಮಾಡಿ ಅವರಿಗೆ ಪರಿಹಾರ ಮತ್ತು ಎಲ್ಲ ಸೌಲಭ್ಯ ವಿಸ್ತರಿಸುವಂತೆ ನೋಡಿಕೊಳ್ಳುತ್ತೇನೆ” ಎಂದು ಶಿವಣ್ಣ ಭರವಸೆ ನೀಡಿದರು.

 “ದುಂಡಪ್ಪ ಮತ್ತು ನಾಗಪ್ಪ ಅವರು ಮಲಗುಂಡಿ ಸ್ವಚ್ಛಗೊಳಿಸುವಾಗ ಅಸ್ವಸ್ಥರಾದರು. ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಈ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ” ಎಂದು ಜಗಳೂರು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ್ ತಿಳಿಸಿದ್ದಾರೆ.

WhatsApp Image 2025 07 12 at 17.38.34 e1752322718567
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...