ದಾವಣಗೆರೆ | ವಕೀಲ ಕಣ್ಣನ್ ಹತ್ಯೆ ಖಂಡಿಸಿ ಬೃಹತ್ ಪ್ರತಿಭಟನೆ

Date:

ವಕೀಲ ಕಣ್ಣನ್ ಹತ್ಯೆಯನ್ನು ಖಂಡಿಸಿ ದಾವಣಗೆರೆ ಜಿಲ್ಲಾ ವಕೀಲರ ಸಂಘದಿಂದ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಸಭೆ ಸೇರಿ ಬೃಹತ್ ಪ್ರತಿಭಟನೆ ನಡೆಸಿದರು. ನ್ಯಾಯಾಲಯದಿಂದ ಪ್ರತಿಭಟನಾ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ಬಂದ ವಕೀಲರು ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿ ಹಾಗೂ ಗೃಹ ಸಚಿವರಿಗೆ ಮನವಿ ಸಲ್ಲಿಸಿದರು.‌

ದಾವಣಗೆರೆ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಸಭೆ ಸೇರಿದ ವಕೀಲರು ಘಟನೆಯನ್ನು ಖಂಡಿಸಿ ಮಾನವ ಸರಪಳಿಯನ್ನು ರಚಿಸಿ, ಆರೋಪಿಗಳಿಗೆ ತೀವ್ರ ಸ್ವರೂಪದ ಶಿಕ್ಷೆಗೆ ಗುರಿಪಡಿಸಲು ಆವರಣದಲ್ಲಿ ಧರಣಿ ನಡೆಸಿ, ಕಣ್ಣನ್ ಎಂಬ ವಕೀಲರ ಕೊಲೆ ಮಾಡಿದ ಪಾತಕಿಗೆ ಗಲ್ಲು ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಒತ್ತಾಯಿಸಿದರು.

“ರಾಜ್ಯದ ಗಡಿಗೆ ಹೊಂದಿಕೊಂಡಿರುವ ಹೊಸೂರಿನಲ್ಲಿ ಹಾಡುಹಗಲೇ ನಡೆದ, ವಕೀಲ ಕಣ್ಣನ್ ಅವರ ಹತ್ಯೆ ಖಂಡನೀಯ. ಈ ಘಟನೆಯಿಂದ ವಕೀಲರಿಗೆ ಯಾವುದೇ ಭದ್ರತೆಯಿಲ್ಲದೆ ವಕೀಲರು ಭಯದಲ್ಲಿ ನ್ಯಾಯಾಲಯಗಳಲ್ಲಿ ಹಾಜರಾಗುವಂತೆ ಹಾಗೂ ಭಯಭೀತರಾಗಿ ಓಡಾಡುವಂತಹ ಪರಿಸ್ಥಿತಿ ಉಂಟಾಗಿದೆ” ಎಂದು ಆತಂಕ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ವಕೀಲ ಕಣ್ಣನ್‌ ಹತ್ಯೆಗೆ ಖಂಡನೆ 1

“ಹೊಸೂರು ನ್ಯಾಯಾಲಯದ ಆವರಣದಲ್ಲಿ ನಡೆಸಲಾದ ಮಾರಣಾಂತಿಕ ಹಲ್ಲೆ ಮಾಡಿದವರ ವಿರುದ್ಧ ಹಾಗೂ ಕೃತ್ಯದಲ್ಲಿ ಭಾಗಿಯಾದವರನ್ನು ಈ ಕೂಡಲೇ ಬಂಧಿಸಿ, ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಈ ಮೂಲಕ ಮುಖ್ಯಮಂತ್ರಿ ಹಾಗೂ ಗೃಹ ಸಚಿವರು ಸಂಬಂಧಪಟ್ಟ ಪೊಲೀಸ್ ಇಲಾಖೆಗೆ ನಿರ್ದೇಶನ ನೀಡಬೇಕು. ವಕೀಲರಿಗೆ ಸೂಕ್ತ ಭದ್ರತೆ ಒದಗಿಸಿಕೊಡಬೇಕು” ಎಂದು ಒತ್ತಾಯಿಸಿದರು.

ಈ ವೇಳೆ ಮಾತನಾಡಿದ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಅರುಣ್ ಕುಮಾರ್ “ಆರೋಗ್ಯಕರ ಸಮಾಜದ ರಕ್ಷಣೆಗಾಗಿ ಸೇವೆ ಸಲ್ಲಿಸುತ್ತಿರುವ ವಕೀಲರ ಮೇಲೆ ಇಂತಹ ಘಟನೆಗಳು ನಡೆಯುತ್ತಿದ್ದು, ವಕೀಲರಿಗೆ ರಕ್ಷಣೆ ಇಲ್ಲದಂತಾಗಿದೆ. ಈ ಘಟನೆ ವಕೀಲರಿಗೆ ರಕ್ಷಣೆ ನೀಡುವಲ್ಲಿ ವೈಫಲ್ಯವನ್ನು ತೋರಿಸುತ್ತದೆ. ವಕೀಲರಿಗೆ ಸೂಕ್ತ ರಕ್ಷಣೆ ನೀಡಬೇಕು. ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಬಾಗಲಕೋಟೆ | ಹುನಗುಂದ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಹೊಸ ಆ್ಯಂಬುಲೆನ್ಸ್‌

ಪ್ರತಿಭಟನೆಯಲ್ಲಿ ಜಿಲ್ಲಾ ವಕೀಲರ ಸಂಘದ ಕಾರ್ಯದರ್ಶಿ ಎಸ್ ಬಸವರಾಜ್‌, ಉಪಾಧ್ಯಕ್ಷ ಜಿ ಕೆ ಬಸವರಾಜ್ ಗೋಪನಾಳ್, ಬಸವರಾಜ್ ಎಸ್, ಸಹ ಕಾರ್ಯದರ್ಶಿ ಎ ಎಸ್ ಮಂಜುನಾಥ್, ಬಿ ಅಜ್ಜಯ್ಯ ಆವರಗೆರೆ, ಭಾಗ್ಯಲಕ್ಷ್ಮಿ ಆ‌ರ್, ಚೌಡಪ್ಪ, ಮಧುಸೂದನ್ ಟಿ ಹೆಚ್, ನಾಗರಾಜ್ ಎಲ್, ನೀಲಕಂಠಯ್ಯ ಕೆ ಎಂ, ರಾಘವೇಂದ್ರ ಎಂ, ಸಂತೋಷ್ ಕುಮಾರ್ ಜಿ ಜೆ, ಕಾರ್ಯಕಾರಿ ಸಮಿತಿ ಸದಸ್ಯ ವಾಗೀಶ್ ಕಟಗಿಹಳ್ಳಿ ಮಠ, ಹಿರಿಯ ವಕೀಲರುಗಳಾದ ಎ ಸಿ ಜಗದೀಶ್ವರ್, ಎನ್ ಶಿವಲಿಂಗಪ್ಪ, ಬಿ ಎಂ ಹನುಮಂತಪ್ಪ, ಎಲ್ ದಯಾನಂದ್, ಗುಮ್ಮನೂರು ಮಲ್ಲಿಕಾರ್ಜುನ್, ಹೆಚ್ ದಿವಾಕರ್, ಎ ಸಿ ರಾಘವೇಂದ್ರ ಸೇರಿದಂತೆ ವಕೀಲರ ಸಂಘದ ಎಲ್ಲ ಸದಸ್ಯರು, ವಕೀಲರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...