ದಾವಣಗೆರೆ | ಕುಟುಂಬ ರಾಜಕಾರಣದ ವಿರುದ್ಧ ನನ್ನ ಹೋರಾಟ: ವಿನಯ್ ಕುಮಾರ್

Date:

ಪಾಳೇಗಾರಿಕೆ, ಕುಟುಂಬ ರಾಜಕಾರಣದ ವಿರುದ್ಧ ಹೋರಾಟ ನನ್ನದು. ಸಚಿವ ಎಸ್ ಎಸ್ ಮಲ್ಲಿಕಾರ್ಜುನ್ ಅವರೇ ಹೇಳಿರುವಂತೆ ಒಲ್ಲದ ಮನಸ್ಸಿನ ಟಿಕೆಟ್ ಸಿಕ್ಕಿದೆ. ಪಕ್ಷದ ಹೈಕಮಾಂಡ್ ನಿರ್ಧಾರಕ್ಕೆ ಬದ್ಧರಾಗಿ ಚುನಾವಣೆ ಎದುರಿಸುತ್ತೇವೆ ಎಂದಿರುವ ಸಚಿವರು ನನಗೆ ಟಿಕೆಟ್ ಕೊಡಿಸಲಿ ಎಂದು ಭಾರತೀಯ ರಾಷ್ಟ್ರೀಯ ಯುವ ಕಾಂಗ್ರೆಸ್ ಔಟ್ ರೀಚ್ ವಿಭಾಗದ ರಾಜ್ಯ ಉಪಾಧ್ಯಕ್ಷ ಜಿ ಬಿ ವಿನಯ್ ಕುಮಾರ್ ಹೇಳಿದರು.

ದಾವಣಗೆರೆಯಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, “ಈಗಲೂ ಕಾಲ ಮಿಂಚಿಲ್ಲ. ಕಾಂಗ್ರೆಸ್ ಟಿಕೆಟ್ ನೀಡಿದರೆ ನಾನು ಒಂದೂವರೆಯಿಂದ ಎರಡು ಲಕ್ಷಗಳ ಮತಗಳ ಅಂತರದಲ್ಲಿ ಗೆದ್ದು ಬರುತ್ತೇನೆ. ಹಿಂದುಳಿದ ನಾಯಕನನ್ನು ಬೆಳೆಸಿದ ಕೀರ್ತಿ ಸಚಿವ ಎಸ್ ಎಸ್ ಮಲ್ಲಿಕಾರ್ಜುನ್ ಅವರಿಗೆ ಸಲ್ಲುತ್ತದೆ” ಎಂದರು.

“ಯಾರನ್ನೂ ಸೋಲಿಸುವ ಸಲುವಾಗಿ ಪಕ್ಷೇತರನಾಗಿ ಕಣಕ್ಕಿಳಿಯುವುದಿಲ್ಲ. ನಾನು ಗೆಲ್ಲಬೇಕೆಂದು ಸ್ಪರ್ಧೆ ಮಾಡುತ್ತೇನೆ. ದಾವಣಗೆರೆ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಎಲ್ಲ ಕ್ಷೇತ್ರಗಳಲ್ಲಿಯೂ ಸರ್ವೆ ನಡೆಸುತ್ತಿದ್ದೇನೆ. ಪಾದಯಾತ್ರೆಯ ವೇಳೆ 620ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಪಾದಯಾತ್ರೆ ಮಾಡಿದ್ದೇನೆ. ಟಿಕೆಟ್ ಕೈ ತಪ್ಪಿದ ಬಳಿಕ ಮತ್ತೆ ಗ್ರಾಮಗಳಿಗೆ ಹೋಗುತ್ತಿದ್ದೇನೆ. ಜನರು ಪ್ರೀತಿ, ವಿಶ್ವಾಸ ತೋರುತ್ತಿದ್ದಾರೆ. 60ರಿಂದ 65 ಹಳ್ಳಿಗಳಿಗೆ ಹೋಗಿದ್ದೇನೆ. ಎಲ್ಲರೂ ನಿಮಗೆ ಅನ್ಯಾಯವಾಗಿದೆ ಎಂದೇ ಹೇಳುತ್ತಿದ್ದಾರೆ. ಶೇ.90ರಷ್ಟು ಮಂದಿ ಪಕ್ಷೇತರರಾಗಿ ಕಣಕ್ಕಿಳಿಯುವಂತೆ ಒತ್ತಾಯ ಮಾಡುತ್ತಿದ್ದಾರೆ. ಎಲ್ಲ ವಿಚಾರಗಳನ್ನು ಚರ್ಚಿಸಿದ ಬಳಿಕ ಅಂತಿಮವಾಗಿ ಗೆದ್ದೇ ಗೆಲ್ಲುವೆ ಎಂಬ ಸರ್ವೆ ಬಂದರೆ ಸ್ಪರ್ಧೆ ಮಾಡುತ್ತೇನೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸಚಿವ ಮಲ್ಲಿಕಾರ್ಜುನ್ ಅವರೇ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಹೇಳಿರುವಂತೆ ವಿನಯ್ ಕುಮಾರ್ ದಾವಣಗೆರೆಯವರಲ್ಲ. ಟಿಕೆಟ್ ಬೇಡವೆಂದು ವರಿಷ್ಠರಿಗೆ ಹೇಳಿದ್ದೇನೆ. ನಾವು ಟಿಕೆಟ್ ಕೇಳಿರಲಿಲ್ಲ. ಆದರೂ ಹೈಕಮಾಂಡ್ ಸರ್ವೆ ಆಧರಿಸಿ ನೀಡಿದೆ. ನೀವು ಸ್ಪರ್ಧೆ ಮಾಡಬೇಕೆಂದು ಹೇಳಿದ ಕಾರಣಕ್ಕೆ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರು ಕಣಕ್ಕಿಳಿಸಲಾಗಿದೆ ಎಂದಿದ್ದಾರೆ. ಆದರೆ, ಸಿಇಸಿ ಸಭೆಯ ಪ್ಯಾನಲ್‌ವರೆಗೂ ನನ್ನ ಹೆಸರು ಹೋಗಿದೆ. ಅಲ್ಲಿಯೂ ಚರ್ಚೆಯಾಗಿದೆ. ಶಾಮನೂರು ಶಿವಶಂಕರಪ್ಪರ ಕುಟುಂಬಕ್ಕೆ ಟಿಕೆಟ್ ಬೇಡವೆಂದರೆ ನಿನಗೆ ಟಿಕೆಟ್ ಎಂದು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್ ಅವರೇ ನನಗೆ ಹೇಳಿದ್ದರು. ಮಲ್ಲಿಕಾರ್ಜುನ್ ಅವರು ಹೇಳಿದಂತೆ ಟಿಕೆಟ್ ಬೇಡ ಎಂದಿದ್ದರೆ ಹಿಂದುಳಿದ ವರ್ಗದ ಯುವ ನಾಯಕನಾದ ನನಗೆ ಕೊಡಿಸಬಹುದಿತ್ತು” ಎಂದು ಹೇಳಿದರು.

“ಕೇವಲ ಒಂದು ವರ್ಷದಲ್ಲಿ ಕಾಂಗ್ರೆಸ್ ಹಾಗೂ ಜಿಲ್ಲೆಯ ಜನರ ಮನೆಗಳಲ್ಲಿ ವಿನಯ್ ಕುಮಾರ್ ಯಾರೆಂದು ಮನೆ ಮಾತಾಗುವಂತ ಕೆಲಸ ಮಾಡಿದ್ದೇನೆ. ರಾಜಕಾರಣದಲ್ಲಿ ವಿನಯ್ ಕುಮಾರ್ ಹೆಸರು ಚಿರಪರಿಚಿತವಾಗಿದೆ. ನಾನು ಹುಟ್ಟಿದ್ದು, ಬೆಳೆದಿದ್ದು ದಾವಣಗೆರೆ ತಾಲೂಕಿನ ಕಕ್ಕರಗೊಳ್ಳದಲ್ಲಿ. ಬಾಪೂಜಿ ಆಸ್ಪತ್ರೆಯಲ್ಲಿಯೇ ಜನಿಸಿದ್ದು. ಸಾವಿರಾರು ಜನರು ರಕ್ತ ಸಂಬಂಧಿಗಳೂ ಇದ್ದಾರೆ. ತಂದೆ ತಾಯಿ ಹಾಗೂ ಸಂಬಂಧಿಕರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಶಾರದಾ ವಿದ್ಯಾಪೀಠದಲ್ಲಿ ಒಂದರಿಂದ ನಾಲ್ಕನೇ ತರಗತಿಯವರೆಗೆ ಅಭ್ಯಾಸ ಮಾಡಿದ್ದೇನೆ. ನಿಂಗಪ್ಪ ಮೇಸ್ಟ್ರು ಇದ್ದರು. ಸೆೇಟ್ ಫಾಲ್ಸ್ ಸ್ಕೂಲ್‌ನಲ್ಲಿ ನವೋದಯ ಪರೀಕ್ಷೆ ಬರೆದು ಪಾಸ್ ಆಗಿದ್ದೇನೆ. ಉನ್ನತ ವ್ಯಾಸಂಗಕ್ಕಾಗಿ ಬೆಂಗಳೂರಿಗೆ ಹೋಗಿ ಬಿಎಸ್‌ಸಿ ಸೇರಿಕೊಂಡೆ” ಎಂದು ವಿವರಿಸಿದರು.

“ಸಚಿವ ಮಲ್ಲಿಕಾರ್ಜುನ್ ಅವರು ಟಿಕೆಟ್ ನೀಡಿಕೆ ವಿಚಾರದಲ್ಲಿ ನಾನು ದಾವಣಗೆರೆಯವನಲ್ಲವೆಂದು ಯಾಕೆ ಹಾಗೆ ಹೇಳಿದರೆಂದು ಗೊತ್ತಿಲ್ಲ. ಕೆಲವು ದಿನಗಳ ಹಿಂದೆ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಗೆ ನನಗೆ ಆಹ್ವಾನ ಇರಲಿಲ್ಲ. ಯಾರೂ ಫೋನ್ ಮಾಡಿಲ್ಲ, ಕರೆದಿಲ್ಲ. ಹಾಗಾಗಿ ಹೋಗಲಿಲ್ಲ. ಬೆಳವಣಿಗೆ ತೋರಿಸಿದಾಗ ದೂರ ಇಡಲು ನಮ್ಮವರಲ್ಲವೆಂದು ಸೃಷ್ಟಿ ಮಾಡಿರುವುದು ಮೇಲ್ನೋಟಕ್ಕೆ ಗೊತ್ತಾಗುತ್ತದೆ. ದಾವಣಗೆರೆಯವರಲ್ಲ ಎಂದಾಗ ಜಾತಿ ಎತ್ತಿ ಮಾತನಾಡಲು ಆಗಲ್ಲ‌. ನನಗಷ್ಟೇ ಅಲ್ಲ, ಸಮಾಜಕ್ಕೆ ಆದ ಅವಮಾನ. ಇದು ತುಂಬಾ ಬೇಸರ ತಂದಿದೆ” ಎಂದು ವಿನಯ್ ಕುಮಾರ್ ಹೇಳಿದರು.

“ಸಿಎಂ ಸಿದ್ದರಾಮಯ್ಯ ಅವರಿಗೆ ಧನ್ಯವಾದ ಹೇಳುತ್ತೇನೆ. ಸಂಬಂಧಿಕರು, ಹಿತೈಷಿಗಳು ಸಿದ್ದರಾಮಯ್ಯ ಅವರ ಬಳಿ ಕಳೆದ ಏಳೆಂಟು ತಿಂಗಳ ಹಿಂದೆ ಕೇಳಿಕೊಂಡಿದ್ದರು. ಸಿದ್ದರಾಮಯ್ಯ ಸೂಚನೆ ಕೊಟ್ಟ ಬಳಿಕ ಅವರು ಬಂದು ನನಗೆ ಹೇಳಿದರು. ಆ ನಂತರವೇ ನಾನು ಹೆಚ್ಚಾಗಿ ರಾಜಕಾರಣದಲ್ಲಿ ತೊಡಗಿಸಿಕೊಂಡೆ. ಸಿದ್ದರಾಮಯ್ಯ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ನನ್ನ ಶಕ್ತಿ‌‌‌. ನನ್ನ ಪರವಾಗಿ ಹೇಳಿದ್ದಾರೆ, ಮಾತನಾಡಿದ್ದಾರೆ. ಸಿಎಂಗೂ ಇಂಟಲಿಜೆನ್ಸಿ ಮಾಹಿತಿ ಇರುತ್ತದೆ. ದೆಹಲಿಯಲ್ಲಿಯೂ ನನ್ನ ಹೆಸರು ಹೇಳಿದ್ದಾರೆ. ಸಿದ್ದರಾಮಯ್ಯರ ಆಶೀರ್ವಾದ ಇಲ್ಲದಿದ್ದರೆ ರಾಜಕಾರಣದಲ್ಲಿ ಇಷ್ಟು ಹೆಸರು ಮಾಡಲು ಸಾಧ್ಯವಾಗುತ್ತಿರಲಿಲ್ಲ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಬಿಜೆಪಿ ಭಯದ ವಾತಾವರಣ ಸೃಷ್ಟಿ ಮಾಡುತ್ತಿದೆ: ಸಚಿವ ಶಿವಾನಂದ ಪಾಟೀಲ್‌

ಅಹಿಂದ ಒಕ್ಕೂಟ ಅಧ್ಯಕ್ಷ ದಳವಾಯಿ ಹೇಮಂತ್, ಕಾಡುಗೊಲ್ಲ ಸಂಘಟನೆಯ ಪ್ರಧಾನ ಕಾರ್ಯದರ್ಶಿ ಜಿ ರಂಗಸ್ವಾಮಿ, ಎಚ್ ಸಿ ಮಲ್ಲಪ್ಪ, ಪುರಂದರ ಲೋಕಿಕೆರೆ, ಕೆ ಎಚ್ ಮಂಜುನಾಥ, ಶರತ್ ಕುಮಾರ್, ರವಿಕುಮಾರ್ ಸೇರಿದಂತೆ ಇತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...