ದಾವಣಗೆರೆ | ಅಹಿಂದ ಸಮುದಾಯಗಳನ್ನು ಅಧಿಕಾರದಿಂದ ದೂರವಿಡಲು ವಿಪಕ್ಷಗಳ ಹುನ್ನಾರ : ಜಿ.ಬಿ.ವಿನಯ್ ಕುಮಾರ್

Date:

“ಮುಡಾ ಪ್ರಕರಣದ ನೆಪದಲ್ಲಿ ಅಹಿಂದ ಸಮುದಾಯದ ನಾಯಕ ಸಿಎಂ ಸಿದ್ದರಾಮಯ್ಯರನ್ನು ಟಾರ್ಗೆಟ್ ಮಾಡಲಾಗುತ್ತಿದೆ” ಎಂದು ಯುವ ಮುಖಂಡ ಜಿ.ಬಿ.ವಿನಯ್ ಕುಮಾರ್ ಹೇಳಿದರು.

ದಾವಣಗೆರೆಯಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಸಿದ್ದರಾಮಯ್ಯನವರಂತಹ ಪ್ರಾಮಾಣಿಕ ರಾಜಕಾರಣಿ ರಾಜಕೀಯದಲ್ಲಿ ಮುಂದುವರೆದರೆ ಭ್ರಷ್ಟಾಚಾರಿಗಳಿಗೆ, ಬಂಡವಾಳಶಾಹಿಗಳಿಗೆ, ಪಾಳೇಗಾರಿಕೆ ಮನಸ್ಥಿತಿಯವರಿಗೆ, ಅಧಿಕಾರ ದಾಹ ಉಳ್ಳವರಿಗೆ, ತಮ್ಮ ಉದ್ದೇಶವನ್ನು ಈಡೇರಿಸಿಕೊಳ್ಳಲು ಅವಕಾಶ ಸಿಗುವುದಿಲ್ಲ ಎಂದು ಸಿದ್ದರಾಮಯ್ಯನವರನ್ನು ಟಾರ್ಗೆಟ್ ಮಾಡಲಾಗುತ್ತಿದೆ. ಹಾಗಾಗಿ ರಾಜ್ಯದ ಆಹಿಂದ ಸಮುದಾಯಗಳು ಸಿದ್ದರಾಮಯ್ಯನವರ ಪರ ನಿಲ್ಲಬೇಕು” ಎಂದು ಮನವಿ ಮಾಡಿದರು.

ಸಿದ್ದರಾಮಯ್ಯನಂತವರು ರಾಜಕೀಯದಲ್ಲಿ ಮುಂದುವರೆದರೆ ಉಳಿದ ಹಿಂದುಳಿದ, ತಳ ಸಮುದಾಯಗಳಿಗೆ ರಾಜಕೀಯ ಅವಕಾಶ ದೊರೆಯುತ್ತವೆ. ಇಂತಹ ಪ್ರಭಾವಿ ಅಹಿಂದ ನಾಯಕರನ್ನು ರಾಜಕೀಯವಾಗಿ ಮುಗಿಸಿದರೆ ಈ ಸಮುದಾಯದವರು ವಿಧಿಯಿಲ್ಲದೆ ನಮ್ಮ ಹಿಂಬಾಲಕರಾಗುತ್ತಾರೆ ಎಂಬ ಭಾವನೆಯಿಂದ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಹುನ್ನಾರ ಮಾಡಲಾಗುತ್ತಿದೆ. ಇದನ್ನು ಸೂಕ್ಷ್ಮವಾಗಿ ಗಮನಿಸಿ ಜಾತಿವಾದಿ, ಬಂಡವಾಳಶಾಹಿಗಳ ಈ ಹುನ್ನಾರವನ್ನು ಅರ್ಥಹಿಸಿಕೊಂಡು ಅಹಿಂದ ನಾಯಕರ ರಕ್ಷಣೆಗೆ ನಿಲ್ಲಬೇಕಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕರ್ನಾಟಕದಲ್ಲಿ ಸಿದ್ದರಾಮಯ್ಯ ಹೊರತಾದ ಕಾಂಗ್ರೆಸ್ ಅಸ್ತಿತ್ವವೇ ಇಲ್ಲ. ಸಿದ್ದರಾಮಯ್ಯ ಅವರನ್ನು ಕಟ್ಟಿ ಹಾಕಿದಲ್ಲಿ ಕಾಂಗ್ರೆಸ್ ನ್ನು ಅಧಿಕಾರದಿಂದ ದೂರ ಇಡಬಹುದು ಎಂದು ಸಿದ್ದರಾಮಯ್ಯ ವಿರುದ್ಧ ಹೋರಾಟ ಮಾಡುತ್ತಿರುವವರ ಉದ್ದೇಶ. ಸಂಸತ್ತಿನಲ್ಲೂ ಈ ಬಗ್ಗೆ ಕಾಂಗ್ರೆಸ್ ನ 9 ಮಂದಿ ಸಂಸದರು ಈ ಬಗ್ಗೆ ದನಿ ಎತ್ತಬೇಕು. ಅದರಲ್ಲೂ ದಾವಣಗೆರೆ ಸಂಸದರು ವಿಶೇಷವಾಗಿ ದನಿ ಎತ್ತಬೇಕು. ಏಕೆಂದರೆ ಸಂಸದರು ಗೆಲುವು ಸಾಧಿಸಿ ದೆಹಲಿಗೆ ಹೋಗಿರುವುದು ಸಿದ್ದರಾಮಯ್ಯನರಿಂದಲೇ. ಅವರೇ ಅವರ ಗೆಲುವಿಗೆ ಕಾರಣ, ಇಂಥ ಸಂದಿಗ್ಧ ಸ್ಥಿತಿಯಲ್ಲೂ ಸಿದ್ದರಾಮಯ್ಯ ಪರ ಏಕೆ ದನಿ ಎತ್ತಿಲ್ಲ. ನಿನ್ನೆ ಮೈಸೂರಿನ ಜನಾಂದೋಲನ ಕಾರ್ಯಕ್ರಮಕ್ಕೂ ಕೂಡ ಬಂದಿಲ್ಲ, ಕಾರ್ಯಕ್ರಮಕ್ಕೆ ಅವರು ಗೈರು ಹಾಜರಾಗಿದ್ದರು, ಏಕೆ? ಎಂದು ಪ್ರಶ್ನಿಸಿದರು.

ಇದನ್ನು ಓದಿದ್ದೀರಾ? ತುಮಕೂರು | ಜಮೀನು ಹಿಂದಿರುಗಿಸಲು ಕರ್ನಾಟಕ ಬ್ಯಾಂಕ್ ಒಪ್ಪಿಗೆ : ಪ್ರತಿಭಟನೆ ಹಿಂಪಡೆದ ರೈತ ಸಂಘ

ಸುದ್ದಿಗೋಷ್ಠಿಯಲ್ಲಿ ಸ್ವಾಭಿಮಾನಿ ಬಳಗದ ಶರತ್ ಕುಮಾರ್, ಸಾಧಿಕ್, ಪುರಂದರ ಲೋಕಿಕೆರೆ, ಅಯ್ಯಣ್ಣ ಇನ್ನಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...