ದಾವಣಗೆರೆ | ಹಸಿವಿನಿಂದ ಜ್ಞಾನತಪ್ಪಿ ಬಿದ್ದಿದ್ದ ವೃದ್ಧನ ರಕ್ಷಣೆ; ಮಾನವೀಯತೆ ಮೆರೆದ ಪೊಲೀಸ್‌ ಪೇದೆ

Date:

ಹಸಿವು ಮತ್ತು ಬಿಸಿಲಿನ ಪ್ರಖರತೆಯಿಂದ ಜ್ಞಾನತಪ್ಪಿ ಬಿದ್ದಿದ್ದ ವೃದ್ಧ ಭಿಕ್ಷುಕನೋರ್ವರಿಗೆ ಪೊಲೀಸ್ ಪೇದೆಯೊಬ್ಬರು ಮರುಜೀವ ನೀಡಿದ ಘಟನೆ ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನಲ್ಲಿ ಜರುಗಿದೆ.

ತಾಲೂಕಿನ ಕುಂದೂರಿನ ಸರ್ಕಾರಿ ಬಾಲಕಿಯರ ವಿದ್ಯಾರ್ಥಿ ನಿಲಯದ ಕಾಂಪೌಂಡ್ ಪಕ್ಕ ಭಿಕ್ಷುಕನೊಬ್ಬ ಎಚ್ಚರತಪ್ಪಿ ಬಿದ್ದಿರುವುದನ್ನು ಕಂಡ ಕುಂದೂರು ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಸಿ ಎಸ್ ಷಣ್ಮುಖ ಅವರು ಸಮೀಪದ ಕೂಲಂಬಿ ಉಪಠಾಣೆಯ ಪೊಲೀಸ್ ಮುಖ್ಯಪೇದೆ ಕೆ ರಾಜು ಮತ್ತು ಕುಂದೂರು ಗ್ರಾಮ ಪಂಚಾಯಿತಿಯ ಪಿಡಿಒ ವಿಜಯಗೌಡ ಅವರಿಗೆ ಮಾಹಿತಿ ಮುಟ್ಟಿಸುತ್ತಾರೆ.

ಮುಖ್ಯಪೇದೆ ಕೆ ರಾಜು ಅವರು ಕೂಡಲೇ ಸ್ಥಳಕ್ಕೆ ಆಗಮಿಸಿ ಪರೀಶೀಲಿಸಿ, ಷಣ್ಮುಖ ಮತ್ತು ಪಿಡಿಒ ವಿಜಯಗೌಡ ಹಾಗೂ ಕೆಲವರ ಸಹಾಯದಿಂದ, ಬಹಳ ದಿನಗಳಿಂದ ಆಹಾರ ಸೇವಿಸದೆ ಬಿಸಿಲಿನ ತೀವ್ರತೆಗೆ ಜ್ಞಾನತಪ್ಪಿ ನಿತ್ರಾಣಗೊಂಡು ಬಿದ್ದಿದ್ದ ಭಿಕ್ಷುಕನಿಗೆ ನೀರು ಕುಡಿಸಿದರು. ಅವರು ಸ್ವಲ್ಪ ಚೇತರಿಸಿಕೊಂಡ ಬಳಿಕ ಊಟ ಮಾಡಿಸುತ್ತಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಮೈಸೂರು | ದೇವರಾಜ ಅರಸು ಜನಸಾಮಾನ್ಯರು ಸ್ಮರಿಸುವಂತಹ ನಾಯಕ: ಎಂಎಲ್‌ಸಿ ವಿಶ್ವನಾಥ್

“ಅನಾಮಧೇಯ ಭಿಕ್ಷುಕನ ಹೆಸರು ಮತ್ತು ಊರನ್ನು ಕೇಳಲು ಪ್ರಯತ್ನಿಸಿದಾಗ, ಆತ ಹರಪನಹಳ್ಳಿ ತಾಲೂಕಿನ ಉಚ್ಚಂಗಿದುರ್ಗದವರೆಂದು ತಿಳಿದುಬಂದಿದ್ದು, ಹೆಸರು ರಾಮ ಎಂಬುದು ಅಸ್ಪಷ್ಟವಾಗಿದೆ” ಎಂದು ಹೇಳಿದ್ದಾರೆ.

“ಹೆಚ್ಚಿನ ಚಿಕಿತ್ಸೆಗಾಗಿ ಆತನನ್ನು ಹೊನ್ನಾಳಿಯ ಆಸ್ಪತ್ರೆಗೆ ಆಂಬುಲೆನ್ಸ್ ಮೂಲಕ ಕಳುಹಿಸಲಾಗಿತ್ತು. ಇದೀಗ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅವರು ಚೇತರಿಸಿಕೊಂಡಿದ್ದಾರೆ” ಮುಖ್ಯಪೇದೆ ಕೆ.ರಾಜು ಮಾಹಿತಿ ನೀಡಿದ್ದು, ಮಾನವೀಯತೆ ಮೆರೆದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...