ದಾವಣಗೆರೆ | ಮೇ.4ರಂದು ಪ್ರಿಯಾಂಕಾ ಗಾಂಧಿ ಪ್ರಚಾರ: ಸಚಿವ ಮಲ್ಲಿಕಾರ್ಜುನ

Date:

ರೈತರು ದೇಶದ ಬೆನ್ನೆಲುಬು, ದಾವಣಗೆರೆ ಕಾಂಗ್ರೆಸ್ ಪಕ್ಷಕ್ಕೆ ರೈತರು ಬೆನ್ನೆಲುಬಾಗಿರುವುದು ಸಂತಸದ ಸಂಗತಿ. ರೈತ ಸಂಘದವರು ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡಿರುವುದು ದಾವಣಗೆರೆಯ ಕಾಂಗ್ರೆಸ್ ಅಭ್ಯರ್ಥಿಗೆ ಆನೆ ಬಲ ಬಂದಂತಾಗಿದೆ ಎಂದು ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಎಸ್ ಎಸ್ ಮಲ್ಲಿಕಾರ್ಜುನ ತಿಳಿಸಿದರು.

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಕಾರ್ಯಕರ್ತರುಗಳು ನಗರದ ಎಂಸಿಸಿಬಿ ಬ್ಲಾಕ್‌ನ ಕಾಂಗ್ರೆಸ್ ಪಕ್ಷದ ಕಚೇರಿ ಆವರಣದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡಿ ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿದರು.

“ಎಲ್ಲೇ ಹೋದರೂ ಕೂಡಾ ರೈತ ಸಂಘದವರು ನಮಗೆ ಚಿರಪರಿಚಿತರು. ಆನಗೋಡು ಗ್ರಾಮದಲ್ಲಿ ರೈತರ ಹುತಾತ್ಮ ಭವನ ಮಾಡಬೇಕು. ರೈತರ ಸಮುದಾಯ ಭವನ ನಿರ್ಮಿಸಬೇಕು. ಕೈಗೆಟುಕುವ ದರದಲ್ಲಿ ಕೃಷಿ ಸಾಮಾಗ್ರಿಗಳು ಸಿಗಬೇಕು ಎಂಬ ಹಲವು ಬೇಡಿಕೆಗಳಿವೆ. ಅವುಗಳನ್ನು ಹಂತ ಹಂತವಾಗಿ ಸರಿಪಡಿಸಲಾಗುವುದು. ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಮೇಲೆ ದೊಡ್ಡ ರೈತರಿಗೆ ಉಪಯೋಗವಾಗಿದೇಯೇ ಹೊರತು ಸಣ್ಣ ಹಾಗೂ ಬಡ ರೈತರಿಗೆ ಉಪಯೋಗವಾಗಿಲ್ಲ” ಎಂದು ದೂರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕಾಂಗ್ರೆಸ್ ಅಭ್ಯರ್ಥಿ ಡಾ‌ ಪ್ರಭಾ ಮಲ್ಲಿಕಾರ್ಜುನ ಅವರು ರೈತನ ಮಗಳು, ರೈತರ ಕಷ್ಟಗಳನ್ನು ಕಣ್ಣಾರೆ ಕಂಡವರು. ಕೃಷಿ ಪರಿಣಿತರಾಗಿರುವ ಅವರಿಗೆ ರೈತರ ಪ್ರತಿಯೊಂದು ವಿಚಾರಗಳಲ್ಲಿ ಅಪಾರವಾದ ಕಾಳಜಿ ಇದೆ. ನಾನು ಹಾಗೂ ನಮ್ಮ ತಂದೆಯವರಿಗಿಂತ ಹೆಚ್ಚಿನ ರೀತಿಯಲ್ಲಿ ಸಮಸ್ಯೆಗಳನ್ನು ಫಾಲೋಅಪ್ ಮಾಡಿ ಸರಿಪಡಿಸುವರು” ಎಂದು ಭರವಸೆ ವ್ಯಕ್ತಪಡಿಸಿದರು.

“ರೈತರ ಪ್ರತಿ ಹೋರಾಟದಲ್ಲಿ ನಾವುಗಳು ನಿಮ್ಮ ಜತೆ ಇರುತ್ತೇವೆ ಎಂದ ಅವರು ಮೇ.4ರಂದು ಜಿಲ್ಲೆಗೆ ಪ್ರಿಯಾಂಕಾಗಾಂಧಿ ಚುನಾವಣಾ ಪ್ರಚಾರಕ್ಕೆ ಬರುತ್ತಿದ್ದಾರೆ. ತಾವುಗಳೆಲ್ಲ ಕುಟುಂಬ ಸಮೇತರಾಗಿ ಹಸ್ತದ ಗುರುತಿಗೆ ಮತ ನೀಡಿ ಅಭ್ಯರ್ಥಿ ಪ್ರಭಾ ಮಲ್ಲಿಕಾರ್ಜುನ ಅವರನ್ನು ಗೆಲ್ಲಿಸಬೇಕು” ಎಂದು ಮನವಿ ಮಾಡಿದರು.

“ಯಲೋದಹಳ್ಳಿ ಬಡ ರೈತ ಕಾಳೇಶ್ ಅವರು ಸಭೆಯಲ್ಲಿ ಸಚಿವ ಎಸ್ ಎಸ್ ಮಲ್ಲಿಕಾರ್ಜುನ ಅವರಿಗೆ ಚುನಾವಣಾ ಖರ್ಚಿಗಾಗಿ ₹20,000 ದೇಣಿಗೆ ನೀಡಿದರು. ಬಡ ರೈತನಾಗಿದ್ದರೂ ಯಲೋದಹಳ್ಳಿ ಕಾಳೇಶ್ ಅವರ ಸಹಾಯ ದೊಡ್ಡದು ಅವರ ಅಭಿಮಾನಕ್ಕೆ ಕೋಟಿ ಕೊಟ್ಟರೂ ಸಾಲದು. ಇದು ಗೆಲುವಿನ ಶುಭಸಂಕೇತ” ಎಂದು ರೈತನ ಸೇವೆ ಸ್ಮರಿಸಿದರು.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ರಾಮಮಂದಿರ ಉದ್ಘಾಟನೆಗೆ ಹೋಗಿದ್ದರೆ ಗಂಗಾ ಜಲದಿಂದ ಶುದ್ಧಿಗೊಳಿಸುತ್ತಿದ್ದರು : ಮಲ್ಲಿಕಾರ್ಜುನ ಖರ್ಗೆ

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯ ಕಾರ್ಯದರ್ಶಿ ಮಲ್ಲಶೆಟ್ಟಿಹಳ್ಳಿ ಚನ್ನಬಸಪ್ಪ, ಜಿಲ್ಲಾ ಕಾರ್ಯದರ್ಶಿ ಚಿನ್ನಸಮುದ್ರ ಶೇಖರನಾಯ್ಕ್, ಜಿಲ್ಲಾ ಸಂಚಾಲಕ ಟಿ ಆರ್ ಗಿರಿಯಾಪುರ ಲಕ್ಷ್ಮಣ, ಚನ್ನಗಿರಿ ತಾಲೂಕು ಅಧ್ಯಕ್ಷ ಯಲ್ಲೋದಹಳ್ಳಿ ಕಾಳೇಶ್, ಹೊನ್ನಾಳಿ ಹಾಗೂ ನ್ಯಾಮತಿ ತಾಲೂಕು ಅಧ್ಯಕ್ಷ ಮಾಸಡಿ ಬರಮಪ್ಪ, ದಾವಣಗೆರೆ ತಾಲೂಕು ಅಧ್ಯಕ್ಷ ಮಂಡಲೂರು ವಿಶ್ವನಾಥ್, ಜಿಲ್ಲೆಯ ವಿವಿಧ ಭಾಗದ ಮುಖಂಡರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...