ದಾವಣಗೆರೆ | ʼಹಿಂದಿ ಹೇರಿಕೆʼ ಎಂಬುದು ಕೇವಲ ರಾಜಕೀಯ ದೊಂಬರಾಟವೇ?; ಕನ್ನಡಪರ ಹೋರಾಟಗಾರರ ಆಕ್ರೋಶ

Date:

ಕೇಂದ್ರ ಸರ್ಕಾರ ʼಹಿಂದಿ ಹೇರಿಕೆʼ ಮಾಡುತ್ತಿದೆಯೆಂದು ಬೊಬ್ಬೆಯಿಡುವ ರಾಜ್ಯ ಸರ್ಕಾರ ರಾಜಕೀಯ ಲಾಭಕ್ಕಾಗಿ ಹಿಂಬಾಗಿಲ ಮೂಲಕ ಹಿಂದಿ ಮತ್ತು ಇಂಗ್ಲಿಷ್‌ ಭಾಷೆಗಳನ್ನು ಹೇರಿಕೆ ಮಾಡುವ ಕೆಲಸ ಮಾಡುತ್ತಿದೆಯೇ? ಎನ್ನುವ ಅನುಮಾನಗಳು ಹುಟ್ಟಿಕೊಂಡಿವೆ.

ಯುವಜನೋತ್ಸವ ಕಾರ್ಯಕ್ರಮದಲ್ಲಿ ಆಯೋಜಿಸಿದ್ದ ʼಕಥೆ ಬರೆಯುವ ಸ್ಪರ್ಧೆʼಯಲ್ಲಿ ದೆಹಲಿ ಮಟ್ಟದ ಆಯ್ಕೆಗೆ ಹಿಂದಿ ಮತ್ತು ಇಂಗ್ಲಿಷ್ ಕಥೆಗಳನ್ನು ಪರಿಗಣಿಸಿರುವುದು ವಿವಾದಕ್ಕೆ ಕಾರಣವಾಗಿದ್ದು, ರಾಜ್ಯ ಸರ್ಕಾರ ಕನ್ನಡ ಭಾಷೆಯ ಕತ್ತು ಹಿಸುಕುವ ಕೆಲಸ ಮಾಡುತ್ತಿದೆ ಎನ್ನುವ ಆಕ್ರೋಶ ವ್ಯಕ್ತವಾಗುತ್ತಿದೆ.

“ದಾವಣಗೆರೆಯಲ್ಲಿ ಜನವರಿ 5 ಮತ್ತು 6ರಂದು ಆಯೋಜಿಸಿದ್ದ ರಾಜ್ಯಮಟ್ಟದ ಯುವಜನೋತ್ಸವ ಕಾರ್ಯಕ್ರಮದಲ್ಲಿ ಕಥೆ ಬರೆಯುವ ಸ್ಪರ್ಧೆಯಲ್ಲಿ ದೆಹಲಿ ಮಟ್ಟದ ಆಯ್ಕೆಗೆ ಕೇವಲ ಹಿಂದಿ ಮತ್ತು ಇಂಗ್ಲಿಷ್ ಸ್ಪರ್ಧೆಗೆ ಅವಕಾಶ ನೀಡಲಾಗಿದೆ. ಇದು ಕನ್ನಡಾಸಕ್ತರ, ಕನ್ನಡಾಭಿಮಾನಿಗಳ ಅಸಮಾಧಾನಕ್ಕೆ ಕಾರಣವಾಗಿದೆ. ಸರ್ಕಾರದ ಕನ್ನಡಪರ ಕಾಳಜಿಯ ಬಗ್ಗೆ ಅನುಮಾನಗಳು ಮೂಡುತ್ತಿವೆ. ಇದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸೇರಿ ಕನ್ನಡಕ್ಕೆ ಮಾಡಿರುವ ದ್ರೋಹವಾಗಿದೆ” ಎಂಬುದು ಕನ್ನಡಿಗರ ಆರೋಪ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕನ್ನಡದ ಪರವಾಗಿ ಸರ್ಕಾರ ಕೆಲಸ ಮಾಡುವಂತಿದ್ದರೆ, ‘ಹಿಂದಿ ಮತ್ತು ಇಂಗ್ಲಿಷ್ʼನಲ್ಲಿ ನಾವು ಸ್ಪರ್ಧಿಗಳನ್ನು ಕಳುಹಿಸುವುದಿಲ್ಲ, ಕನ್ನಡದ ಸ್ಪರ್ಧಿಗಳನ್ನು ಮಾತ್ರ ಕಳುಹಿಸುತ್ತೇವೆ. ಇದಕ್ಕೆ ಅವಕಾಶ ಕೊಡಿ’ಯೆಂದು ಕೇಳುವ ಅವಕಾಶವಿತ್ತು. ಇಂತಹ ಮುಕ್ತ ಅವಕಾಶವೊಂದನ್ನು ಕಳೆದುಕೊಂಡು ಸರ್ಕಾರ ಕನ್ನಡಕ್ಕೆ ಮೋಸ ಮಾಡಿ ಹಿಂದಿ ಮತ್ತು ಇಂಗ್ಲಿಷ್ ಸ್ಪರ್ಧೆಗೆ ಅವಕಾಶ ನೀಡಿದೆ. ಇಷ್ಟಾದರೂ ಕನ್ನಡಿಗರ ಮೇಲೆ ಅನ್ಯ ಭಾಷೆಗಳು ಹೇರಿಕೆಯಾಗುತ್ತಿವೆಯೆಂದು ದೂರುವುದು ಎಷ್ಟು ಸರಿ” ಎನ್ನುವುದು ಕನ್ನಡಪರ ಹೋರಾಟಗಾರರ ಮಾತು.

“ಯುವಜನೋತ್ಸವದಲ್ಲಿ ರಾಜ್ಯದ ಯುವಕ, ಯುವತಿಯರಿಗೆ ಕಥೆ ಮತ್ತು ಕವನ ಬರೆಯುವ ಸ್ಪರ್ಧೆ ಏರ್ಪಡಿಸಲಾಗಿತ್ತು. ಇದರಲ್ಲಿ ಹಿಂದಿ ಮತ್ತು ಇಂಗ್ಲಿಷ್ ಭಾಷೆಯಲ್ಲಿ ಕಥೆ, ಕವನ ಬರೆಯಲು ಅವಕಾಶ ಕೊಡಲಾಗಿತ್ತು. ಈ ವಿಚಾರವಾಗಿ ಅಲ್ಲಿನ ಅಧಿಕಾರಿಗಳಿಗೆ ಕೇಳಿದಾಗ ಅವರು, ʼಹಿಂದಿ, ಇಂಗ್ಲಿಷ್ ಮತ್ತು ಕನ್ನಡದಲ್ಲಿ ಬರೆಸಿದ್ದೇವೆ. ನಮ್ಮ ರಾಜ್ಯದಲ್ಲಿ ಮಾತ್ರ ಕನ್ನಡದಲ್ಲಿ ಬರೆದವರಿಗೆ ಬಹುಮಾನ ನೀಡುತ್ತೇವೆ. ಆದರೆ ದೆಹಲಿಯಲ್ಲಿ ಬರೆಯುವ ಮುಖ್ಯ ಸ್ಪರ್ಧೆಗೆ ಹಿಂದಿ ಮತ್ತು ಇಂಗ್ಲಿಷ್‌ ಭಾಷೆಗಳಲ್ಲಿ ಮಾತ್ರ ಬರೆಯಬೇಕಾಗುತ್ತದೆ. ಹಾಗಾಗಿ ಅವರನ್ನು ಆಯ್ಕೆ ಮಾಡಲಾಗುತ್ತದೆʼಯೆಂದು ಹೇಳಿದ್ದಾರೆ” ಎಂದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಧರ್ಮ-ಜಾತಿ ದುರ್ಬಳಕೆ ಮಾಡುವವರಿಂದ ಯುವಜನತೆ ದೂರವಿರಬೇಕು: ಸಿಎಂ ಸಿದ್ದರಾಮಯ್ಯ

ಕರವೇ ಜಿಲ್ಲಾಧ್ಯಕ್ಷ ರಾಮೇಗೌಡ ಮಾತನಾಡಿ, “ಹಿಂದಿ ಮತ್ತು ಇಂಗ್ಲಿಷ್‌ನಲ್ಲಿ ಕಥೆ ಬರೆದವರು ಮಾತ್ರ ದೆಹಲಿ ಮಟ್ಟಕ್ಕೆ ಆಯ್ಕೆಯಾಗುವುದಕ್ಕೆ ನಮ್ಮ ವಿರೋಧವಿದೆ. ರಾಜ್ಯದಲ್ಲಿರುವ ಎಲ್ಲ ಕೇಂದ್ರ ಸರ್ಕಾರಕ್ಕೆ ಒಳಪಟ್ಟಿರುವ ಇಲಾಖೆಗಳು ತ್ರಿಭಾಷೆ ಸೂತ್ರ ಅನುಸರಿಸುತ್ತವೆಯೆಂದು ರಾಜ್ಯ ಸರ್ಕಾರ ಬೊಬ್ಬೆ ಹೊಡೆಯುತ್ತದೆ. ಆದರೆ ದೆಹಲಿಯಲ್ಲಿ ಮಾತ್ರ ಯಾವ ಸೂತ್ರವೂ ಇಲ್ಲ. ದೆಹಲಿಯಲ್ಲಿ ಇಂಗ್ಲಿಷ್ ಮತ್ತು ಹಿಂದಿ ಎನ್ನುವುದಾದರೆ ನಮ್ಮ ರಾಜ್ಯದಲ್ಲಿ ನಾವು ಹಿಂದಿಯನ್ನು ಹೇಗೆ ಒಪ್ಪಿಕೊಳ್ಳಬೇಕು” ಎಂದು ಆಕ್ರೋಶ ಹೊರಹಾಕಿದರು.

“ಕನ್ನಡದ ಸ್ಪರ್ಧಿಯೊಬ್ಬರು ದೆಹಲಿಯ ಸ್ಪರ್ಧೆಯಲ್ಲಿ ಭಾಗವಹಿಸಿ ಕನ್ನಡದಲ್ಲಿ ಪರೀಕ್ಷೆ ಬರೆದು ಗೆದ್ದರೆ, ಕನ್ನಡದ ಕೀರ್ತಿ ಹೆಚ್ಚಲಿದೆ. ಕರ್ನಾಟಕಕ್ಕೆ ಮತ್ತೊಂದು ಹೆಮ್ಮೆಯ ಗರಿ ಬರುತ್ತದೆ. ಆದರೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಗಳು ಇಂಥ ಕನ್ನಡ ದ್ರೋಹದ ಕೆಲಸ ಮಾಡಿವೆ.‌ ಇದರ ಬಗ್ಗೆ ಜನಪ್ರತಿನಿಧಿಗಳು ಧ್ವನಿ ಎತ್ತಬೇಕು, ಕೇಂದ್ರ ಸರ್ಕಾರದ ಯಾವುದೇ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕನ್ನಡ ಭಾಷೆಗೂ ಮಾನ್ಯತೆ ಸಿಗುವಂತೆ ಒತ್ತಡ ತಂದು ಕನ್ನಡದಲ್ಲಿ ಸ್ಪರ್ಧೆಯನ್ನು ಎದುರಿಸುವಂತೆ ಮಾಡಬೇಕು” ಎಂದು ಆಗ್ರಹಿಸಿದರು.

“ಕನ್ನಡದ ಬಹಳಷ್ಟು ಅಧಿಕಾರಿಗಳಿರುವ ಜಿಲ್ಲಾಡಳಿತದಲ್ಲೂ ಕೂಡ ಕನ್ನಡ ಪ್ರಜ್ಞೆ ಮತ್ತು ಕನ್ನಡ ಭಾಷಾಜ್ಞಾನ ತಿಳಿದಿಲ್ಲವೇ ಎನ್ನುವುದು ಮತ್ತೊಂದು ಪ್ರಶ್ನೆಯಾಗಿದೆ. ರಾಜ್ಯಮಟ್ಟದ ಯುವಜನೋತ್ಸವ ಕಾರ್ಯಕ್ರಮದ ಉದ್ಘಾಟನೆಗಾಗಿ ಏರ್ಪಡಿಸಿದ್ದ ವೇದಿಕೆಯಲ್ಲಿ ವಿವಿಐಪಿಗಳಿಗೆ ಮೀಸಲಾಗಿದ್ದ ಆಸನಕ್ಕೆ ಬರುವ ದ್ವಾರದಲ್ಲಿ ಕನ್ನಡ ತರ್ಜುಮೆಯಲ್ಲಿ ʼವಿಶೇಷ ಆಹ್ವಾನಿತರುʼ ಬದಲಿಗೆ ʼವಿಶೇಷ ಅವನೀತರುʼ ಎಂಬುದಾಗಿ ತರ್ಜುಮೆ ಮಾಡಿ ಕನ್ನಡಕ್ಕೆ ಅವಮಾನ ಮಾಡಿದೆ. ಇದರಿಂದ ನಮ್ಮ ಜಿಲ್ಲಾಡಳಿತ ಕನ್ನಡ ಭಾಷಾ ಜ್ಞಾನದಲ್ಲಿ ಎಷ್ಟು ಬಡವಾಗಿದೆ ಎಂಬುದನ್ನು ಎತ್ತಿ ತೋರಿಸಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ಮಂಡ್ಯ | ಹಿಂದಿ ಹೇರಿಕೆಗೆ ವಿರೋಧ; ರಾಜ್ಯ ಪಠ್ಯಕ್ರಮದಲ್ಲಿ ಹಿಂದಿ ಪಾಠಗಳನ್ನು ಕೈಬಿಡಲು ಒತ್ತಾಯ

“ನಮ್ಮ ರಾಜ್ಯಾಡಳಿತವೇ ಪರಭಾಷೆಯನ್ನು ಕನ್ನಡಿಗರ ಮೇಲೆ ಹೇರಿದಂತಾಗಿದೆ. ಬೇರೆ ಯಾರೋ ಹೇರಿದ್ದಲ್ಲ. ಕನ್ನಡ ಭಾಷೆಯ ಸ್ಪರ್ಧೆಯನ್ನು ಮೇಲ್ಮಟ್ಟಕ್ಕೆ ನಿರಾಕರಿಸಿರುವುದು ಕನ್ನಡಿಗರ ಅವಗಣನೆ ಮಾಡಿದಂತಾಗಿದೆ. ಕನ್ನಡಿಗರಾದ ನಮಗೆಲ್ಲರಿಗೂ ನೋವು ಕೊಡುವ ವಿಷಯವಿದು” ಎಂದು ಅಸಮಾಧಾನ ವ್ಯಕ್ತಪಡಿಸಿದರು.

“ಒಟ್ಟಿನಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಹಾಗೂ ಇಲಾಖೆಗಳೂ ಕೂಡ ಈ ಬಗ್ಗೆ ಗಮನ ಹರಿಸದೆ ಕನ್ನಡಕ್ಕೆ ದ್ರೋಹ ಮಾಡಿವೆ. ಮೇಲ್ಮಟ್ಟದ ಸ್ಪರ್ಧೆಗೆ ಹಿಂದಿ ಮತ್ತು ಇಂಗ್ಲಿಷ್ ಮಾತ್ರ ಬೇಕಾದರೆ ಕನ್ನಡ ಯಾಕೆ ಬೇಕು? ಎಂದು ಯುವಜನರಲ್ಲಿ ಅನಿಸುವುದು ಸಾಮಾನ್ಯವಾಗುತ್ತದೆ. ಮೊದಲು ಈ ಕನ್ನಡ ವಿರೋಧಿ ಧೋರಣೆಯನ್ನು ಬಿಟ್ಟು ದೆಹಲಿಯಲ್ಲಿ ನಡೆಯುವ ಸ್ಪರ್ಧೆ ಮತ್ತು ವಿವಿಧ ಪರೀಕ್ಷಾ ಸ್ಪರ್ಧೆಗಳನ್ನು ಕನ್ನಡಿಗರು ಕನ್ನಡದಲ್ಲಿಯೇ ಬರೆಯುವಂತಾಗಬೇಕು. ಈ ಬಗ್ಗೆ ಸರ್ಕಾರಗಳು ಕ್ರಮವಹಿಸಬೇಕು” ಎಂದು ಸಾರ್ವಜನಿಕರು ಹಾಗೂ ವಿಶೇಷವಾಗಿ ಕನ್ನಡಿಗರು ಒತ್ತಾಯಿಸಿದರು.

WhatsApp Image 2025 11 17 at 5.21.38 PM
ವಿನಾಯಕ್ ಚಿಕ್ಕಂದವಾಡಿ
+ posts

ದಾವಣಗೆರೆ, ಚಿತ್ರದುರ್ಗ ಜಿಲ್ಲಾ ಸಂಯೋಜಕರು

ಪೋಸ್ಟ್ ಹಂಚಿಕೊಳ್ಳಿ:

ವಿನಾಯಕ್ ಚಿಕ್ಕಂದವಾಡಿ
ವಿನಾಯಕ್ ಚಿಕ್ಕಂದವಾಡಿ
ದಾವಣಗೆರೆ, ಚಿತ್ರದುರ್ಗ ಜಿಲ್ಲಾ ಸಂಯೋಜಕರು

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...