ದಾವಣಗೆರೆ | ಕೆ ಎಸ್ ವೈನ್ ಲ್ಯಾಂಡ್‌ ಸ್ಥಳಾಂತರಕ್ಕೆ ಒತ್ತಾಯ; ಜು.19ರಂದು ಪ್ರತಿಭಟನೆ

Date:

ದಾವಣಗೆರೆ ನಗರದ ವಿನೋಬ ನಗರದ 4ನೇ ಮುಖ್ಯ ರಸ್ತೆಯಲ್ಲಿ ಕೆ ಎಸ್ ವೈನ್ ಲ್ಯಾಂಡ್‌ ಸ್ಥಳಾಂತರಕ್ಕೆ ಒತ್ತಾಯಿಸಿ ಜುಲೈ 19ರಂದು ಪ್ರತಿಭಟನೆ ನಡೆಸಲಾಗುವುದೆಂದು ಮಹಿಳೆಯರು ಎಚ್ಚರಿಕೆ ನೀಡಿದರು.

ದಾವಣಗೆರೆಯಲ್ಲಿ ಸುದ್ದಿಗೋಷ್ಟಿ ಉದ್ದೇಶಿಸಿ ಮಾತನಾಡಿದ ವಿನೋಬ ನಗರದ ನಿವಾಸಿ ಅನುಪಮಾ ರವಿಕುಮಾರ್ ಅವರು, “ಮದ್ಯದಂಗಡಿ ಸ್ಥಳಾಂತರಿಸುವಂತೆ ಒತ್ತಾಯಿಸಿ ಈ ಹಿಂದೆಯೇ ಮನವಿ ಸಲ್ಲಿಸಿದ್ದು, ಸಂಬಂಧಪಟ್ಟ ಇಲಾಖೆಗಳ, ಅಧಿಕಾರಿಗಳ ಗಮನಕ್ಕೆ ತಂದಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಹಲವು ಬಾರಿ ಅಬಕಾರಿ ಇಲಾಖೆಯ ಗಮನಕ್ಕೆ ತಂದರೂ ಕೂಡಾ ಇದಕ್ಕೆ ಕಿವಿಗೊಡದೆ ನಿರ್ಲಕ್ಷ್ಯ ವಹಿಸಿದ್ದಾರೆ. ಹಾಗಾಗಿ ಕೂಡಲೇ ಬಾರ್ ಸ್ಥಳಾಂತರ ಮಾಡಬೇಕೆಂದು ಒತ್ತಾಯಿಸಿ ಜುಲೈ 19ರಂದು ಬೆಳಿಗ್ಗೆ 11-30ಕ್ಕೆ ಬಾರ್ ಮುಂಭಾಗ ಪ್ರತಿಭಟನೆ ನಡೆಸಲಾಗುವುದು” ಎಂದು ಹೇಳಿದರು.

“ವಿನೋಬ ನಗರದ 4ನೇ ಮುಖ್ಯ ರಸ್ತೆ ಹೆಬ್ಬಾಗಿನಲ್ಲಿ ಈ ಮದ್ಯದಂಗಡಿ ಇದ್ದು, ಈ ರಸ್ತೆಯು ವಿನೋಬ ನಗರ, ಯಲ್ಲಮ್ಮ ನಗರ, ಶಾಂತಿ ನಗರಕ್ಕೆ ಹೋಗುವ ನಿವಾಸಿಗಳಿಗೆ ಈ ವೈನ್ ಅಂಗಡಿಯಿಂದ ಬಹಳಷ್ಟು ತೊಂದರೆಗಳಾಗುತ್ತಿವೆ. ಈ ಅಂಗಡಿಯು ಹೆಬ್ಬಾಗಿಲಿನಲ್ಲಿರುವ ಕಾರಣ ಮದ್ಯಪಾನ ಸೇವಿಸುವವರು ಕುಡಿದ ಅಮಲಿನಲ್ಲಿ ರಸ್ತೆಯ ಮೇಲೆ, ರಸ್ತೆಯ ಬದಿಯಲ್ಲಿ ಅಡ್ಡಾದಿಡ್ಡಿಯಾಗಿ ವಾಹನಗಳನ್ನು ನಿಲ್ಲಿಸುವುದು ಹಾಗೂ ಮದ್ಯಪಾನದ ನಶೆಯಲ್ಲಿ ಪರಸ್ಪರ ಜಗಳ ಮಾಡಿ ಸಾರ್ವಜನಿಕರಿಗೆ ಬಹಳಷ್ಟು ತೊಂದರೆ ಉಂಟುಮಾಡುತ್ತಿರುವ ಘಟನೆಗಳು ಸಾಮಾನ್ಯವಾಗಿವೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕುಡಿತದ ನಶೆಯಲ್ಲಿ ಅಕ್ಕಪಕ್ಕ ಇರುವಂತಹ ವಾಸ ಸ್ಥಳಗಳ, ಮನೆಗಳ ಮುಂದೆ ಮೂತ್ರ ವಿಸರ್ಜನೆ ಮಾಡುವುದು, ವಾಂತಿ ಮಾಡುವುದರಿಂದ ಮನೆಯಲ್ಲಿರುವ, ಮಹಿಳೆಯರು, ವಿದ್ಯಾರ್ಥಿಗಳಿಗೆ ಇದರಿಂದ ಬಹಳ ತೊಂದರೆಯಾಗುತ್ತದೆ. ಅಕ್ಕಪಕ್ಕದ ಮನೆಯಲ್ಲಿರುವ ಹೆಣ್ಣು ಮಕ್ಕಳಿಗೆ ಮನೆಯಿಂದ ಹೊರಗೆ ಬರಲು ಇರಿಸು ಮುರುಸಾಗಿರುತ್ತದೆ. ಇದಲ್ಲದೇ ನಶೆಯಲ್ಲಿ ತಮ್ಮ ವಾಹನಗಳನ್ನು ಅಕ್ಕಪಕ್ಕದ ಮನೆಗಳ ಮುಂದೆ ನಿಲ್ಲಿಸಿ ತೊಂದರೆ ಕೊಡುವುದು ಸಾಮಾನ್ಯವಾಗಿದೆ” ಎಂದು ಆರೋಪಿಸಿದರು.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ‌ | ಭಾವೈಕ್ಯತೆಯ ಮೊಹರಂ; ಸಾರ್ವಜನಿಕರಿಗೆ ತಿನಿಸು, ಪಾನೀಯ ವಿತರಣೆ

“ಈ ಹಿಂದೆ ಬಡಾವಣೆ ಪೊಲೀಸ್ ಠಾಣೆಯಲ್ಲಿ ಖುದ್ದು ಈ ಮದ್ಯದ ಅಂಗಡಿ ಮಾಲೀಕರು ಅಂಗಡಿಯನ್ನು ಸ್ಥಳಾಂತರಿಸುವುದಾಗಿ ಲಿಖಿತ ರೂಪದಲ್ಲಿ ಪತ್ರ ನೀಡಿದ್ದರು. ಆದರೂ ಸಹ ಅಬಕಾರಿ ಇಲಾಖೆಯವರು ಈ ಮದ್ಯದ ಅಂಗಡಿ ಸ್ಥಳಾಂತರಿಸದೆ ಪರವಾನಿಗೆ ನವೀಕರಿಸಿದ್ದಾ”ರೆ ಎಂದು ದೂರಿದರು.

ವಿಜಯಲಕ್ಷ್ಮೀ ನಿರಂಜನ್, ಭಾಗೀರಥಿ ಪಾಂಡುರಂಗ, ಸರೋಜಾ ವಿಜಯಕುಮಾರ್, ಷಂಷದ್ ಸೈಯದ್ ಸೈಫುಲ್ಲಾ, ನಿವೇದಿತಾ ಸಚ್ಚಿನ್, ವಿಜಯಮ್ಮ ಶೀಲವಂತ್ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...