ದಾವಣಗೆರೆ | ಹನಿ ನೀರಾವರಿ ಸಹಾಯಧನ ಕಡಿತ; ಕಾಂಗ್ರೆಸ್ ವಿರುದ್ಧ ಬಿಜೆಪಿಗರ ಆಕ್ರೋಶ

Date:

ಹನಿ ನೀರಾವರಿ ಸಹಾಯಧನ ಕಡಿತಗೊಳಿಸಿರುವುದನ್ನು ಖಂಡಿಸಿದ ದಾವಣಗೆರೆ ಜಿಲ್ಲಾ ಬಿಜೆಪಿ ವಕ್ತಾರ ಬಿ ಎಂ ಸತೀಶ್ ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದರು.

ದಾವಣಗೆರೆಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಹನಿ ನೀರಾವರಿ ಯೋಜನೆಗೆ ನೀಡುತ್ತಿದ್ದ ಸಹಾಯಧನದ ಮೊತ್ತವನ್ನು ದಿಢೀರನೆ ಶೇ.75 ರಿಂದ ಶೇ.45ಕ್ಕೆ ಇಳಿಸಿದ್ದು 2024-25ನೇ ಸಾಲಿನ ಆರ್ಥಿಕ ವರ್ಷಕ್ಕೆ ಅನ್ವಯವಾಗಲಿದೆಯೆಂದು ರಾಜ್ಯದ ಕಾಂಗ್ರೆಸ್‌ ಸರ್ಕಾರ ಆದೇಶ ಹೊರಡಿಸಿದೆ. ಕಾಂಗ್ರೆಸ್ ಸರ್ಕಾರ ರೈತರ ಮೇಲೆ ಮತ್ತಷ್ಟು ಆರ್ಥಿಕ ಹೊರೆ ಹೇರಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಪ್ರತಿ ಹನಿಗೆ ಅಧಿಕ ಬೆಳೆ ಘೋಷಣಾ ವಾಕ್ಯದಡಿ ಕೃಷಿಯಲ್ಲಿ ನೀರಿನ ಬಳಕೆಯ ದಕ್ಷತೆ ಹೆಚ್ಚಿಸಲು ಹನಿ, ತುಂತುರು ನೀರಾವರಿಯಂತಹ ಸೂಕ್ಷ್ಮ ನೀರಾವರಿ ಪದ್ಧತಿಯನ್ನು ಅಳವಡಿಸಿಕೊಳ್ಳುವುದಾಗಿದೆ. ನೀರಿನ ಬಳಕೆಯ ಸಾಮರ್ಥ್ಯ ಮತ್ತು ಸೂಕ್ತ ನಿರ್ವಹಣೆಯಿಂದ ಬೆಳೆಗಳ ಉತ್ಪಾದನೆ ಹೆಚ್ಚಿಸಿ, ರೈತರ ‘ಆದಾಯʼವನ್ನು ದ್ವಿಗುಣಗೊಳಿಸುವುದು ಯೋಜನೆಯ ಮುಖ್ಯ ಉದ್ದೇಶವಾಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಈ ಮೊದಲು ರೈತರಿಗೆ ಶೇ.75ರಷ್ಟು ಸಬ್ಸಿಡಿ ದೊರೆಯುತ್ತಿತ್ತು. ಇದರಲ್ಲಿ ಕೇಂದ್ರ ಸರ್ಕಾರದ ಪಾಲು ಶೇ.27 ಮತ್ತು ರಾಜ್ಯ ಸರ್ಕಾರದ ಪಾಲು ಶೇ.48ರಷ್ಟಿತ್ತು. ಕೇಂದ್ರದ ಬಿಜೆಪಿ ಸರ್ಕಾರ ಪ್ರತಿ ವರ್ಷದಂತೆ ಈ ವರ್ಷವೂ ಶೇ.27ರಷ್ಟು ಸಬ್ಸಿಡಿ ಮುಂದುವರೆಸಿದೆ. ಆದರೆ ರಾಜ್ಯದ ಕಾಂಗ್ರೆಸ್ ಸರ್ಕಾರ ಸಬ್ಸಿಡಿಯನ್ನು ಶೇ.48ರ ಬದಲಿಗೆ ಶೇ.18ಕ್ಕೆ ಇಳಿಸಿ ಆದೇಶ ಹೊರಡಿಸಿದೆ. ಇದರಿಂದ ರೈತರಿಗೆ ಸಿಗುತ್ತಿದ್ದ ಸಬ್ಸಿಡಿ ಶೇ.75 ರಿಂದ ಶೇ.45ಕ್ಕೆ ಇಳಿಕೆಯಾಗಿದೆ. ಇದರಿಂದ ರೈತರಿಗೆ ದೊಡ್ಡ ಪ್ರಮಾಣದಲ್ಲಿ ಆರ್ಥಿಕ ಸಂಕಷ್ಟ ತಂದೊಡ್ಡಿದೆ. ಗ್ಯಾರಂಟಿ ಯೋಜನೆಗಳ ಪರಿಣಾಮ ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯವಾಗಿದೆ. ಯೋಜನೆಗಳು ನಿಂತಲ್ಲೇ ನಿಂತಿವೆ. ರಾಜ್ಯ ಸರ್ಕಾರದಲ್ಲಿ ಆರ್ಥಿಕ ಶಿಸ್ತು ಇಲ್ಲವಾಗಿದ್ದು, ಆರ್ಥಿಕವಾಗಿ ದಿವಾಳಿಯಾಗಿದೆ” ಎಂದು ಆರೋಪಿಸಿದರು.

“ಮೊದಲಿಗೆ ಹಾಲಿನ ಮಾರಾಟ ದರ ಹೆಚ್ಚಳ ಮಾಡಿ ಗ್ರಾಹಕರಿಗೆ ನೀಡಿದ ಬೆನ್ನಲ್ಲೇ ಕೋಚಿಮುಲ್ (ಕೋಲಾರ- ಚಿಕ್ಕಬಳ್ಳಾಪುರ) ಹಾಲು ಒಕ್ಕೂಟ ರೈತರಿಂದ ಖರೀದಿಸುವ ದರವನ್ನು ₹2 ಕಡಿಮೆ ಮಾಡಿ ಆದೇಶ ಹೊರಡಿಸಿದೆ. ಹಾಲು ಉತ್ಪಾದನೆ ಹೆಚ್ಚಾಗಿದೆ ಎಂಬ ಕಾರಣ ನೀಡಿ, ಇಂದು ಬೆಳಿಗ್ಗೆಯಿಂದಲೇ ಜಾರಿಗೆ ಬರುವಂತೆ ರೈತರಿಂದ ಖರೀದಿಸುವ ಪ್ರತಿ ಲೀಟ‌ರ್ ದರವನ್ನು 33.40 ರಿಂದ 31.40 ಇಳಿಸಿ ಆದೇಶಿಸಲಾಗಿದೆ. ರೈತರು ಹೆಚ್ಚು ಹಾಲು ಉತ್ಪಾದಿಸುತ್ತಿದ್ದಾರೆ. ರೈತರ ಹಾಲಿನ ಉತ್ಪಾದನಾ ಸಾಮರ್ಥ್ಯ ಕುಗ್ಗಿಸಬೇಕು ಎಂಬ ಕುತಂತ್ರದಿಂದ ಹಾಲಿನ ಖರೀದಿ ದರ ಕಡಿತ ಮಾಡಿರುವುದು ರಾಜ್ಯದ ಕಾಂಗ್ರೆಸ್ ಸರ್ಕಾರದ ದುರಾಡಳಿತಕ್ಕೆ ಉದಾಹರಣೆಯಾಗಿದೆ” ಎಂದು ಆರೋಪಿಸಿದರು.

“ರೈತರ ಸಾಮರ್ಥ್ಯದ ಕಗ್ಗೊಲೆ. ಇಂತಹ ರೈತ ವಿರೋಧಿ, ಜನವಿರೋಧಿ ಸರ್ಕಾರ ಸ್ವಾತಂತ್ರ್ಯ ಭಾರತದ ಇತಿಹಾಸದಲ್ಲಿಯೇ ಇಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

“ಹಾಲಿನ ದರ ಹೆಚ್ಚಿಸಿಲ್ಲ. ಪ್ರತಿ ಪ್ಯಾಕೆಟ್‌ನಲ್ಲಿ 50 ಎಂಎಲ್ ಹೆಚ್ಚು ನೀಡಿ ₹2.10ರ ಬದಲು ₹2 ಹೆಚ್ಚಳ ಮಾಡಿದೆಯೆಂದು ಸಮರ್ಥಿಸಿಕೊಂಡ ಆರ್ಥಿಕ ತಜ್ಞ ಎಂದು ಕರೆಸಿಕೊಳ್ಳುವ 15 ಬಾರಿ ಬಜೆಟ್ ಮಂಡಿಸಿರುವ ಅನುಭವಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಾಲಿನ ಉತ್ಪಾದನೆ ಹೆಚ್ಚಳದ ಕಾರಣ ನೀಡಿ, ರೈತರಿಂದ ಖರೀದಿಸುವ ದರವನ್ನು ಕಡಿಮೆ ಮಾಡಿರುವುದಕ್ಕೆ ಏನು ಹೇಳುತ್ತಾರೆ?. ಎಲ್ಲ ದರಗಳನ್ನು ಹೆಚ್ಚಿಸಿ ಇದೀಗ ರೈತರಿಗೆ ಹೊರೆ ಮಾಡಲು ಹೊರಟಿದ್ದಾರೆ” ಎಂದರು.

ಈ ಸುದ್ದಿ ಓದಿದ್ದೀರಾ? ತುಮಕೂರು | ಕೋಮು ಸೌಹಾರ್ದತೆಗಾಗಿ ದನಿ ಎತ್ತುವಂತೆ ಮನವಿ; ಶ್ರೀಗಳಿಂದ ಉತ್ತಮ ಸ್ಪಂದನೆ

ಮಳಲ್ಕೆರೆ ಸದಾನಂದ, ಬಲ್ಲೂರು ಬಸವರಾಜ್, ಕಟ್ಟೂರು ಶಿವಕುಮಾರ್, ಆರನೇಕಲ್ಲು ವಿಜಯಕುಮಾರ್, ಅಣಜಿ ಗುಡ್ಡಶ್, ಬಾತಿ ಬಿ ಕೆ ಶಿವಕುಮಾರ್, ಅಣಬೇರು ಶಿವಪ್ರಕಾಶ್ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...