ದಾವಣಗೆರೆ | ಅವೈಜ್ಞಾನಿಕ ಸೇತುವೆ ನಿರ್ಮಾಣದ ವಿರುದ್ಧ ರಸ್ತೆ ತಡೆ ಪ್ರತಿಭಟನೆ; 40ಕ್ಕೂ ಅಧಿಕ ಮಂದಿ ಬಂಧನ

Date:

ದಾವಣಗೆರೆಯ ಹಳೆ ಕುಂದುವಾಡದಿಂದ ಬನ್ನಿಕೋಡಿಗೆ ಸಂಪರ್ಕ ಕಲ್ಪಿಸುವಂತೆ ಸೇತುವೆ ನಿರ್ಮಾಣ ಕಾಮಗಾರಿ ಅವೈಜ್ಞಾನಿಕವಾಗಿರುವುದನ್ನು ವಿರೋಧಿಸಿ ರಸ್ತೆ ತಡೆ ಪ್ರತಿಭಟನೆ ನಡೆಸಿದ 40ಕ್ಕೂ ಅಧಿಕ ಗ್ರಾಮಸ್ಥರನ್ನು ಪೊಲೀಸರು ಬಂಧಿಸಿದ್ದಾರೆ.

ನೇರವಾಗಿ ಸಂಪರ್ಕ ಕಲ್ಪಿಸುವ ವೈಜ್ಞಾನಿಕ ಸೇತುವೆ ನಿರ್ಮಿಸುವಂತೆ ಆಗ್ರಹಿಸಿ ಹಳೆ ಕುಂದುವಾಡ ಗ್ರಾಮಸ್ಥರು ಹೆದ್ದಾರಿ ಬಂದ್ ಮಾಡುವ ಮೂಲಕ ಬೆಳಿಗ್ಗೆ 9ರಿಂದಲೇ ಕಾಮಗಾರಿ ನಿಲ್ಲಿಸುವಂತೆ ರಸ್ತೆ ತಡೆದು ಬೃಹತ್ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಅಧಿಕಾರಿಗಳು ಮತ್ತು ಗ್ರಾಮಸ್ಥರ ನಡುವೆ ಮಾತಿನ ಚಕಮಕಿ ನಡೆದು ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ ಪೊಲೀಸರು ಗ್ರಾಮಸ್ಥರನ್ನು ವಶಕ್ಕೆ ಪಡೆದರು.

ಗ್ರಾಮದ ಮುಖಂಡ ಮಂಜುನಾಥ್ ಕುಂದವಾಡ ಮಾತನಾಡಿ, “ಬನ್ನಿಕೋಡು ರಸ್ತೆಗೆ ಸಂಪರ್ಕ ಕಲ್ಪಿಸುವ ಸೇತುವೆ  ನಿರ್ಮಾಣಕ್ಕೆ ಹಲವು ವರ್ಷಗಳಿಂದ ಮನವಿ ಸಲ್ಲಿಸಿದ್ದು, ಅವೈಜ್ಞಾನಿಕವಾಗಿ ದೂರದಲ್ಲಿ ತಿರುವಿನಿಂದ ಕೂಡಿದ ಸೇತುವೆ ನಿರ್ಮಾಣ ಮಾಡುತ್ತಿದ್ದಾರೆ. ಅವೈಜ್ಞಾನಿಕ ಮತ್ತು ಕಳಪೆ ಕಾಮಗಾರಿಯಂತೆ ತೋರುತ್ತದೆ. ಈ ಹಿನ್ನಲೆಯಲ್ಲಿ ಸಂಬಂಧಪಟ್ಟ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ಮತ್ತು ಜಿಲ್ಲಾಧಿಕಾರಿಗಳು ಇದರ ಬಗ್ಗೆ ಗಮನಹರಿಸಿ ಜನರ ಅನುಕೂಲದ ದೃಷ್ಟಿಯಿಂದ ನೇರವಾಗಿ ರಸ್ತೆಯನ್ನು ನಿರ್ಮಾಣ ಮಾಡಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಈ ರಸ್ತೆ ಮುಂದೆ ಸಾಗಿ ಹರಿಹರ ಶಿವಮೊಗ್ಗ ಹೆದ್ದಾರಿಗೆ ಕೂಡಿಕೊಳ್ಳಲಿದ್ದು, ನೂರಾರು ವಾಹನಗಳು ಇಲ್ಲಿ ಸಂಚರಿಸುತ್ತವೆ. ತಿರುವಿನಿಂದ ಕೂಡಿದ ಅವೈಜ್ಞಾನಿಕ ಸೇತುವೆಯಿಂದ ಇಲ್ಲಿ ಅಪಘಾತಗಳು ಸಂಭವಿಸಿದರೆ ಜೀವಹಾನಿಯಾಗುವ ಸಂಭವವಿದ್ದು, ಇದರ ನೇರ ಪರಿಣಾಮ ಕುಂದುವಾಡ ಗ್ರಾಮಸ್ಥರು ಅನುಭವಿಸುವಂತಾಗುತ್ತದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ?: ಹೂಳಲು ಸ್ಮಶಾನವಿಲ್ಲದೆ ತಿ. ನರಸೀಪುರದಿಂದ ದಾವಣಗೆರೆಗೆ ಮೃತದೇಹ ಕೊಂಡೊಯ್ದ ಅಲೆಮಾರಿ ಕೊರಚ ಸಮುದಾಯ

ಮಾಜಿ ಮೇಯರ್ ಗುರುನಾಥ್, ಮಂಜುನಾಥ್ ಕುಂದುವಾಡ, ಗೌಡ್ರು ಮಂಜುನಾಥ್, ದಯಾನಂದ್, ಮಂಜುನಾಥ್ ಎಚ್ ಜಿ, ಮಧು, ಅಣ್ಣಪ್ಪ, ಮಾರುತಿ, ಜಿ ಎಚ್ ಗಣೇಶ, ಮಿಟ್ಲಕಟ್ಟೇ ಚಂದ್ರಪ್ಪ, ರಾಜು ಎನ್ ಟಿ, ಶ್ರೀನಿವಾಸ್ ಎಚ್ ಎಸ್, ಮಹಂತೇಶ್, ಚಂದ್ರಪ್ಪ ಸೇರಿದಂತೆ 40ಕ್ಕೂ ಅಧಿಕ ಮಂದಿ ಗ್ರಾಮಸ್ಥರು ಪ್ರತಿಭಟನೆಯಲ್ಲಿ ನಿರತರಾಗಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...