ದಾವಣಗೆರೆ | ಪಿಎಂಶ್ರೀ ಯೋಜನೆಯಡಿ 7 ಶಾಲೆಗಳ ಉನ್ನತೀಕರಣಕ್ಕೆ 3.71ಕೋಟಿ ಅನುದಾನ: ಸಂಸದ ಸಿದ್ದೇಶ್ವರ

Date:

ಕೇಂದ್ರ ಸರ್ಕಾರವು ಪಿಎಂಶ್ರೀ(ಪಿಎಂ ಸ್ಕೂಲ್ಸ್ ಫಾರ್ ರೈಸಿಂಗ್ ಇಂಡಿಯಾ) ಶಾಲೆಗಳು ಎಂಬ ಹೊಸ ಪುರಸ್ಕೃತ ಯೋಜನೆಯನ್ನು ಜಾರಿಗೆ ತಂದಿದೆ. ದಾವಣಗೆರೆ ಲೋಕಸಭಾ ಕ್ಷೇತ್ರದ 7 ಶಾಲೆಗಳ ಅಭಿವೃದ್ಧಿಗಾಗಿ ತಲಾ ₹53 ಲಕ್ಷದಂತೆ ಒಟ್ಟು ₹3.71 ಕೋಟಿ ಅನುದಾನ ಬಿಡುಗಡೆಯಾಗಲಿದೆ ಎಂದು ದಾವಣಗೆರೆ ಸಂಸದ ಜಿ.ಎಮ್ ಸಿದ್ದೇಶ್ವರ ಮಾಹಿತಿ ನೀಡಿದರು.

“2022-23ನೇ ಸಾಲಿನಿಂದ 2026-2027ನೇ ಸಾಲಿನವರೆಗೆ ಸುಮಾರು 14,500 ಶಾಲೆಗಳಿಗೆ ಮೂಲ ಸೌಕರ್ಯ ಒದಗಿಸಿ ಬಲಪಡಿಸುವ ಉದ್ದೇಶ ಹೊಂದಿದ್ದು, ಈ ಯೋಜನೆಗಾಗಿ ಸರ್ಕಾರ ₹27,360 ಕೋಟಿ ಅನುದಾನವನ್ನು ಮೀಸಲಿರಿಸಲಾಗಿದೆ” ಎಂದು ಹೇಳಿದರು.

“ಕಳೆದ ಡಿಸೆಂಬರ್‌ನಲ್ಲಿ ಮೊದಲನೇ ಹಂತದಲ್ಲಿ ಶಾಲೆಗಳನ್ನು ಆಯ್ಕೆ ಮಾಡುವ ಸಲುವಾಗಿ ಚಾಲೆಂಚ್ ಮೆಥೆಡ್ ಮೂಲಕ ಅಧಿಸೂಚನೆ ಹೊರಡಿಸಲಾಗಿತ್ತು. ಅದರಂತೆ ಆಯಾ ಶಾಲೆಗಳು ತಮ್ಮಲ್ಲಿರುವ ಮೂಲ ಸೌಕರ್ಯದ ವಿವರ, ಶೈಕ್ಷಣಿಕ ಸಾಮರ್ಥ್ಯ, ಶಿಕ್ಷಣದ ಗುಣಮಟ್ಟದ ವಿವರಗಳನ್ನು ಅಂತರ್ಜಾಲದಲ್ಲಿ ಮಾಹಿತಿ ನೀಡಿದ್ದು, ಇದರ ಅನುಸಾರ ಮೊದಲನೇ ಹಂತದಲ್ಲಿ ರಾಜ್ಯದ 129 ಶಾಲೆಗಳು ಪಿಎಂಶ್ರೀ ಯೋಜನೆಯಡಿ ಆಯ್ಕೆಯಾಗಿವೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಹೊನ್ನಾಳಿ ವಿಧಾನಸಭಾ ಕ್ಷೇತ್ರದ ಬೆನಕನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಚನ್ನಗಿರಿ ತಾಲೂಕಿನ ಚಿರಡೋಣಿ ಶಾಲೆ, ಹರಿಹರ ತಾಲೂಕಿನ ದೊಗ್ಗಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ದಾವಣಗೆರೆ ತಾಲೂಕಿನ ಹಳೆಬಾತಿ ಗುಡ್ಡದ ಕ್ಯಾಂಪ್ ಶಾಲೆ, ನ್ಯಾಮತಿ ತಾಲೂಕಿನ ಸುರಹೊನ್ನೆ ಶಾಲೆ, ಜಗಳೂರು ತಾಲೂಕಿನ ತಮಲೇಹಳ್ಳಿ ಹಾಗೂ ರಾಮಘಟ್ಟ ಶಾಲೆಗಳು ಈ ಯೋಜನೆಯಡಿ ಆಯ್ಕೆಯಾಗಿವೆ. ಆಯ್ಕೆಯಾಗಿರುವ ಪ್ರತಿಯೊಂದು ಶಾಲೆಗಳಲ್ಲಿ ಮೂಲ ಸೌಕರ್ಯ, ಬಾಲಕರ ಹಾಗೂ ಬಾಲಕಿಯರ ಶೌಚಾಲಯ, ಬೋಧನಾ ಸಿಬ್ಬಂದಿ ಮತ್ತು ಸಾಮರ್ಥ್ಯ ಅಭಿವೃದ್ಧಿ, ಪ್ರಧಾನ ಮಂತ್ರಿ ಪೋಷಣೆ ಅಭಿಯಾನ, ಕಲಿಕಾ ಫಲಕಗಳು, ಹಸಿರು ಉಪಕ್ರಮಗಳು ಸೇರಿದಂತೆ ಇತರೆ ಶಾಲಾ ಚಟುವಟಿಕೆಗಳಿಗೆ ಈ ಅನುದಾನ ಬಳಸಲಾಗುತ್ತದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಚಿಕ್ಕಮಗಳೂರು | ಮದ್ಯ ಮಾರಾಟಕ್ಕೆ ಎಂಎಸ್‌ಐಎಲ್‌ಗೆ ಅನುಮತಿ; ಮಹಿಳೆಯರ ಖಂಡನೆ

ಪಿಎಂಶ್ರೀ ಶಾಲೆಗಳು ತಮ್ಮ ಪ್ರದೇಶಗಳ ಇತರೆ ಶಾಲೆಗಳಿಗೆ ಮಾರ್ಗದರ್ಶನ ನೀಡುವ ಮೂಲಕ ನಾಯಕತ್ವವನ್ನು ಒದಗಿಸಬೇಕೆನ್ನುವ ಮೂಲ ಆಶಯವನ್ನು ಈ ಯೋಜನೆ ಹೊಂದಿದೆ. ಎರಡನೇ ಹಂತದಲ್ಲಿ ಶಾಲೆಗಳನ್ನು ಆಯ್ಕೆ ಮಾಡಲು ಈಗಾಗಲೇ ಅಧಿಸೂಚನೆ ಹೊರಡಿಸಲಾಗಿದ್ದು, ಆಯಾ ಶಾಲೆಗಳವರು ಸಂಬಂಧಿಸಿದ ಕ್ಷೇತ್ರ ಶಿಕ್ಷಣಾಧಿಕಾರಿ ಅಥವಾ ಉಪನಿರ್ದೇಶಕರುಗಳ ಮೂಲಕ ಹೆಚ್ಚಿನ ಮಾಹಿತಿ ಪಡೆದು ಚಾಲೆಂಜ್ ಮೆಥಡ್ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಬಹುದಾಗಿದೆ” ಎಂದು ಪ್ರಕಟಣೆಗೆ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...