ದಾವಣಗೆರೆ | ಮದ್ಯದಂಗಡಿ ತೆರೆಯಲು ಪರವಾನಗಿ ನೀಡದಂತೆ ಗ್ರಾಮೀಣ ಕೂಲಿಕಾರರ ಸಂಘಟನೆ ಆಗ್ರಹ

Date:

ಹೊಸದಾಗಿ ಒಂದು ಸಾವಿರ ಮದ್ಯದಂಗಡಿ ತೆರೆಯಲು ಸರ್ಕಾರ ಪರವಾನಗಿ ನೀಡುವುದಾಗಿ ಹೇಳಿರುವ ಪ್ರಸ್ತಾವನ್ನು ಕೂಡಲೇ ಕೈಬಿಡಬೇಕು. ಯಾವುದೇ ಕಾರಣಕ್ಕೂ ಮದ್ಯದ ಅಂಗಡಿ ತೆರೆಯಲು ಪರವಾನಗಿ ನೀಡಬಾರದು ಎಂದು ಒತ್ತಾಯಿಸಿ ಗ್ರಾಮೀಣ ಕೂಲಿಕಾರರ ಸಂಘಟನೆ ಕಾರ್ಯಕರ್ತರು ದಾವಣಗೆರೆ ಹಾಗೂ ಚಿತ್ರದುರ್ಗದಲ್ಲಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು.

ಪ್ರತಿಭಟನಾಕಾರರು ಆಯಾ ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಹಕ್ಕೊತ್ತಾಯ ಸಲ್ಲಿಸಿದ್ದು, ಬೇಡಿಕೆ ಈಡೇರಿಕೆಗೆ ಆಗ್ರಹಿಸಿದರು.

“ಯಾವುದೇ ಸರ್ಕಾರ ಮದ್ಯ ಮಾರಾಟದಿಂದ ಬರುವ ಆದಾಯವನ್ನು ಕಲ್ಯಾಣ ಕಾರ್ಯಕ್ರಮಗಳಿಗೆ ಬಳಸುವುದು ಅಪರಾಧ. ಅಂತಹ ಹಣವನ್ನು ದೇಶ ಕಟ್ಟಲು ಬಳಸಬಾರದೆಂದು ಗಾಂಧೀಜಿಯವರು ದೃಢವಾಗಿ ನಂಬಿದ್ದರು. ಸಂವಿಧಾನದ ಆಶಯವೂ ಕೂಡ ಸರ್ಕಾರಗಳು ನಿಧಾನವಾಗಿ ಮದ್ಯ ನಿಷೇಧದತ್ತ ಸಾಗಬೇಕೆಂಬುದೇ ಆಗಿತ್ತು. ಆದರೆ ಈ ಸರ್ಕಾರ ಮದ್ಯಪಾನ ಪ್ರೋತ್ಸಾಹಕ್ಕೆ‌ ಹೆಚ್ಚಿನ ಗಮನ ಕೊಡುತ್ತಿದೆ. ಇದನ್ನು ನಿಲ್ಲಿಸಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಮದ್ಯ ಹೋರಾಟ

ಸಂಘಟನೆಯ ದಾವಣಗೆರೆ ಜಿಲ್ಲಾ ಸಂಯೋಜಕಿ ಸುಧಾ ಪಲ್ಲಾಗಟ್ಟೆ ಮಾತನಾಡಿ, “ಮದ್ಯಪಾನ ಸೇವನೆಯಿಂದ ಹಳ್ಳಿಗಳ ಕೂಲಿಕಾರರ ಬದುಕು ನರಕವಾಗುತ್ತದೆ. ಜತೆಗೆ ಗ್ರಾಮಗಳಲ್ಲಿ ಮದ್ಯದ ಅಂಗಡಿಗಳನ್ನು ತೆರೆಯುವ ಅವಕಾಶ ನೀಡಿದರೆ ಸರ್ಕಾರವೇ ಅವರನ್ನು ಕುಡಿತದ ದಾರಿಗೆ ತಳ್ಳಿದಂತಾಗುತ್ತದೆ. ಯಾವುದೇ ಕಾರಣಕ್ಕೂ ಗ್ರಾಮ ಪಂಚಾಯಿತಿ ವ್ಯಾಪ್ತಿಗಳಿಗೆ ಹೊಸದಾಗಿ ಅನುಮತಿ ನೀಡಬಾರದು” ಎಂದು ಒತ್ತಾಯಿಸಿದರು.

ಇದೇ ವೇಳೆ ಚಿತ್ರದುರ್ಗದಲ್ಲಿ ಜಿಲ್ಲಾ ಸಂಯೋಜಕ ಮಲ್ಲೇಶ್ ಮಾತನಾಡಿ, “ಹೊಸದಾಗಿ ಪರವಾನಗಿ ನೀಡುವುದರ ಮೂಲಕ ಸರ್ಕಾರ ಗ್ರಾಮೀಣ ಕೂಲಿಕಾರರ ಬದುಕನ್ನು, ಹಳ್ಳಿಗರ ಬದುಕನ್ನು ಹಾಳು ಮಾಡಲು ಹೊರಟಿದೆ. ಈ ಹಿಂದೆ ಇದ್ದ ಸರ್ಕಾರ ಹೊಸದಾಗಿ ಪರವಾನಗಿ ನೀಡಲು ಹೊರಟಾಗ 2019ರ ಅಕ್ಟೋಬರ್‌ನಲ್ಲಿ ಬೆಂಗಳೂರಿಗೆ ಪಾದಯಾತ್ರೆ ಮೂಲಕ ಮಹಿಳೆಯರು ಪ್ರತಿಭಟನೆ ಹಮ್ಮಿಕೊಂಡಿದ್ದು, ಹಿಮ್ಮೆಟ್ಟಿಸುವಲ್ಲಿ ಯಶಸ್ವಿಯಾಗಿದ್ದರು. ಪ್ರಸ್ತುತ ಸರ್ಕಾರ ಮತ್ತೆ ಪರವಾನಗಿ ನೀಡಲು ಹೊರಟಿದೆ. ಕೂಡಲೇ ಪ್ರಸ್ತಾಪ ಕೈಬಿಡಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಪ್ರತಿಭಟನೆ ಮತ್ತು ಭಿನ್ನ ಮಾರ್ಗಗಳ ಮೂಲಕ ಮಹಿಳೆಯರು ಸರ್ಕಾರಕ್ಕೆ ತಕ್ಕ ಪಾಠ ಕಲಿಸಲಿದ್ದಾರೆ” ಎಂದು ಎಚ್ಚರಿಕೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಅಕ್ರಮ ಹಣದಿಂದ ಸರ್ಕಾರ ನಡೆಸುವುದನ್ನು ನಿಲ್ಲಿಸಿ: ನಶಾಮುಕ್ತ ಭಾರತ ಜಾಗೃತಿ ಆಂದೋಲನ ಸಮಿತಿ

“ಅಕ್ರಮ ಮದ್ಯ ಮಾರಾಟ ನಿಯಂತ್ರಣಕ್ಕೆ ಅಕ್ರಮವಾಗಿ ಮದ್ಯ ಮಾರಾಟ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಗ್ರಾಮಸಭೆಗೆ ಪರಮಾಧಿಕಾರ ನೀಡುವ ಆದೇಶ ಹೊರಡಿಸಬೇಕು. ಮಹಾರಾಷ್ಟ್ರ ಮತ್ತು ಹರಿಯಾಣ ರಾಜ್ಯಗಳಂತೆ ಶೇ.10ರಷ್ಟು ಮಹಿಳೆಯರು ಆಯಾ ಪಂಚಾಯಿತಿ ವ್ಯಾಪ್ತಿಯಲ್ಲಿ ಮದ್ಯಪಾನ ಮಾರಾಟಕ್ಕೆ ಪರವಾನಗಿ ನೀಡಬಾರದೆಂದು ಗ್ರಾಮಸಭೆಯಲ್ಲಿ ನಿರ್ಧರಿಸಿದಲ್ಲಿ ಆ ಠರಾವನ್ನು ಸರ್ಕಾರ ಎತ್ತಿ ಹಿಡಿಯಬೇಕು.‌ ಸರ್ಕಾರ ಹೊಸದಾಗಿ 1,000 ಮದ್ಯದಂಗಡಿಗಳಿಗೆ ಪರವಾನಿಗೆ ನೀಡುವ, ಮಾಲ್, ಮಾರ್ಕೆಟ್‌ಗಳಲ್ಲಿ ಮತ್ತು ಆನ್ಲೈನ್ ಮಾರಾಟ ಮಾಡುವ ಪ್ರಸ್ತಾವನೆಯನ್ನು ಕೂಡಲೇ ಹಿಂಪಡೆಯಬೇಕು” ಎಂದು ಆಗ್ರಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...