ದಾವಣಗೆರೆ | ಚುನಾವಣೆಯಲ್ಲಿ ಪಂಚಮಸಾಲಿ ಸಮಾಜ ತಟಸ್ಥವಾಗಿರಲು ಸ್ವಾಭಿಮಾನ ಯುವಪಡೆ ಕರೆ

Date:

ದಾವಣಗೆರೆ ಜಿಲ್ಲೆಯ ಪಂಚಮಸಾಲಿ ನಾಯಕರು ಪ್ರಸ್ತುತ ಲೋಕಸ ಚುನಾವಣೆಯಲ್ಲಿ ತಟಸ್ಥವಾಗಿ ಇರಬೇಕು ಎಂದು ಪಂಚಮಸಾಲಿ ಸ್ವಾಭಿಮಾನ ಯುವಪಡೆ ಒತ್ತಾಯಿಸಿದೆ.

ದಾವಣಗೆರೆಯಲ್ಲಿ ಸುದ್ದಿಗೋಷ್ಟಿಯಲ್ಲಿ ಯುವಪಡೆಯ ಕಾರ್ಯದರ್ಶಿ ಮಂಜುನಾಥ್ ಸುಗ್ಗೇರ್ ಮಾತನಾಡಿ, “ದಾವಣಗೆರೆ ಜಿಲ್ಲೆ ಆದಾಗಿನಿಂದಲೂ ಸರ್ಕಾರಗಳು ಬದಲಿ ಆದರೂ ಒಂದು ಸಮುದಾಯದ್ದೇ ಆಡಳಿತವಿದೆ. ಪಂಚಮಸಾಲಿ ಸಮಾಜದ ಮಹಿಮಾ ಪಟೇಲ್, ಎಚ್ ಎಸ್ ಶಿವಶಂಕರ್, ತೇಜಸ್ವಿ ಪಟೇಲ್ ಹಾಗೂ ಎಚ್ ಎಸ್ ನಾಗರಾಜ್ ಅವರೊಂದಿಗೆ ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ಹೇಗೆ ನಡೆದುಕೊಂಡಿದ್ದಾರೆ ಎಂಬುದನ್ನು ಅವಲೋಕಿಸಬೇಕಾದ ಸುಸಂದರ್ಭ ಬಂದಿದೆ” ಎಂದರು.

“ಎಸ್ ಎಸ್ ಮಲ್ಲಿಕಾರ್ಜುನ ಅವರು ಸಚಿವರಾಗಿದ್ದರೂ 2014ರ ಲೋಕಸಭಾ ಚುನಾವಣೆಯಲ್ಲಿ ಮಹಿಮಾ ಪಟೇಲ್ ಅವರಿಗೆ ಟಿಕೆಟ್ ತಪ್ಪಿಸಲು ಸ್ಪರ್ಧಿಸಿದರು. ಜೆಡಿಎಸ್ ವರಿಷ್ಠರ ಮಾತಿನಂತೆ ನಡೆಯುವ ಶಿವಶಂಕರ್ ಒಂದು ಬಾರಿ ಕಾಂಗ್ರೆಸ್, ಒಂದು ಬಾರಿ ಬಿಜೆಪಿ ಬೆಂಬಲಿಸುತ್ತಾ ವೈಯಕ್ತಿಕ ವರ್ಚಸ್ಸನ್ನು ಕಳೆದುಕೊಳ್ಳುತ್ತಿದ್ದಾರೆ. ಭದ್ರಾ ಸಹಕಾರಿ ಸಕ್ಕರೆ ಕಾರ್ಖಾನೆಯನ್ನು ಪುನರಾರಂಭಿಸಲು ಸಹಕಾರ ನೀಡಬೇಕೆಂಬ ಬೇಡಿಕೆಯೊಂದಿಗೆ ಜಿ ಎಂ ಸಿದ್ದೇಶ್ವರ ಅವರನ್ನು ಬೆಂಬಲಿಸುತ್ತಾ ಬಂದಿರುವ ಎಚ್ ಎಸ್ ನಾಗರಾಜ್ ಬರಿಗೈಯಲ್ಲಿ ಕೂತಿದ್ದಾರೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕಾಂಗ್ರೆಸ್‌ನಲ್ಲಿ ಇಲ್ಲದಿದ್ದರೂ ಜಾತ್ಯತೀತ ನಿಲುವಿಗೆ ಬದ್ಧರಾಗಿ 2009ರಿಂದ ಎಲ್ಲ ಚುನಾವಣೆಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳನ್ನು ಬೆಂಬಲಿಸುತ್ತಾ ಬಂದ ತೇಜಸ್ವಿ ಪಟೇಲ್ ವಿಧಾನಸಭಾ ಚುನಾವಣೆಗೆ ಟಿಕೆಟ್ ತೆಗೆದುಕೊಳ್ಳುವುದು ಹಾಗಿರಲಿ, ಕನಿಷ್ಟ ಗೌರವವನ್ನೂ ಪಡೆಯಲಿಲ್ಲ. ಆದ್ದರಿಂದ ಈ ಚುನಾವಣೆಯಲ್ಲಿ ಪಂಚಮಸಾಲಿ ಸಮಾಜ ತಟಸ್ಥವಾಗಿ, ಮತದಾನದಿಂದ ದೂರ ಉಳಿಯಬೇಕು” ಎಂದು ಕರೆ ನೀಡಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ನಾಟಕ ಬಿಟ್ಟು ಪರಿಹಾರ ನೀಡಿ, ಇಲ್ಲವೇ ಮತ ಕೇಳಬೇಡಿ: ಕುರುಬೂರು ಶಾಂತಕುಮಾರ್

ಸುದ್ದಿಗೋಷ್ಟಿಯಲ್ಲಿ ಯುವ ಪಡೆಯ ಅಧ್ಯಕ್ಷ ಚನ್ನಬಸಪ್ಪ ಚಿಕ್ಕಮೇಗಳಗೆರೆ, ಶರಣಪ್ಪ ಸೇರಿದಂತೆ ಸಮಾಜದ ಇತರ ಬಾಂಧವರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...