ದಾವಣಗೆರೆ | ಹಂಸಲೇಖಗೆ ಶ್ರೀಗುರು ಪುಟ್ಟರಾಜ ಪುರಸ್ಕಾರ

Date:

ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಅವರಿಗೆ ಶ್ರೀಗುರು ಪುಟ್ಟರಾಜ ಪುರಸ್ಕಾರ ನೀಡಿ ಮೂರು ಸಾವಿರದ ಮಠದ ಡಾ. ಗುರುಸಿದ್ದರಾಜೇಂದ್ರ ಶ್ರೀ ಗೌರವಿಸಿದ್ದಾರೆ.

ದಾವಣಗೆರೆಯ ವೀರೇಶ್ವರ ಪುಣ್ಯಾಶ್ರಮದಲ್ಲಿ ನಡೆದ ಪಂಚಾಕ್ಷರಿ ಗವಾಯಿಗಳ 79ನೇ ಸ್ಮರಣೋತ್ಸವ ಹಾಗೂ ಪಂಡಿತ ಪುಟ್ಟರಾಜ ಗವಾಯಿಗಳ 13ನೇ ಸ್ಮರಣೋತ್ಸವ ಕಾರ್ಯಕ್ರಮದಲ್ಲಿ ಪುರಸ್ಕಾರ ನೀಡಿ ಗೌರವಿಸಲಾಗಿದೆ.

ಕಾರ್ಯಕ್ರಮದಲ್ಲಿ ಮಾತನಾಡಿದ ಗುರುಸಿದ್ದರಾಜೇಂದ್ರ ಶ್ರೀ, “ಹಂಸಲೇಖ ಅವರು ಕನ್ನಡ ನಾಡು, ನುಡಿಗೆ ಸಲ್ಲಿಸಿದ ಸೇವೆಯನ್ನು ಗುರುತಿಸಿ ಲಿಂ. ಎರೆಕುಪ್ಪಿ ಹಿರೇಮಠದ ತಿಪ್ಪಯ್ಯ ನವರ ಸ್ಮರಣಾರ್ಥ ಕೊಡಮಾಡುವ ‘ಶ್ರೀ ಗುರು ಪುಟ್ಟರಾಜ ಪುರಸ್ಕಾರ’ ನೀಡಿರುವುದು ಶ್ಲಾಘನೀಯ. ಕನ್ನಡಕ್ಕೆ ಕುತ್ತು ಬಂದಾಗ ಎಲ್ಲರೂ ಎಚ್ಚರಗೊಳ್ಳಬೇಕೆಂದು ಕರೆ ನೀಡಿರುವ ಹಂಸಲೇಖಾ ಅವರ ಕಾಳಜಿಯನ್ನು ಎಲ್ಲರೂ ಅರ್ಥಮಾಡಿಕೊಳ್ಳಬೇಕು” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಹಾನಗಲ್ ಕುಮಾರಸ್ವಾಮಿ ಮತ್ತು ಪಂಚಾಕ್ಷರಿ ಗವಾಯಿ ಅವರು ಸಮಾಜಕ್ಕೆ ನೀಡಿರುವ ಕೊಡುಗೆ ಅಪಾರವಾದದ್ದು. ಅನೇಕ ಸನ್ಯಾಸಿಗಳು ಭಕ್ತರಿಂದ ಹಣ, ಬಂಗಾರ, ಆಸ್ತಿಯನ್ನು ಜೋಳಿಗೆಗೆ ಹಾಕಿಸಿಕೊಂಡಿದ್ದೇವೆ. ಆದರೆ, ಹಾನಗಲ್ ಮಠದ ಕುಮಾರಸ್ವಾಮಿಗಳು ಅಂಧ ಮಕ್ಕಳನ್ನು ಜೋಳಿಗೆಗೆ ಹಾಕಿಸಿಕೊಂಡು ಬಂದು ಅವರಿಗೆ ಸಂಗೀತ ದೀಕ್ಷೆ ನೀಡಿದ ಮಹಾನ್ ಸಾಧಕರಾಗಿದ್ದಾರೆ. ಜಗತ್ತಿನ ಸನ್ಯಾಸಿಗಳ ಪಟ್ಟಿಯಲ್ಲಿ ಈ ರೀತಿಯ ಭಿಕ್ಷೆ ಬೇಡಿದ ಏಕೈಕ ಸನ್ಯಾಸಿ ಇದ್ದರೆ ಅದು ಹಾನಗಲ್‌ನ ಕುಮಾರಸ್ವಾಮಿಗಳು ಮಾತ್ರ. ಅವರ ಶಿಷ್ಯರಾಗಿ ಪಂಚಾಕ್ಷರ ಗವಾಯಿಗಳು ಅದೇ ಪರಂಪರೆಯನ್ನು ಬಂದು ಮುಂದುವರೆಸಿಕೊಂಡು ಅವರು ಮಾಡಿದ ಸಾಧನೆ ಕೂಡ ಅಪರೂಪವಾದುದು” ಎಂದು ಬಣ್ಣಿಸಿದರು.

ಹೊಸಪೇಟೆ ಹಾಲಕೇರಿಯ ಅನ್ನದಾನೀಶ್ವರ ಮಠದ ಮುಪ್ಪಿನ ಬಸವಲಿಂಗ ಮಹಾಸ್ವಾಮೀಜಿ ಮಾತನಾಡಿ, “ಮಠಮಾನ್ಯಗಳಿಗೆ ಸಾಕಷ್ಟು ಜವಾಬ್ದಾರಿಗಳಿವೆ. ಆದರೆ ಸ್ವಾಮೀಜಿಗಳು ಮಾಡಬೇಕಾದ ತಮ್ಮ ಕರ್ತವ್ಯಗಳನ್ನು ಬಿಟ್ಟು ಬೇರೆಲ್ಲ ಕೆಲಸಗಳನ್ನು ಮಾಡುತ್ತಿದ್ದಾರೆ. ಆದರೆ ಕುಮಾರಸ್ವಾಮಿಗಳು ನಿಷ್ಟಾವಂತ ಸನ್ಯಾಸಿಗಳಾಗಿ ಮಠ ಮತ್ತು ಸಮಾಜದ ಉದ್ದಾರ ಮಾಡಿ, ನೂರಾರು ಅಂದ ವಿದ್ಯಾಥಿಗಳ ಬಾಳಿಗೆ ಬೆಳಕಾಗಿದ್ದಾರೆ. ಇದುವೆ ಒಬ್ಬ ನಿಜವಾದ ಸ್ವಾಮೀಜಿ ಮಾಡಬೇಕಾದ ಕರ್ತವ್ಯ” ಎಂದರು.

“ಮಕ್ಕಳಿಗೆ ಶಿಕ್ಷಣ ಕೊಡುವುದು ಅತ್ಯಂತ ಪವಿತ್ರವಾದ ಕೆಲಸ, ಅದರಲ್ಲೂ ನಯನ ಇಲ್ಲದ ಮಕ್ಕಳಿಗೆ ಶಿಕ್ಷಣ ನೀಡುವುದು ನಿಜವಾದ ಪರಮಾತ್ಮನ ಸೇವೆಯಾಗಿದೆ. ಅನ್ನ ದಾಸೋಹದ ಮೂಲಕ ಹೊಟ್ಟೆ ತುಂಬಿಸಬಹುದು. ಆದರೆ ದುಡಿದು ತಿನ್ನಬೇಕೆಂಬ ದೂರದೃಷ್ಟಿಯಿಂದ ಅಂಧ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡಿದ್ದಾರೆ. ಕುಮಾರಸ್ವಾಮಿಗಳು, ಪಂಚಾಕ್ಷರಿ ಗವಾಯಿಗಳು ಇಲ್ಲದೇ ಇದ್ದಿದ್ದರೆ ಅಂಧ ಮಕ್ಕಳು ಭಿಕ್ಷೆ ಬೇಡುವ ಸ್ಥಿತಿಗೆ ಬರುತ್ತಿದ್ದರು, ಆದರೆ ಇಂದು ಸಂಗೀತ ಶಿಕ್ಷಣದ ಮೂಲಕ ಸಾವಿರಾರು ಅಂಧ ವಿದ್ಯಾರ್ಥಿಗಳು ರಾಷ್ಟ್ರ, ಅಂತರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಳ್ಳಲು ಸಾಧ್ಯವಾಗಿದೆ” ಎಂದು ಹೇಳಿದರು.

ಸಮಾರಂಭದಲ್ಲಿ ಆವರಗೊಳ್ಳದ ಶಿವಾಚಾರ್ಯ ಮಹಾಸ್ವಾಮಿಗಳು, ಹೊಸಪೇಟೆಯ ಅನ್ನದಾನೀಶ್ವರ ಮಠದ ಮುಪ್ಪಿನ ಬಸವಲಿಂಗ ಮಹಾಸ್ವಾಮಿಗಳು, ವಿಧಾನಪರಿಷತ್ ಮಾಜಿ ಸಚೇತಕ ಡಾ.ಎ.ಎಚ್.ಶಿವಯೋಗಿಸ್ವಾಮಿ, ಹಿರಿಯ ಲೆಕ್ಕ ಪರಿಶೋಧಕ ಡಾ. ಅಥಣಿ ಎಸ್.ವೀರಣ್ಣ, ಪುಣ್ಯಾಶ್ರಮದ ಕಾರ್ಯದರ್ಶಿ ಸ್ವಾಮಿ,ದೇವರಮನೆ ಶಿವಕುಮಾರ್ ಇತರರು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...