ದಾವಣಗೆರೆ | ವಿದ್ಯಾರ್ಥಿ ನಿಲಯ ಕಟ್ಟಡದ ಮೇಲೆ ಕಲ್ಲು ತೂರಾಟ; ತಪ್ಪಿತಸ್ಥರ ಕ್ರಮಕ್ಕೆ ಕುರುಬರ ಸಂಘ ಆಗ್ರಹ

Date:

ಮಂಡ್ಯ ನಗರದ ಬಿ ಎಂ ರಸ್ತೆಯಲ್ಲಿರುವ ಜಿಲ್ಲಾ ಕುರುಬರ ಸಂಘದ ಸಾರ್ವಜನಿಕ ವಿದ್ಯಾರ್ಥಿ ನಿಲಯ ಕಟ್ಟಡದ ಮೇಲೆ ಕಲ್ಲು ತೂರಾಟ ಮಾಡಿ ಕಟ್ಟಡದ ಕಿಟಕಿ ಗಾಜುಗಳನ್ನು ಧ್ವಂಸಗೊಳಿಸಿದವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕರ್ನಾಟಕ ಪ್ರದೇಶ ಕುರುಬರ ಸಂಘ, ದಾವಣಗೆರೆ ಜಿಲ್ಲಾ ಕುರುಬರ ಸಂಘ ಹಾಗೂ ಸಮಾಜದ ಹಲವು ಸಂಘಟನೆಗಳ ಸದಸ್ಯರು ದಾವಣಗೆರೆ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಅಪರ ಜಿಲ್ಲಾಧಿಕಾರಿ ಲೋಕೇಶ್ ಅವರಿಗೆ ಮನವಿ ಸಲ್ಲಿಸಿದರು.

ಸಮಾಜದ ಮುಖಂಡ, ನಿವೃತ್ತ ಸಬ್ ರಿಜಿಸ್ಟ್ರರ್ ಮಲ್ಲಿಕಾರ್ಜುನಪ್ಪ ಮಾತನಾಡಿ, “ಕಳೆದ ಜನವರಿ 29ರ ಮಧ್ಯಾಹ್ನ ಸುಮಾರು 2 ಗಂಟೆ ಸಮಯದಲ್ಲಿ ಮಾಜಿ ಮುಖ್ಯಮಂತ್ರಿ ಎಚ್ ಡಿ
ಕುಮಾರಸ್ವಾಮಿ, ಮಾಜಿ ಸಚಿವ ಸಿ ಟಿ ರವಿ ನೇತೃತ್ವದಲ್ಲಿ ಮಂಡ್ಯ ತಾಲೂಕಿನ ಕೆರೆಗೋಡು ಗ್ರಾಮದಲ್ಲಿ ನಡೆದ ಹನುಮಧ್ವಜದ ವಿವಾದದ ಪ್ರತಿಭಟನೆಯ ಮೆರವಣಿಗೆ ಸಮಯದಲ್ಲಿ ಮಂಡ್ಯ ನಗರದ ಬಿ ಎಂ ರಸ್ತೆಯಲ್ಲಿರುವ ಮಂಡ್ಯ ಜಿಲ್ಲಾ ಕುರುಬರ ಸಂಘದ ಸಾರ್ವಜನಿಕ ವಿದ್ಯಾರ್ಥಿ ನಿಲಯ ಕಟ್ಟಡದ ಮೇಲೆ ಕಲ್ಲು ತೂರಾಟ ಮಾಡಿ ಕಟ್ಟಡದ ಕಿಟಕಿ, ಗಾಜುಗಳನ್ನು ಧ್ವಂಸಗೊಳಿಸಿದ್ದಾರೆ. ಇಂಥ ಕಿಡಿಗೇಡಿಗಳ ವಿರುದ್ಧ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದರು.

ಸಮಾಜದ ಮುಖಂಡ ಎಸ್ ಎಸ್ ಗಿರೀಶ್ ಮಾತನಾಡಿ, “ಕಟ್ಟಡದ ಮೇಲೆ ಇದ್ದ ಸಂಗೊಳ್ಳಿ ರಾಯಣ್ಣ ಮತ್ತು ಕನಕದಾಸರ ಭಾವಚಿತ್ರಕ್ಕೆ ಅವಮಾನ ಮಾಡಿದ್ದಾರೆ. ಈಗ ಸ್ಥಳೀಯರನ್ನು ಕೇಳಿದಾಗ ಪ್ರತಿಭಟನಾಕಾರರು ಅಲ್ಲಿದ್ದ ವಾಹನಗಳಿಗೆ ಬೆಂಕಿ ಹಚ್ಚುವ ಹುನ್ನಾರ ನಡೆಸಿದ್ದು, ಬೆಳಕಿಗೆ ಬಂದಿದೆ. ಈ ವಿವಾದವನ್ನು ರಾಜಕೀಯ ದುರುದ್ದೇಶಕ್ಕಾಗಿ ಸೃಷ್ಟಿಸಿದ್ದಾರೆ. ಚಿತ್ರದುರ್ಗದಲ್ಲಿ ನಡೆದ ಶೋಷಿತ ಸಮುದಾಯಗಳ ಮಹಾ ಒಕ್ಕೂಟದ ಶೋಷಿತರ ಸಮಾವೇಶ ಯಶಸ್ವಿಯಾಗಿರುವುದನ್ನು ಸಹಿಸಲಾಗದೆ ಅಸೂಯೆಯಿಂದ ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿಕೊಂಡು ಇಂತಹ ಹೀನ ಕೃತ್ಯಗಳನ್ನು ಸೃಷ್ಟಿಸುತ್ತಿದ್ದಾರೆ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಈ ದಬ್ಬಾಳಿಕೆ ಮತ್ತು ನೀಚ ಕೃತ್ಯವನ್ನು ಸಮರ್ಥವಾಗಿ ಎದುರಿಸಲು ರಾಜ್ಯದಲ್ಲಿರುವ ಕುರುಬ ಸಮಾಜ ಶಕ್ತವಾಗಿದೆ ಎಂಬುದನ್ನು ಈ ಮೂಲಕ ತಿಳಿಸುತ್ತೇವೆ. ಕುರುಬ ಸಮಾಜದ ಸಹನೆ ಮತ್ತು ತಾಳ್ಮೆಯನ್ನು ಪರೀಕ್ಷಿಸಬೇಡಿ” ಎಂದು ಎಚ್ಚರಿಸಿದ್ದಾರೆ.

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಹಾಗೂ ಭಕ್ತ ಕನಕದಾಸರು ಕುರುಬರು ಹಿಂದೂಗಳು ಎಂಬುದನ್ನು ಕಲ್ಲು ತೂರಿದ ಕಿಡಿಗೇಡಿಗಳು ಅರ್ಥ ಮಾಡಿಕೊಳ್ಳಬೇಕು. ಇಂತಹ ಪ್ರಯತ್ನಕಾರಿ ಕೃತ್ಯಗಳಿಂದ ಯುವಕರನ್ನು ದಾರಿ ತಪ್ಪಿಸುವ ಕೆಲಸವನ್ನು ಕೂಡಲೇ ನಿಲ್ಲಿಸಬೇಕು. 2023ರ ವಿಧಾನಸಭಾ ಚುನಾವಣೆಯ ಮುಂಚೆ ತಾವು ಧರ್ಮ ಧರ್ಮಗಳ ಮಧ್ಯೆ ಬೆಂಕಿ ಹಚ್ಚುವ ಕೆಲಸ ಮಾಡಿದ್ದೀರಿ. ಈಗ ಜಾತಿ ಜಾತಿಗಳ ಮಧ್ಯೆ ವಿಷ ಬೀಜವನ್ನು ಹೆಚ್ಚಿಸುವ ಕೆಲಸಕ್ಕೆ ಕೈ ಹಾಕಿದ್ದೀರಿ. ಸಮಾಜದಲ್ಲಿ ಸಾಮರಸ್ಯದಿಂದ ಕೂಡಿ ಬಾಳ್ವೆ ನಡೆಸುತ್ತಿರುವ ಎಲ್ಲ ಸಮುದಾಯಗಳನ್ನು ಒಡೆದು ಆಳುವ ನೀತಿಯನ್ನು ಈ ಕೂಡಲೇ ನಿಲ್ಲಿಸದಿದ್ದರೆ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಇದರ ಪರಿಣಾಮವನ್ನು ಮುಂದಿನ ದಿನಗಳಲ್ಲಿ ಎದುರಿಸಬೇಕಾಗುತ್ತದೆ. ತಕ್ಕ ರೀತಿ ಪಾಠವನ್ನು ಎರಡು ಪಕ್ಷಗಳಿಗೆ ಕಲಿಸಬೇಕಾಗುತ್ತದೆ. ಈ ಕೃತ್ಯಕ್ಕೆ ಪ್ರಚೋದನೆ ನೀಡಿದ ಮತ್ತು ಕ್ಯತ್ಯವನ್ನು ಎಸಗಿದ ಸಮಾಜಘಾತುಕರ ವಿರುದ್ಧ ಸೂಕ್ತ ಎಚ್ಚರಿಕೆಯ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಧಾರವಾಡ | ಕ್ರೀಡಾ ವಿಭಾಗದ ಚಟುವಟಿಕೆಗಳ ಸಮಾರೋಪ ಸಮಾರಂಭ

ಪ್ರತಿಭಟನೆಯಲ್ಲಿ ಸಮಾಜದ ಮುಖಂಡರು ಕುಂಬಳೂರು ವಿರೂಪಾಕ್ಷಪ್ಪ, ಕೆ ರೇವಣಸಿದ್ದಪ್ಪ, ಪರಶುರಾಮ ಕೆ, ಪರಶುರಾಮ ಬಿ ದಿಳ್ಯಪ್ಪ, ಪ್ರೊ ಬಿ ಯಲ್ಲಪ್ಪ ಕುಂಬಳೂರು, ಎಂ ವಿರೂಪಾಕ್ಷಪ್ಪ, ಮಳಲಕೆರೆ ಪ್ರಕಾಶ್, ಜಡಗನಹಳ್ಳಿ ಚಿಕ್ಕಣ್ಣ, ಎಚ್ ಜಿ ಸಂಗಪ್ಪ, ದೀಪಕ್, ಜಡಗ್ನಳ್ಳಿ ವಿರೂಪಾಕ್ಷಪ್ಪ, ಶ್ರೀನಿವಾಸ್, ಆನಂದ, ಎಂ ಮನು, ಪುರಂದರ ಲೋಕಿಕೆರೆ, ಅನಂತಪ್ಪ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...