ದಾವಣಗೆರೆ | ಭಾರತವನ್ನು ಇಸ್ಲಾಂ ದೇಶ ಮಾಡಲು ಕಲ್ಲು ತೂರಾಟ; ಉದಯಗಿರಿ ಪ್ರಕರಣದ ಬಗ್ಗೆ ಮುತಾಲಿಕ್ ವಿವಾದಾತ್ಮಕ ಹೇಳಿಕೆ

Date:

ಮೈಸೂರು ನಗರದ ಉದಯಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ʼ2047ರ ಹೊತ್ತಿಗೆ ಭಾರತವನ್ನು ಇಸ್ಲಾಂ ದೇಶವನ್ನಾಗಿ ಮಾಡಲು ಮುಂದಾಗಿದ್ದು, ಭಯಾನಯಕ ವಾತಾವರಣವನ್ನು ಸೃಷ್ಟಿ ಮಾಡಲು‌ ಕಲ್ಲು ತೂರಾಟ ನಡೆಸಿದ್ದಾರೆʼ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ದಾವಣಗೆರೆಯ ಖಾಸಗಿ ಕಾರ್ಯಕ್ರಮವೊಂದರಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಮೈಸೂರಿನ ಉದಯಗಿರಿಯಲ್ಲಿ ಪೊಲೀಸರ ಮೇಲೆ ಕಲ್ಲು ತೂರಾಟ ಪ್ರಕರಣ ಖಂಡನೀಯ. ಈ ಘಟನೆಗೆ ಮುಸ್ಲಿಂರಿಗಿಂತ ಕಾಂಗ್ರೆಸ್‌ನವರೇ ಹೆಚ್ವು ಹೊಣೆಯಾಗುತ್ತಾರೆ. ವೋಟ್ ಬ್ಯಾಂಕ್‌ಗಾಗಿ ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ ಈ ರೀತಿ ಮುಸ್ಲಿಂ ಗೂಂಡಾಗಳಿಗೆ ಕುಮ್ಮಕ್ಕು ನೀಡುತ್ತಿದೆ. ಕೆಜೆ ಹಳ್ಳಿ ಡಿಜೆ ಹಳ್ಳಿ, ಹುಬ್ಬಳ್ಳಿ, ಶಿವಮೊಗ್ಗ ಸೇರಿದಂತೆ ಈ ರೀತಿಯ ಹಲವು ಘಟನೆಗಳಲ್ಲಿ ಪೊಲೀಸರೇ ಓಡಿ ಹೋಗುವಂತಾಗಿದೆ. ಇದಕ್ಕೆ ಕಾಂಗ್ರೆಸ್ ನೇರ ಕಾರಣ” ಎಂದು ನಾಲಿಗೆ ಹರಿಬಿಟ್ಟಿದ್ದಾರೆ.

“ಉದಯಗಿರಿಯಲ್ಲಿ ಮುಸ್ಲಿಮರೇ ಜಾಸ್ತಿ ಇರುವ ಪ್ರದೇಶವಾಗಿರುವುದರಿಂದ ಈ ಘಟನೆ ನಡೆಯಲು ಕಾರಣವಾಗಿದೆ. ತಪ್ಪು ಮಾಡಿದ ವ್ಯಕ್ತಿಯನ್ನು ಈಗಾಗಲೇ ಪೊಲೀಸರು ಬಂಧಿಸಿದ್ದಾರೆ. ನಮ್ಮ ದೇಶದಲ್ಲಿ ಕಾನೂನು, ಸಂವಿಧಾನವಿದೆ. ತಪ್ಪಿತಸ್ಥರಿಗೆ ಕಾನೂನು ಶಿಕ್ಷೆ ಕೊಡುತ್ತದೆ. ತೊಂದರೆಯಾಗಿದ್ದರೆ ದೂರು ನೀಡಿ, ಧರಣಿ ನಡೆಸಿ, ಅದನ್ನು ಬಿಟ್ಟು ಕಲ್ಲು ತೂರಾಟ ನಡೆಸಿ ದಾಂಧಲೆ‌ ನಡೆಸಿದ್ದು ಎಷ್ಟು ಸರಿ. ದಾಂಧಲೆ, ಗಲಾಟೆ ಮಾಡಲು ಇದು ಪಾಕಿಸ್ತಾನ, ಆಫ್ಘಾನಿಸ್ಥಾನ, ಬಾಂಗ್ಲಾದೇಶ ಅಲ್ಲ” ಎಂದು ಮುಸ್ಲಿಮರ ವಿರುದ್ಧ ಕಿಡಿಕಾರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನೀವು ಎಷ್ಟು ಬಾರಿ ಹಿಂದೂ ದೇವರುಗಳ ಮೇಲೆ ಅವಹೇಳನಕಾರಿಯಾಗಿ ಮಾತಾಡಿದ್ದೀರಿ. ಹಿಂದೂ ಸಮಾಜ ಕೂಡ ಈ ರೀತಿ ಸಿಡಿದೆದ್ದರೆ ಏನಾಗಬಹುದು ಊಹಿಸಿಕೊಳ್ಳಿ, ಏನು ಬೇಕಾದರೂ ಮಾಡಬಹುದು ಎಂದು ತಿಳಿದುಕೊಂಡರೆ ಹಿಂದೂ ಸಮಾಜ ಉತ್ತರ ನೀಡುತ್ತದೆ. ಆರಕ್ಷಕರ ಮೇಲೆ ಕಲ್ಲು ತೂರಾಟ ಮಾಡಿದ್ದಾರೆಂದರೆ ಕಾನೂನು ವ್ಯವಸ್ಥೆ ಯಾವ ಮಟ್ಟದಲ್ಲಿದೆ ಎಂಬುದನ್ನು ತೋರಿಸುತ್ತಿದೆ. ಹೀಗೇ ಬಿಟ್ಟರೆ ಮತ್ತೆ ಬೇಲ್ ತೆಗೆದುಕೊಂಡು ವಾಪಸ್‌ ಬಂದು ಇದೇ ಕೆಲಸ ಮಾಡುತ್ತಾರೆ. ಹಾಗಾಗಿ ಪೊಲೀಸರಿಗೆ ಸ್ವಾತಂತ್ರ್ಯ ನೀಡಿದರೆ ಅವರು ಕೆಲಸ ಮಾಡುತ್ತಾರೆ” ಎಂದಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಬಜೆಟ್ ನಲ್ಲಿ ಸ್ಲಂ ನಿವಾಸಿಗಳ ಅಭಿವೃದ್ಧಿಗೆ 5 ಸಾವಿರ ಕೋಟಿ ಹಣ ಮೀಸಲಿಡುವಂತೆ ಸ್ಲಂ ಜನಾಂದೋಲನ ಕರ್ನಾಟಕದಿಂದ ಒತ್ತಾಯ

“ಮುಸ್ಲಿಮರು ಗಲಾಟೆ ಮಾಡಿದ ಕೂಡಲೇ ಎಚ್ಚರಗೊಳ್ಳುವ ಶ್ರೀರಾಮ ಸೇನೆ ಮುಖ್ಯಸ್ಥರು, ಅಪ್ರಾಪ್ತೆಯರ ಮೇಲೆ ಬಲತ್ಕಾರಗಳು ನಡೆಯುತ್ತಿರುವಾಗ, ದಲಿತರ ಮೇಲೆ ದೌರ್ಜನ್ಯಗಳಾಗುತ್ತಿರುವಾಗ ಎಲ್ಲಿ ಹೋಗಿರುತ್ತಾರೆ. ಇಂತಹ ವಿಷಯಗಳ ಬಗ್ಗೆ ಮುತಾಲಿಕ್‌ ಏಕೆ ಮಾತನಾಡುವುದಿಲ್ಲ. ಅವರೆಲ್ಲ ಹಿಂದೂಗಳಲ್ಲವೇ? ಅಥವಾ ಈ ದೇಶದ ನಿವಾಸಿಗಳಲ್ಲವೇ” ಎಂದು ಸಾರ್ವಜನಿಕರು ಕಿಡಿಕಾರಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...