ದಾವಣಗೆರೆ | ಬೀದಿಬದಿ ವ್ಯಾಪಾರಿಗಳ ಬೇಡಿಕೆ ಈಡೇರಿಕೆಗೆ ಆಗ್ರಹ

Date:

ಬೀದಿಬದಿ ವ್ಯಾಪಾರಸ್ಥರ ಸಮಸ್ಯೆಗಳನ್ನು ಪರಿಹರಿಸಲು ವ್ಯಾಪಾರಸ್ಥರ ಜಿಲ್ಲ ಸಮಾವೇಶವನ್ನು ಫೆಬ್ರವರಿ 26ರಂದು ಬೆಳಿಗ್ಗೆ 11ಕ್ಕೆ ದಾವಣಗೆರೆ ನಗರದ ಬೀರಲಿಂಗೇಶ್ವರ ದೇವಾಲಯದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಸಮಾವೇಶದಲ್ಲಿ ವ್ಯಾಪಾರಸ್ಥರ ಸಮಸ್ಯೆಗಳ ಕುರಿತು ಚರ್ಚಿಸಲಾಗುತ್ತದೆ ಎಂದು ದಾವಣಗೆರೆ ಜಿಲ್ಲಾ ಬೀದಿಬದಿ ಸ್ಥಿರ ಮತ್ತು ಸಂಚಾರಿ ಚಿಲ್ಲರೆ ವ್ಯಾಪಾರಸ್ಥರ ಕ್ಷೇಮಾಭಿವೃದ್ಧಿ ಸಂಘದ ಪ್ರಧಾನ ಕಾರ್ಯದರ್ಶಿ ಎಸ್ ದುಗ್ಗಪ್ಪ ಹೇಳಿದರು.

ದಾವಣಗೆರೆಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, “ಜಿಲ್ಲಾ ಬೀದಿಬದಿ ಸ್ಥಿರ ಹಾಗೂ ಸಂಚಾರಿ ಚಿಲ್ಲರೆ ವ್ಯಾಪಾರಸ್ಥರ ಕ್ಷೇಮಾಭಿವೃದ್ಧಿ ಸಂಘದಿಂದ ಸಮಸ್ಯೆಗಳಿಗೆ ಸ್ಪಂದಿಸಿ ಹೋರಾಟ ಮಾಡುತ್ತಿದ್ದೇವೆ. ಈ ಹಿಂದೆ ಸಾಕಷ್ಟು ಬಾರಿ ಪ್ರತ್ಯೇಕವಾಗಿ ಬೀದಿಬದಿ ವ್ಯಾಪಾರಸ್ಥರು ವಿವಿಧ ಸಮಸ್ಯೆಗಳನ್ನು ತೆಗೆದುಕೊಂಡು ಹೋರಾಡಿದರ ಫಲವಾಗಿ ಹಲವಾರು ಸಮಸ್ಯೆಗಳು ಬಗೆಹರಿದಿವೆ. 2018ರಲ್ಲಿ ಸ್ಮಾರ್ಟ್ ಸಿಟಿ ನಿಗಮವು ಕೆ ಆರ್ ಮಾರ್ಕೆಟ್‌ನಲ್ಲಿ ಕಾಮಗಾರಿಯ ನೆಪವೊಡ್ಡಿ ವ್ಯಾಪಾರಸ್ಥರನ್ನು ಒಕ್ಕಲೆಬ್ಬಿಸುವ ಹುನ್ನಾರ ಮಾಡಿತ್ತು. ಇದರ ವಿರುದ್ಧ ಬೀದಿಬದಿ ವ್ಯಾಪಾರಸ್ಥರು ಐತಿಹಾಸಿಕ ಹೋರಾಟ ಮಾಡಿ ಮಾರುಕಟ್ಟೆಯನ್ನು ಉಳಿಸಿಕೊಂಡಿದ್ದೇವೆ” ಎಂದರು.

“ದಾವಣಗೆರೆಯಲ್ಲಿ ಹಲವಾರು ವರ್ಷಗಳಿಂದಲೂ ಟೆಂಡರ್‌ನವರು ಮನಸ್ಸಿಗೆ ಬಂದಷ್ಟು ಜಕಾತಿಯನ್ನು ರಶೀದಿ ನೀಡದೆ ವಸೂಲಿ ಮಾಡುತ್ತಿದ್ದರು. ಇದರ ವಿರುದ್ಧ ಬೀದಿಬದಿ ವ್ಯಾಪಾರಸ್ಥರು ಒಗ್ಗಟ್ಟಾಗಿ ಎಸ್‌ಯುಸಿಐ ಪಕ್ಷದ ನೇತೃತ್ವದಲ್ಲಿ ಹೋರಾಟ ನಡೆಸಿ ಯಶಸ್ವಿಯಾದರು. ಈ ಹೋರಾಟದ ಫಲವಾಗಿ ರಾಜ್ಯದಲ್ಲಿಯೇ ಪ್ರಪ್ರಥಮವಾಗಿ ದಾವಣಗೆರೆಯ ನಗರ ಪಾಲಿಕೆಯೇ ನೇರವಾಗಿ ಜಕಾತಿಯನ್ನು ರಶೀದಿ ನೀಡಿ ಪಡೆಯುವಂತಾಯಿತು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಫೆಬ್ರವರಿ 12ರಿಂದ ಸದಸ್ಯತ್ವ ನೋಂದಣಿ ಅಭಿಯಾನವನ್ನು ಸಂಘವು ಪ್ರಾರಂಭಿಸಿದೆ. ಈ ಅಭಿಯಾನದಲ್ಲಿ ಬೀದಿಬದಿ ವ್ಯಾಪಾರ ಮಾಡುವವರು, ತಳ್ಳುವ ಗಾಡಿಯಲ್ಲಿ ಹಣ್ಣು, ಸೊಪ್ಪು ಮಾರುವವರು, ಓಣಿ ಓಣಿಗಳಲ್ಲಿ ತಿರುಗಾಡುತ್ತಾ ತಲೆ ಮೇಲೆ ಪುಟ್ಟಿ ಹೊತ್ತು ಮಾರುವವರು, ತಿಂಡಿಗಾಡಿಯವರು ಸೇರಿದಂತೆ ಎಲ್ಲರೂ ಸದಸ್ಯತ್ವ ತೆಗೆದುಕೊಳ್ಳಲಿದ್ದಾರೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ʼನಿಗರಾಣಿʼ ವಿನೂತನ ಯೋಜನೆ ಜಾರಿ: ಎಸ್‌ಪಿ ಚನ್ನಬಸವಣ್ಣ

“ದಾವಣಗೆರೆ ನಗರ ಹಾಗೂ ಎಲ್ಲ ತಾಲೂಕುಗಳಲ್ಲಿ ಇರುವ ನಿಜವಾದ ಬೀದಿಬದಿ ವ್ಯಾಪಾರಸ್ಥರಿಗೆ ಸ್ಮಾರ್ಟ್ ಕಾರ್ಡ್ ಗುರುತಿನ ಚೀಟಿ ನೀಡಬೇಕು. ಬೀದಿ ಬದಿಯ ವ್ಯಾಪಾರಸ್ಥರಿಗೆ ನಿವೇಶನ ನೀಡಬೇಕು. ಜಕಾತಿ ವಸೂಲಿಯನ್ನು ಖಾಸಗಿಯವರಿಗೆ ಯಾವುದೇ ಕಾರಣಕ್ಕೂ ನೀಡಬಾರದೆಂಬ ಬೇಡಿಕೆ ಸೇರಿದಂತೆ ಹಲವು ಬೇಡಿಕೆ ಈಡೇರಿಕೆಗೆ ಸಮಾವೇಶದಲ್ಲಿ ಒತ್ತಾಯಿಸಲಾಗುವುದು” ಎಂದರು.

ಸುದ್ದಿಗೋಷ್ಟಿಯಲ್ಲಿ ಅಧ್ಯಕ್ಷ ಎಸ್ ಇಸ್ಮಾಯಿಲ್, ಉಪಾಧ್ಯಕ್ಷ ಎಚ್ ಸಿ ಮಲ್ಲಪ್ಪ, ಶೀಲಾ, ಶ್ರೀನಿವಾಸ್, ಕೆ ಭಾರತಿ, ಪೂಜಾ ನಂದಿಹಳ್ಳಿ, ಸಲೀಂ, ಜಬೀವುಲ್ಲ, ಕೆ ಕೃಷ್ಣಮೂರ್ತಿ ಸೇರಿದಂತೆ ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...