ದಾವಣಗೆರೆ | ಟೈಲರ್ ಕಲ್ಯಾಣ ಮಂಡಳಿ ರಚಿಸುವಂತೆ ದರ್ಜಿಗಳ ಆಗ್ರಹ

Date:

ಟೈಲರ್ ಕಲ್ಯಾಣ ಮಂಡಳಿ ರಚನೆಗೆ ಒತ್ತಾಯಿಸಿ ಅಸಂಘಟಿತ ವಲಯದ ದರ್ಜಿ(ಟೈಲರ್)ಗಳು ಎಐಟಿಯುಸಿ ನೇತೃತ್ವದಲ್ಲಿ ದಾವಣಗೆರೆ ನಗರದ ಜಯದೇವ ಸರ್ಕಲ್‌ನಲ್ಲಿ ಪ್ರತಿಭಟನೆ ನಡೆಸಿದರು.

ಪ್ರತಿಭಟನೆ ಮೆರವಣಿಗೆ ಮೂಲಕ ಅಶೋಕ ರಸ್ತೆ, ಗಾಂಧಿ ಸರ್ಕಲ್, ಹಳೆ ನಿಲ್ದಾಣ ರಸ್ತೆ ಮೂಲಕ ಸಾಗಿ ಎಸಿ ಕಚೇರಿ ಅಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳು, ಕಾರ್ಮಿಕ ಮಂತ್ರಿಗಳು ಮತ್ತು ಜವಳಿ ಖಾತೆ ಸಚಿವರಿಗೆ ಮನವಿ ಸಲ್ಲಿಸಿ ಟೈಲರ್ ಕಲ್ಯಾಣ ಮಂಡಳಿ ರಚನೆಗೆ ಒತ್ತಾಯಿಸಿದರು.

ಎಐಟಿಯುಸಿ ರಾಜ್ಯ ಕಾರ್ಯದರ್ಶಿ, ಟೈಲರ್ ಫೆಡರೇಶನ್‍ನ ರಾಜ್ಯ ಕಾರ್ಯದರ್ಶಿ ಆವರಗೆರೆ ಚಂದ್ರು ಮಾತನಾಡಿ, “ಮನೆಗಳಲ್ಲಿ ಅಥವಾ ಶಾಪ್‌ಗಳಲ್ಲಿ ಬಟ್ಟೆ ಹೊಲಿಯುವವರಿಗೆ ಕಾರ್ಮಿಕ ಕಾಯ್ದೆಗಳು ಅನ್ವಯಿಸುವುದಿಲ್ಲ. ಸಣ್ಣಸಣ್ಣ ಗಾರ್ಮೆಂಟ್ಸ್‌ ಘಟಕಗಳಲ್ಲಿ ಟೈಲರಿಂಗ್ ಮಾಡುವವರು ಸೇರಿದಂತೆ ರಾಜ್ಯಾದ್ಯಂತ ಸುಮಾರು 20 ಲಕ್ಷ ಮಂದಿ ಟೈಲ‌ರ್‌ಗಳಿರುವ ಅಂದಾಜಿದೆ. ಟೈಲರ್ ವೃತ್ತಿ ಮಾಡುತ್ತಿರುವವರಲ್ಲಿ ಪ್ರೌಢಶಿಕ್ಷಣ ಪಡೆದವರಿದ್ದಾರೆ. ಪದವಿ ಶಿಕ್ಷಣ ಪಡೆದವರೂ ಇದ್ದಾರೆ. ಕನಿಷ್ಠ ಪ್ರೌಢಶಿಕ್ಷಣ, ಪದವಿ ಪೂರ್ವ ಮತ್ತು ಪದವಿ ಶಿಕ್ಷಣ ಪಡೆದ ಇವರುಗಳು ಸರ್ಕಾರಿ ಕೆಲಸಕ್ಕಾಗಿ ಕಾಯದೆ ಸ್ವಯಂ ಉದ್ಯೋಗ ಹುಡುಕಿಕೊಳ್ಳುವಲ್ಲಿ ಮುಂದಾಗಿ ಟೈಲರಿಂಗ್ ತರಬೇತಿ ಪಡೆದು ಸ್ವತಃ ಟೈಲರ್ ವೃತ್ತಿ ಮಾಡುತ್ತಿದ್ದಾರೆ. ಕೆಲವರು ಸಣ್ಣಪುಟ್ಟ ಗಾರ್ಮೆಂಟ್ಸ್‌ಗಳಲ್ಲಿ ಕೆಲಸ ಮಾಡುತ್ತಿದ್ದರೂ ಅಲ್ಲಿನ ಕೆಲಸಗಾರರು ಇಪ್ಪತ್ತು ಮಂದಿಗಿಂತ ಕಡಿಮೆಯಿರುತ್ತಾರೆ. ಆದ್ದರಿಂದ ಅವರಿಗೆ ಕಾರ್ಮಿಕ ಕಾಯ್ದೆ ಅನ್ವಯಿಸದೆ ಇರುವುದರಿಂದ ಯಾವುದೇ ಸವಲತ್ತು ಸಿಗದೆ ವಂಚಿತರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ಭದ್ರತೆಗಾಗಿ ಟೈಲರ್ ಕಲ್ಯಾಣ ಮಂಡಳಿ ರಚಿಸಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಟೈಲರ್ ಕಲ್ಯಾಣ ಮಂಡಳಿ ಜಾರಿಗೆ ತಂದರೆ ಸರ್ಕಾರ ತನ್ನ ಬೊಕ್ಕಸದ ಹಣ ಕೊಡಬೇಕಾಗಿಲ್ಲ. ಟೈಲರ್ ಕಲ್ಯಾಣ ಮಂಡಳಿಗೆ ಟೆಕ್ಸ್‌ಟೈಲ್‌ ಮಿಲ್ಸ್, ಗಾರ್ಮೆಂಟ್ಸ್, ಬಟ್ಟೆ ಅಂಗಡಿಗಳು ಹಾಗೂ ಬಟ್ಟೆ ಹೊಲಿಗೆಗೆ ಪೂರಕವಾಗಿ ಉತ್ಪನ್ನ ಮಾಡುವ ಸರಕುದಾರ ಉತ್ಪಾದಕರಿಂದ ಶೇ.2ರಷ್ಟು ಸೆಸ್ ಸಂಗ್ರಹ ಮಾಡುವ ಮೂಲಕ ಬರುವ ಬಜೆಟ್‍ನಲ್ಲಿ ಟೈಲರ್ ಕಲ್ಯಾಣ ಮಂಡಳಿ ಜಾರಿಗೆ ತಂದು ರಾಜ್ಯದ್ಯಾಂತ ಇರುವ ಸುಮಾರು 15 ಲಕ್ಷ ಮಂದಿ ಟೈಲರ್‌ಗಳ ಕುಟುಂಬಕ್ಕೆ ನೆರವಾಗಬೇಕು” ಎಂದು ಸರ್ಕಾರಕ್ಕೆ ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಬಳ್ಳಾರಿ | ಅಮಿತ್ ಶಾ ಹೇಳಿಕೆ ಖಂಡಿಸಿ ನಡೆದ ʼಕಂಪ್ಲಿ ಬಂದ್ʼ ಸಂಪೂರ್ಣ ಯಶಸ್ವಿ

ಪ್ರತಿಭಟನೆಯಲ್ಲಿ ರಾಜ್ಯ ಉಪಾಧ್ಯಕ್ಷ ರಮೇಶ್ ಸಿ ದಾಸರ, ಸಂಚಾಲಕ ಗದಿಗೇಶ ಪಾಳೆದ, ಸರೋಜಾ, ಚನ್ನಪ್ಪ ಗುಮ್ಮನೂರು, ಐರಣಿ ಚಂದ್ರು, ಮಹಮದ್ ರಫೀಕ್, ಟೈಲರ್ ಮುಖಂಡೆ ನಾಗರತ್ನಮ್ಮ, ಸ್ಮಿತಾ, ಉಷಾ, ಬಸಮ್ಮ, ದಯಾನಂದ, ರಾಮು, ಅಶೋಕ, ಮರಿಯಪ್ಪ, ನಾಗಲಕ್ಷ್ಮಮ್ಮ, ಕಾವೇರಿ, ವೀಣಾ, ರೂಪಾ ಹಾಲಮ್ಮ, ಸುನಿತಾ, ಸಂಗೀತ, ಪುಷ್ಪ, ಲತಾ, ರುದ್ರಮ್ಮ, ಅಶೋಕ, ಚೆನ್ನಪ್ಪ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...