ದಾವಣಗೆರೆ | ಶಾಲೆಯಲ್ಲಿ ಕಳಪೆ ಗುಣಮಟ್ಟದ ಬಿಸಿಯೂಟ; ಅಧಿಕಾರಿಗಳ ನಿರ್ಲಕ್ಷ್ಯ

Date:

ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಹಿರೆಮಲ್ಲನಹೊಳೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸುಮಾರು ಆರು ತಿಂಗಳುಗಳಿಂದ ಮಧ್ಯಾಹ್ನದ ಬಿಸಿಯೂಟವಿಲ್ಲದೆ ವಿದ್ಯಾರ್ಥಿಗಳು ಪರದಾಡುತ್ತಿದ್ದಾರೆ. ಶಿಕ್ಷಣ ಇಲಾಖೆಯೂ ಗಮನ ಹರಿಸದೆ ಕಣ್ಣುಮುಚ್ಚಿ ಕುಳಿತಿದೆ ಎಂದು ಕರುನಾಡ ನವ ನಿರ್ಮಾಣ ವೇದಿಕೆ ರಾಜ್ಯಾಧ್ಯಕ್ಷ ಮಹಾಲಿಂಗಪ್ಪ ಜೆ. ಹಿರೇಮಲ್ಲನಹೊಳಿ ಆರೋಪಿಸಿದರು.

ಸುಮಾರು 6 ತಿಂಗಳುಗಳಿಂದ ಸಿಬ್ಬಂದಿಗಳು ಸರಿಯಾಗಿ ಅಡುಗೆ ಮಾಡದೆ ಇರುವುದರಿಂದ ವಿದ್ಯಾರ್ಥಿಗಳು ಶಾಲೆಗೆ ಮನೆಯಿಂದ ಬುತ್ತಿಕಟ್ಟಿಕೊಂಡು ಬಂದು ಊಟ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ಈ ದಿನ.ಕಾಮ್‌ನೊಂದಿಗೆ ಮಹಾಲಿಂಗಪ್ಪ ಜೆ. ಹಿರೇಮಲ್ಲನಹೊಳಿ ಮಾತನಾಡಿ, “ಶಾಲೆಯ ಅಕ್ಷರ ದಾಸೋಹ ಅಡುಗೆ ತಯಾರಕರು ಅಕ್ಕಿ, ಬೇಳೆ, ತರಕಾರಿಗಳನ್ನು ಸರಿಯಾಗಿ ತೊಳೆಯದೆ ಶುಚಿತ್ವ ಕಾಪಾಡದೆ ಅಡುಗೆ ತಯಾರಿ ಮಾಡುತ್ತಿದ್ದಾರೆ. ಅದರಲ್ಲಿ ಹುಳುಗಳು, ತಲೆಕೂದಲು, ಕಸಕಡ್ಡಿ ಕಂಡಿಬಂದಿದ್ದು, ಮಣ್ಣಿನ ವಾಸನೆ ಇರುವ ನೀರಿನಿಂದ ಅಡುಗೆ ಮಾಡುವುದರಿಂದ ವಿದ್ಯಾರ್ಥಿಗಳು ಶಾಲೆಯಲ್ಲಿ ಊಟ ಮಾಡುತ್ತಿಲ್ಲ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಅಡುಗೆಯಲ್ಲಿ ಕೂದಲು ಹುಳಗಳು ಇವೆ ಎಂದು ವಿದ್ಯಾರ್ಥಿಗಳು ಪ್ರಶ್ನೆ ಮಾಡಿದರೆ ಅಡುಗೆ ತಯಾರಕರು ಶಾಲಾ ಮಕ್ಕಳಿಗೆ ಅವಾಚ್ಯ ಪದಗಳಿಂದ ನಿಂದಿಸುತ್ತಾರೆಂದು ವಿದ್ಯಾರ್ಥಿಗಳು ತಮ್ಮ ಅಳಲನ್ನು ತೋಡಿಕೊಳ್ಳುತ್ತಿದ್ದಾರೆ .ಈ ರೀತಿ ನಡೆಯುವ  ಈ ವಿಚಾರವನ್ನು ಹಲವು ಬಾರಿ ಅಧಿಕಾರಿಗಳ ಗಮನಕ್ಕೆ ತಂದರೂ ಕೂಡ ಯಾವುದೆ ಪ್ರಯೋನವಾಗಿಲ್ಲ” ಎಂದು ಆರೋಪಿಸಿದರು.

ಈ ಬಗ್ಗೆ ಮೂರನೇ ತರಗತಿಯ ಶಾಲೆಯ ಮಗುವಿನ ಹೆಸರು ಹೇಳಲಿಚ್ಚಿಸದ ತಾಯಿಯೊಬ್ಬರು ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ಈ ಹಿಂದಿನ ಶೈಕ್ಷಣಿಕ ವರ್ಷದ ಕೆಲವು ತಿಂಗಳುಗಳಿಂದಲೂ ಸರಿಯಾಗಿ ಬಿಸಿಯೂಟ ತಯಾರಿ ಮಾಡುತ್ತಿಲ್ಲ. ತಮ್ಮ ಮಗು ವಾರದ ಮಧ್ಯೆ ಕೆಲವು ದಿನಗಳಲ್ಲಿ ಮನೆಯಿಂದ ಊಟ ತೆಗೆದುಕೊಂಡು ಹೋಗಿ ಊಟ ಮಾಡುತ್ತದೆ” ಎಂದು ಖಚಿತಪಡಿಸಿದರು. 

ಈ ಸುದ್ದಿ ಓದಿದ್ದೀರಾ? ಬಾಗಲಕೋಟೆ | ಉದ್ಯೋಗ ಕಾರ್ಡ್‌ ವಿತರಿಸುವಂತೆ ಕೂಲಿಕಾರ್ಮಿಕರ ಆಗ್ರಹ

“ತಾಲೂಕಿನ ಕೆಲವೊಂದು ಪ್ರೌಢಶಾಲೆ ಮತ್ತು ಪ್ರಾಥಮಿಕ ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟ ಯಾವುದೇ ಶುಚಿತ್ವ, ರುಚಿ ರಹಿತವಾಗಿದ್ದು, ಮೊಟ್ಟೆ, ಬಾಳೆಹಣ್ಣು, ಶುದ್ಧ ಕುಡಿಯುವ ನೀರು ಕೂಡ ಇಲ್ಲ. ಮಕ್ಕಳು ಅನಿವಾರ್ಯ ಪರಿಸ್ಥಿತಿಯಲ್ಲಿ ಅದನ್ನೇ ಊಟ ಮಾಡುತ್ತಿದ್ದಾರೆ. ಮೇಲಧಿಕಾರಿಗಳು ಕಂಡರೂ ಕಾಣದಂತೆ ಜಾಣ ಮೌನ ವಹಿಸಿದ್ದಾರೆ” ಎಂದು ಆರೋಪಿಸಿದರು.

“ಶಾಸಕರು ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳು ಅಕ್ಷರ ದಾಸೋಹ ಅಧಿಕಾರಿಗಳು ಈಗಲಾದರೂ ಎಚ್ಚೆತ್ತುಕೊಂಡು ಶಾಲೆಯಲ್ಲಿ ನಡೆಯುತ್ತಿರುವುದನ್ನು ಕಂಡು ಇಂತಹ ಅಡಿಗೆ ಸಿಬ್ಬಂದಿಗಳಿಗೆ ಮಧ್ಯಾಹ್ನದ ಬಿಸಿ ಊಟ ನಿರ್ವಾಹಕರಿಗೆ ಯಾವ ರೀತಿ ಕ್ರಮ ಕೈಗೊಳ್ಳುತ್ತಾರೆ ಎಂಬುದನ್ನು ಕಾದು ನೋಡಬೇಕು” ಎಂದು ಜನಸಾಮಾನ್ಯರು ಅಸಮಾಧಾನ ವ್ಯಕ್ತಪಡಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...