ದಾವಣಗೆರೆ | ಘನತೆಯ ಸಾವಿನ ಹಕ್ಕು; ಕರ್ನಾಟಕದ ಮೊದಲ ಫಲಾನುಭವಿಯಾಗಲು ನಿವೃತ್ತ ಶಿಕ್ಷಕಿ ಕರಿಬಸಮ್ಮ ತವಕ

Date:

ಗುಣಪಡಿಸಲಾಗದ ಕಾಯಿಲೆಗಳಿಂದ ಬಳಲುತ್ತಿರುವ ರೋಗಿಗಳು ಘನತೆಯಿಂದ ಮರಣ ಹೊಂದುವ ಹಕ್ಕು(ದಯಾಮರಣ) ಅನುಷ್ಠಾನ ಮಾಡುವಂತೆ ಕೋರಿ ನಿರಂತರವಾಗಿ ನಡೆಸಿದ ಹೋರಾಟದ ಫಲವಾಗಿ ʼಘನತೆಯ ಸಾವಿನ ಹಕ್ಕುʼ ಕರ್ನಾಟಕದಲ್ಲಿ ಜಾರಿಗೆ ಬಂದಿರುವುದು ಸಂತಸದ ಸಂಗತಿ. ಘನತೆಯಿಂದ ಸಾಯುವ ಹಕ್ಕಿನ ಕರ್ನಾಟಕದ ಮೊದಲ ಫಲಾನುಭವಿ ನಾನೇ ಆಗಲು ಬಯಸುತ್ತೇನೆ ಎಂದು ನಿವೃತ್ತ ಶಿಕ್ಷಕಿ ಎಚ್‌ ಬಿ ಕರಿಬಸಮ್ಮ ಹೇಳಿದರು.

ದಾವಣಗೆರೆಯಲ್ಲಿ ಈ ಕುರಿತು ಸುದ್ದಿಗೋಷ್ಟಿ ನಡೆಸಿರುವ ಇವರು, ಹಲವು ವರ್ಷಗಳ ನಿರಂತರ ಹೋರಾಟದ ನಂತರ, “ಮಾರಣಾಂತಿಕ ಕಾಯಿಲೆಗಳಿಂದ ಬಳಲುತ್ತಿರುವ ರೋಗಿಗಳಿಗೆ ಘನತೆಯಿಂದ ಸಾಯುವ ಹಕ್ಕನ್ನು ನೀಡಲು ರಾಜ್ಯ ಸರ್ಕಾರ ಜನವರಿ 30ರಂದು ಸುತ್ತೋಲೆ ಹೊರಡಿಸಿದ್ದು, ಈಗ ತನ್ನ ಆಸೆಯನ್ನು ನನಸಾಗಿಸಿಕೊಳ್ಳುವ ಔಪಚಾರಿಕತೆಗಳಿಗಾಗಿ ಕುತೂಹಲದಿಂದ ಕಾಯುತ್ತಿದ್ದೇನೆ” ಎಂದು ಹರ್ಷ ವ್ಯಕ್ತಪಡಿಸಿದರು.

“ತನ್ನ ಜೀವನದ ಹಾದಿ ಅಚಲ ದೃಢನಿಶ್ಚಯದಿಂದ ಕೂಡಿದ್ದು, ಮೂರು ದಶಕಗಳಿಗೂ ಹೆಚ್ಚು ಕಾಲ ಬೆನ್ನಿನ ನರ ದೌರ್ಬಲ್ಯ(ಸ್ಲಿಪ್ಡ್‌ ಡಿಸ್ಕ್‌)ದಿಂದ ನರಳುತ್ತಿದ್ದೇನೆ. ಅಲ್ಲದೆ ಕರುಳು ಕ್ಯಾನ್ಸರ್‌ ಇರುವುದೂ ಪತ್ತೆಯಾಗಿದೆ. ಆರೋಗ್ಯ ಹದಗೆಡುತ್ತಿದ್ದರೂ, ಕಳೆದ 24 ವರ್ಷಗಳಿಂದ ಭಾರತದಲ್ಲಿ ಘನತೆಯಿಂದ ಸಾಯುವ ಹಕ್ಕಿಗಾಗಿ ಹೋರಾಡುತ್ತಿದ್ದು, ಮುಖ್ಯಮಂತ್ರಿ, ಪ್ರಧಾನಿ, ರಾಷ್ಟ್ರಪತಿ ಮತ್ತು ಸುಪ್ರೀಂ ಕೋರ್ಟ್‌ಗೂ ಪತ್ರಗಳನ್ನು ಬರೆದಿದ್ದೇನೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ದೇಶದಲ್ಲಿ ಮಾರಣಾಂತಿಕ ಕಾಯಿಲೆಗಳಿಂದ ಬಳಲುತ್ತಿರುವ ವೃದ್ಧರ ಸಂಖ್ಯೆ ದೊಡ್ಡದಿದೆ. ನನ್ನಂತೆ, ಅವರು ಘನತೆಯಿಂದ ಸಾಯುವ ಅವಕಾಶವಿಲ್ಲದೆ ಬಳಲುತ್ತಿದ್ದಾರೆ. ಈ ಕಾನೂನನ್ನು ಜಾರಿಗೆ ತರಬೇಕೆಂದು ಒತ್ತಾಯಿಸಿ ನಾನು ಹೋರಾಟವನ್ನು ಪ್ರಾರಂಭಿಸಿದಾಗ, ಎಲ್ಲರೂ ಆಘಾತಕ್ಕೊಳಗಾಗಿದ್ದರು. ನನ್ನ ಕುಟುಂಬ ಸದಸ್ಯರು ಮತ್ತು ಸಂಬಂಧಿಕರೂ ಕೂಡ ಕ್ರಮೇಣ ದೂರವಾದರು” ಎಂದು ಹೇಳಿಕೊಂಡಿದ್ದಾರೆ.

“ಅನೇಕರು ಘನತೆಯಿಂದ ಸಾಯುವ ಹಕ್ಕಿನ ಪಟ್ಟಿಯಲ್ಲಿದ್ದಾರೆ, ಈ ಹಕ್ಕನ್ನು ಪಡೆಯಲು ಕಾಯುತ್ತಿದ್ದಾರೆ. ಆದರೆ ನಾನು ಘನತೆಯಿಂದ ಸಾಯುವ ಹಕ್ಕನ್ನು ಪಡೆಯುವಲ್ಲಿ ಕರ್ನಾಟಕದಲ್ಲಿ ಮೊದಲಿಗಳಾಗಲು ಬಯಸುತ್ತೇನೆ” ಎಂದು ತಿಳಿಸಿದ್ದಾರೆ.

ಸುಪ್ರೀಂ ಕೋರ್ಟ್ 2018ರಲ್ಲಿ ನಿಷ್ಕ್ರಿಯ ದಯಾಮರಣವನ್ನು ಕಾನೂನುಬದ್ಧಗೊಳಿಸಿದ್ದರೂ, ಇದೀಗ ಘನತೆಯಿಂದ ಸಾಯುವ ಹಕ್ಕನ್ನು ಜಾರಿಗೆ ತರಲು ಕರ್ನಾಟಕ ನಿರ್ಧರಿಸಿದೆ. ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅವರು ಈ ಕುರಿತು ಸ್ಪಷ್ಟೀಕರಣ ನೀಡಿದ್ದು, “ಈ ನಿರ್ಧಾರವನ್ನು ದಯಾಮರಣವೆಂದು ಗೊಂದಲಗೊಳಿಸಬಾರದು. ಇನ್ನೊಬ್ಬರಿಗೆ ಅವಲಂಬಿತರಾಗಿರುವ ಮತ್ತು ಜೀವ ಉಳಿಸುವ ಚಿಕಿತ್ಸೆಗೆ ಸ್ಪಂದಿಸದವರಿಗೆ ಮಾತ್ರ ಘನತೆಯಿಂದ ಸಾಯುವ ಹಕ್ಕು ಅನ್ವಯಿಸುತ್ತದೆ” ಎಂದು ಹೇಳಿದ್ದಾರೆ.‌

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಯೂತ್ ಕಾಂಗ್ರೆಸ್ ಚುನಾವಣೆಯಲ್ಲಿ ಅಕ್ರಮ, ಮರು ಎಣಿಕೆಗೆ ಆಗ್ರಹ.

ಮಕ್ಕಳಿಲ್ಲದ ಕರಿಬಸಮ್ಮ ಅವರು ಘನತೆಯಿಂದ ಸಾಯುವ ಹಕ್ಕಿಗಾಗಿ ನಡೆಸಿದ ಹೋರಾಟದಿಂದ ತನ್ನ ಸಂಬಂಧಿಕರನ್ನು ದೂರಮಾಡಿಕೊಂಡಿದ್ದಾರೆ. ಪ್ರಸ್ತುತ ದಾವಣಗೆರೆಯ ವೃದ್ಧಾಶ್ರಮದಲ್ಲಿ ಪತಿಯೊಂದಿಗೆ ವಾಸಿಸುತ್ತಿರುವ ಅವರು ಈ ಹಕ್ಕಿಗಾಗಿ ಹೋರಾಟ ನಡೆಸುಲ್ಲಿ ವೈಯಕ್ತಿಕವಾಗಿ ಬಹುತೇಕ ವೆಚ್ಚ ಮಾಡಿದ್ದು, ಅದರ ಅನ್ವೇಷಣೆಯಲ್ಲಿ ತನ್ನ ಆಸ್ತಿ, ಹಣಕಾಸು ಮತ್ತು ಸಂಬಂಧಗಳನ್ನು ಕಳೆದುಕೊಂಡಿದ್ದಾರೆ. ಆದರೆ ಮಾರಣಾಂತಿಕ ಕಾಯಿಲೆಗಳಿಂದ ಬಳಲುತ್ತಿರುವವರು ಗೌರವಯುತ ಸಾವಿಗೆ ಅರ್ಹರು ಎಂಬ ನಂಬಿಕೆಯಲ್ಲಿ ದೃಢವಾಗಿದ್ದರು. ಕಳೆದ 16 ವರ್ಷಗಳಿಂದ ಆರೈಕೆ ಗೃಹದಲ್ಲಿ ವಾಸಿಸುತ್ತಿದ್ದು, ಕರಿಬಸಮ್ಮ(85) ಅವರು, ಎಲ್ಲ ಭೌತಿಕ ಸಂಪತ್ತಿನಿಂದ ದೂರವಿದ್ದು, ತಮ್ಮ ಕೊನೆಯ ಉಳಿತಾಯವಾದ ₹6 ಲಕ್ಷವನ್ನು ಗಡಿ ಭದ್ರತಾ ಪಡೆ(ಬಿಎಸ್ಎಫ್) ಸಿಬ್ಬಂದಿಯ ಕಲ್ಯಾಣಕ್ಕಾಗಿ ದಾನ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...