ದಾವಣಗೆರೆ | ರಾಜಕೀಯ ಪಕ್ಷಗಳ ಮುಖಂಡರ ನಾಚಿಕೆಗೆಟ್ಟ ವರ್ತನೆ ಅಸಹ್ಯ ಪಡುವಂತಿದೆ: ಶಾಸಕ ಬಿ ಪಿ ಹರೀಶ್

Date:

ಜನಾಂದೋಲನದಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್ ಆರೋಪಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರಗೆ ಕಾಂಗ್ರೆಸ್‌ನವರು ಭಿಕ್ಷೆ ನೀಡಿದ್ದರೆ ವಿಜಯೇಂದ್ರ ಅವರು ರಾಜೀನಾಮೆ ನೀಡಿ ಗೆದ್ದುಬರಲಿ ಎಂದು ಹರಿಹರ ಬಿಜೆಪಿ ಶಾಸಕ ಬಿ ಪಿ ಹರೀಶ್ ಸಲಹೆ ನೀಡಿದರು.

ದಾವಣಗೆರೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಡಿ ಕೆ ಶಿವಕುಮಾರ್ ಅವರ ಹೇಳಿಕೆ ನೋಡಿದರೆ‌ ಇದು ಹೊಂದಾಣಿಕೆ ರಾಜಕಾರಣಕ್ಕೆ ಸಾಕ್ಷಿ ಎನಿಸುವುದಿಲ್ಲವೇ” ಎಂದು ಪ್ರಶ್ನಿಸಿದರು.

“ಪ್ರಸ್ತುತ ರಾಜ್ಯ ರಾಜಕಾರಣದಲ್ಲಿ ಹೊಂದಾಣಿಕೆ ನಡೆಯುತ್ತಿದೆ. ಇದು ಸತ್ಯವೆಂದು ಗೊತ್ತಾಗಿದೆ. ವಾಲ್ಮೀಕಿ ನಿಗಮ, ಮುಡಾ ಹಗರಣ ಮಾಡಿಲ್ಲ ಎನ್ನುವುದಕ್ಕಿಂತ ನೀವು ಸಹಭಾಗಿಯಾಗಿಲ್ಲವೇ, ನೀವು ಮಾಡಿಲ್ಲವೇ ಎನ್ನುವ ಪ್ರತ್ಯಾರೋಪದ ಮಾತುಗಳೇ ಕೇಳಿ ಬರುತ್ತಿವೆ. ಎಲ್ಲ ರಾಜಕೀಯ ನಾಯಕರು ಜನರಿಗೆ ಪ್ರಜಾಪ್ರಭುತ್ವಕ್ಕೆ ಮಾಡಿದ ದ್ರೋಹವಿದು” ಎಂದು ಬೇಸರ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಎಲ್ಲ ರಾಜಕೀಯ ನಾಯಕರು ಒಳ ಒಪ್ಪಂದ ಮಾಡಿಕೊಂಡಿದ್ದಾರೆ. ಇವರ ತಪ್ಪು ಅವರು, ಅವರ ತಪ್ಪು ಇವರು ಮುಚ್ಚುತ್ತಾರೆ ಎಂಬ ಮಾತು ಕೇಳಿ ಬರುತ್ತಿದೆ. ನಾಚಿಕೆಗೆಟ್ಟವರಂತೆ ಎಲ್ಲಾ ಪಕ್ಷದ ಮುಖಂಡರು ರಾಜಕೀಯ ಎಂದರೆ ಅಸಹ್ಯ ಪಡುವಂತ ರೀತಿ ವರ್ತಿಸುತ್ತಿದ್ದಾರೆ. ಅಸಹ್ಯ ಎನಿಸುವ ಸ್ಥಿತಿಯಲ್ಲಿ ರಾಜ್ಯ ರಾಜಕಾರಣವಿದೆ ಎಂದರು.

“ದಾವಣಗೆರೆಯ ಕೃಷ್ಣಮೃಗ ವಿಚಾರದಲ್ಲಿ ಹೊಂದಾಣಿಕೆ ರಾಜಕಾರಣ ನಡೆದಿದೆ. ಅಂದು ಅಸಹಾಯಕ ಪರಿಸ್ಥಿತಿಯಲ್ಲಿ ಇಂದಿನ ಜಿಲ್ಲಾ ಸಚಿವರು ಇದ್ದರು. ಅಂದಿನ‌ ಸಿಎಂ ಬೊಮ್ಮಾಯಿ ಅವರನ್ನು ರಕ್ಷಣೆ ಮಾಡಿದರು. ಹೊಂದಾಣಿಕೆ ರಾಜಕೀಯ ಇರುವುದರಿಂದಲೇ ಒಬ್ಬರಿಗೊಬ್ಬರು ಕಚ್ಚಾಡುತ್ತ ಇವರ ಬಂಡವಾಳಗಳನ್ನು ಜನರಿಗೆ ತೋರಿಸುತ್ತಿದ್ದಾರೆ” ಎಂದರು.

ಈ ಸುದ್ದಿ ಓದಿದ್ದೀರಾ? ಕೊಡಗು | 78ನೇ ಸ್ವಾತಂತ್ರ‍್ಯ ದಿನಾಚರಣೆ ಅಂಗವಾಗಿ ‘ನಶಾ ಮುಕ್ತ ಭಾರತ’ ಅಭಿಯಾನ

“ಜಿಲ್ಲಾ ಉಸ್ತುವಾರಿ ಸಚಿವರು ಹರಿಹರ ತಾಲೂಕಿನ‌ ಗಡಿಭಾಗದ ಹಳ್ಳಗಳನ್ನು ಮುಚ್ಚಿದ್ದಾರೆ. ನೈಸರ್ಗಿಕ ಹಳ್ಳಗಳನ್ನು ಅವರಿಗೆ ಬೇಕಾದಂತೆ ಮುಚ್ಚಿದ್ದಾರೆ. ಗಡಿಲೈನ್ ಅಳಿಸಿ ಅಕ್ರಮವೆಸಗಿದ್ದರು. ಈ ಬಗ್ಗೆ ಅಧಿವೇಶನದಲ್ಲಿ‌ ಧ್ವನಿ‌ ಎತ್ತಿದಾಗ ಎಲ್ಲವೂ‌ ಸರಿಯಿದೆ ಎಂದು ಉತ್ತರ ನೀಡಿದ್ದಾರೆ. ಆದರೀಗ ನನ್ನ ಹೋರಾಟಕ್ಕೆ ಜಯ‌ದೊರೆತಿದೆ. ಅಧಿವೇಶನದಲ್ಲಿ ಧ್ವನಿ ಎತ್ತಿದ ನಂತರ ಮೊದಲಿನಂತೆ ನೈಸರ್ಗಿಕ ಹಳ್ಳಗಳನ್ನು ಸರಿಪಡಿಸಿ ಮೊದಲ‌ ಸ್ವರೂಪಕ್ಕೆ ತರಲಾಗಿದೆ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...