ದಾವಣಗೆರೆ | ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಮರಣದಂಡನೆ ವಿಧಿಸಲು ಅವಕಾಶವಿದೆ: ನ್ಯಾ. ರಾಜೇಶ್ವರಿ

Date:

ಹನ್ನೆರೆಡು ವರ್ಷದ ಒಳಗಿನ ಯಾವುದೇ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆಯುವುದನ್ನು ಘೋರ ಅಪರಾಧವೆಂದು ಪರಿಗಣಿಸಿ ಮರಣ ದಂಡನೆ ವಿಧಿಸಲು ಕಾನೂನಿನಲ್ಲಿ ಅವಕಾಶ ಇದೆ ಎಂದು ದಾವಣಗೆರೆ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷೆ ರಾಜೇಶ್ವರಿ ಎನ್ ಹೆಗಡೆ ತಿಳಿಸಿದರು.

ದಾವಣಗೆರೆ ಜಿಲ್ಲಾ ಕಾನೂನು ಸೇವಾಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಉತ್ತರ ಕಚೇರಿ ಹಾಗೂ ವಲಯ ಶಾಲಾ ಶಿಕ್ಷಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಪೋಕ್ಸೊ ಕಾನೂನಿನ ಅರಿವು ಹಾಗೂ ಮಕ್ಕಳ ಹಕ್ಕುಗಳ ಕಾರ್ಯಗಾರದಲ್ಲಿ ಮಾತನಾಡಿದರು.

“ಲಿಂಗ ಬೇಧವಿಲ್ಲದೆ 18 ವರ್ಷದೊಳಗಿನ ಯಾವುದೇ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆದರೆ, ಶೋಷಣೆ ಮಾಡುವುದು ಕಂಡುಬಂದರೆ ಕೂಡಲೇ ದೌರ್ಜನ್ಯ ಪ್ರಕರಣಗಳನ್ನು ನಡೆಸಲೆಂದೇ ಲೈಂಗಿಕ ವಿಶೇಷ ನ್ಯಾಯಾಲಯಗಳನ್ನು ರಚಿಸಲಾಗಿದೆ. ಸಂಬಂಧಿಸಿದ ಪ್ರಾಧಿಕಾರ ಮಕ್ಕಳ ಸ್ನೇಹಿ ಪೊಲೀಸರ ನ್ಯಾಯಾಲಯಗಳ ಗಮನಕ್ಕೆ ತರಬೇಕು. ಯಾವುದೇ ಪ್ರಭಾವಿ ವ್ಯಕ್ತಿಯಾಗಲಿ ಇಂತಹ ಪ್ರಕರಣಗಳಲ್ಲಿ ಭಾಗಿಯಾದರೆ ಎಲ್ಲರಿಗೂ ಶಿಕ್ಷೆ ಆಗುವುದು ಖಚಿತ. ಅಲ್ಲದೇ ಇದಕ್ಕೆ ಪ್ರೋತ್ಸಾಹ ನೀಡುವವರಿಗೂ ಶಿಕ್ಷೆ ಆಗಲಿದೆ” ಎಂದು ಎಚ್ಚರಿಕೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮಕ್ಕಳನ್ನು ಕಾಪಾಡುವುದು ಕೇವಲ ಅಧಿಕಾರಿಗಳ ಕೆಲಸ ಅಲ್ಲ. ಸಾರ್ವಜನಿಕರ ಜವಾಬ್ದಾರಿಯೂ ಇದೆ. ಇಂದಿನ ಮಕ್ಕಳು ನಾಳಿನ ಪ್ರಜೆಗಳು. ಮಕ್ಕಳು ಬೌದ್ಧಿಕ, ಸಾಮಾಜಿಕವಾಗಿ ಬೆಳೆದು ನಾಳಿನ ಉತ್ತಮ ಸಮಾಜದ ನಿರ್ಮಾಣಕ್ಕಾಗಿ ಮಕ್ಕಳನ್ನು ಸಂರಕ್ಷಣೆ ಮಾಡಬೇಕು. ಯೂ ಟ್ಯೂಬ್, ಸೋಷಿಯಲ್‌ ಮೀಡಿಯಾಗಳಲ್ಲಿ ಲೈಂಗಿಕ ದೌರ್ಜನ್ಯ ಪ್ರಚೋದನೆ ಕಂಡು ಬರುತ್ತಿವೆ. ಇಂತಹ ವೇಳೆ ಪೋಷಕರು ಜಾಗೃತರಾಗಿ ಮಕ್ಕಳ ರಕ್ಷಣೆಗೆ ಮುಂದಾಗಬೇಕು” ಎಂದು ಕಿವಿಮಾತು ಹೇಳಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಕೌಟುಂಬಿಕ ದೌರ್ಜನ್ಯಕ್ಕೆ ಒಳಗಾದ ಮಹಿಳೆಯ ರಕ್ಷಣೆಗೆ ಕ್ರಮವಹಿಸಿ: ಶಿವಾನಂದ ಕಾಪಶಿ

ಹಿರಿಯ ಸಿವಿಲ್ ನ್ಯಾಯಾಧೀಶ ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ ಮ.ಕರೆಣ್ಣವರ ಮಾತನಾಡಿ, “ಅಲ್ಪ ವಯಸ್ಸಿನ ಯಾವುದೇ ಮಕ್ಕಳ ಮೇಲೆ ನಡೆಯುವ ಲೈಂಗಿಕ ದೌರ್ಜನ್ಯ ತಡೆಯಲು ಕಾಯಿದೆ ಜಾರಿಗೆ ತರಲಾಗಿದೆ. ಎಲ್ಲಿಯೇ ಇಂತಹ ಪ್ರಕರಣಗಳು ನಡೆದರೆ ಯಾವುದೇ ನಾಚಿಕೆ, ಹಿಂಜರಿಕೆ, ಸಂಕೋಚ, ಹೆದರಿಕೆ ಇಲ್ಲದೆ ಇವುಗಳ ವಿರುದ್ಧ ದನಿ ಎತ್ತಬೇಕು. ಯಾವುದೇ ರಾಜಕೀಯ ಧಾರ್ಮಿಕ ಗುರುಗಳಾಲೀ ಯಾರೇ ವ್ಯಕ್ತಿಯಾಗಲೀ, ಭಾಗಿಯಾದರೆ ಅವರಿಗೆ ಶಿಕ್ಷೆ ಖಚಿತ” ಎಂದು ಹೇಳಿದರು.

ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ತಿಪ್ಪೇಶಪ್ಪ ಜಿ ಆರ್, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಅರುಣ್ ಕುಮಾರ್, ಕಾರ್ಯದರ್ಶಿ ಎಸ್‌ ಬಸವರಾಜ್, ಉತ್ತರ ವಲಯದ ಶಿಕ್ಷಣಾಧಿಕಾರಿ ಟಿ ಅಂಬಣ್ಣ, ಮುಖ್ಯ ಶಿಕ್ಷಕ ನಿರಂಜನ್, ರೆಹನಾಬಾನು, ಶಾಂತ ವೀರಣ್ಣ, ಡಿ ನಾಗರಾಜ್‌, ರವಿಕುಮಾರ್ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...