ದಾವಣಗೆರೆ | ಸ್ಮಶಾನಕ್ಕೆ ನುಗ್ಗಿದ ತುಂಗಭದ್ರಾ ಹಿನ್ನೀರು; ಶವಸಂಸ್ಕಾರಕ್ಕೆ ಪರದಾಟ

Date:

ಸ್ಮಶಾನಕ್ಕೆ ನುಗ್ಗಿದ ತುಂಗಭದ್ರಾ ಹಿನ್ನೀರು ಇಡೀ ಸ್ಮಶಾನವನ್ನು ಮುಳುಗಿಸಿದ್ದು, ಶವಸಂಸ್ಕಾರಕ್ಕೆ ಜನರು ಪರದಾಟ ನಡೆಸಿರುವ ಘಟನೆ ದಾವಣಗೆರೆ ಜಿಲ್ಲೆ ಹರಿಹರ ಹೊರವಲಯದ ಗುತ್ತೂರಿನಲ್ಲಿ ನಡೆದಿದೆ.

ಗುತ್ತೂರಿನ ಮಂಜಪ್ಪ(70) ಎಂಬುವವರು ಮೃತಪಟ್ಟಿದ್ದರು. ಶವಸಂಸ್ಕಾರ ನಡೆಸಲು ಹೋದರೆ ಸ್ಮಶಾನ ಜಲಾವೃತವಾಗಿತ್ತು. ನದಿ ಮೈದುಂಬಿ ಹರಿಯುತ್ತಿದ್ದು, ಶವಸಂಸ್ಕಾರ ಹೇಗೆ ಮಾಡುವುದೆಂಬ ಚಿಂತೆ ಸಂಬಂಧಿಕರಿಗೆ ಶುರುವಾಗಿತ್ತು. ಬಳಿಕ ಶವವನ್ನು ಎತ್ತಿಕೊಂಡು ಸೊಂಟ ಮಟ್ಟದ ನೀರಿನಲ್ಲೇ ಸಾಗಿ ಎತ್ತರದ ಪ್ರದೇಶದಲ್ಲಿ ಶವಸಂಸ್ಕಾರ ನೆರೆವೇರಿಸಿದ್ದಾರೆ.

ಅನಿವಾರ್ಯವಾಗಿ ಸಂಬಂಧಿಕರು ನದಿ ತೀರದಲ್ಲೇ ನಿಂತು ಶವಸಂಸ್ಕಾರದ ಪ್ರಕ್ರಿಯೆ ವೀಕ್ಷಿಸಿದ್ದಾರೆ. ಒಂದು ಹಿಡಿಯಷ್ಟು ಮಣ್ಣು ಹಾಕಿ ಮೃತರಿಗೆ ಗೌರವ ಸಲ್ಲಿಸಲು ಸಾದ್ಯವಾಗಲಿಲ್ಲವೆಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಮಂಡ್ಯ | ಕೆಆರ್‌ಎಸ್‌ನಿಂದ 1.30 ಕ್ಯೂಸೆಕ್ ನೀರು ಬಿಡುಗಡೆ

ಗುತ್ತೂರು ಹಾಗೂ ಸುತ್ತಲಿನ ಪ್ರದೇಶದ ನದಿ ತೀರದಲ್ಲಿ ಇಟ್ಟಿಗೆ ಭಟ್ಟಿ ತಯಾರಕರು ಅಕ್ರಮವಾಗಿ ಮಣ್ಣು ಅಗೆಯುವುದು ಮತ್ತು ಮರಳುಗಾರಿಕೆ ನಡೆಸುತ್ತಿರುವುದರಿಂದ ನದಿನೀರು ಸ್ಮಶಾನಕ್ಕೆ ನುಗ್ಗುತ್ತದೆಂದು ಕೆಲ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ ಅವರು, ಸರ್ಕಾರ, ಎತ್ತರದ ಪ್ರದೇಶದಲ್ಲಿ ಅಥವಾ ಬೇರೆ ಪ್ರದೇಶದಲ್ಲಿ ಸ್ಮಶಾನಕ್ಕೆ ಜಮೀನು ಮಂಜೂರು ಮಾಡಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...