ದಾವಣಗೆರೆ | ಅಸ್ಪೃಶ್ಯತಾ ನಿವಾರಣಾ ಜಾಗೃತಿ ಕಲಾ ಜಾಥಾ

Date:

ಎಲ್ಲ ಸಮುದಾಯಗಳ ಮಾನವರು ಒಂದೇ. ನಾವೆಲ್ಲ ಕೂಡಿ ಸಹೋದರತ್ವ ಭಾವನೆಯಿಂದ ಬದುಕಬೇಕೆಂಬ ಹಂಬಲ ಜಾಗೃತಿ ಮೂಡಿಸುವ ಸಮಸಮಾಜದ ಆಶಯಗಳನ್ನು ಎತ್ತಿ ಹಿಡಿಯುವ ಹಾದಿಯಲ್ಲಿ ದಾವಣಗೆರೆ ಸಮಾಜ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಪಂಚಾಯತ್ ರೂಪದರ್ಶಿ ಕಲಾ ತಂಡದ ಸಹಯೋಗದಲ್ಲಿ ಸಾಂಸ್ಕೃತಿಕ ಕಲಾ ಜಾಥಾ ಹಮ್ಮಿಕೊಂಡಿತ್ತು.

ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳ ಜನರಲ್ಲಿ ಸಮಸ್ಯೆಗಳ ಜಾಗೃತಿ ಮೂಡಿಸುವ ಕೆಲಸ ಆಗಬೇಕು ಎಂಬ ಧ್ಯೇಯೋದ್ದೇಶದಿಂದ ಅಸ್ಪೃಶ್ಯತಾ ನಿವಾರಣಾ ಜಾಗೃತಿ ಕಲಾ ಜಾಥಾದ ಮೂಲಕ ಜಿಲ್ಲೆಯ ಕೆಲವಾರು ಹಳ್ಳಿಗಳಲ್ಲಿ ಬೀದಿ ನಾಟಕ, ಹಾಡುಗಳ ಮುಖೇನ ಜಾಗೃತಿ ಮೂಡಿಸಲು ಪ್ರಯತ್ನ ಮಾಡಿದರು.

ಕಲಾ ಜಾಥಾ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸ್ವಾತಂತ್ರ್ಯ ಬಂದು ಇಷ್ಟು ವರ್ಷ ಕಳೆದರೂ ಇನ್ನೂ ದೇಶದಲ್ಲಿ ಜಾತಿ ತಾರತಮ್ಯ ನೀತಿ ಹೋಗಿಲ್ಲ, ಹಳ್ಳಿಗಳಲ್ಲಿ ಹೋಟೆಲ್‌ಗಳಲ್ಲಿ ತಿಂಡಿ, ಟೀ, ಕಾಫಿ ಕುಡಿಯಲು ಅವಕಾಶ ಸಿಕ್ಕಿಲ್ಲ. ಕ್ಷೌರ ಮಾಡೋಲ್ಲ, ದೇವರ ಗುಡಿಯಲ್ಲಿ ಪ್ರವೇಶ ಇಲ್ಲ, ಅಂಬೇಡ್ಕ‌ರ್ ಸಂವಿಧಾನ ಆಶಯಗಳು ಇನ್ನೂ ಈಡೇರಿಲ್ಲ. ಈ ಸಾಮಾಜಿಕ ಸಮಸ್ಯೆಗಳನ್ನೂ ಜನರ ನಡುವೆ ಮುಟ್ಟಿಸುವ ಕೆಲಸ ಮಾಡುತ್ತಿದ್ದಾರೆ.

ಅಸ್ಪೃಶ್ಯತಾ ನಿವಾರಣಾ ಜಾಗೃತಿ ಕಲಾ ಜಾಥಾ ತಂಡದ ಮುಖ್ಯಸ್ಥ ಮಲ್ಲಿಕಾರ್ಜುನ ಸ್ವಾಮಿ, ಮಾಧ್ಯಮ ರತ್ನ ಪ್ರಶಸ್ತಿ ಪುರಸ್ಕೃತ ಸಂಘಟಕ ಹೋರಾಟಗಾರ ಕಲಾವಿದ ಪುರಂದರ್ ಲೋಕಿಕೆರೆ, ಹಿರಿಯ ಕಲಾವಿದ ಗಂಟ್ಯಾಪುರ ನಾಗರಾಜ್ ನಾಯ್ಕ, ಜ್ಯೋತಿ ಜಿಗಳಿ, ರಂಗಣ್ಣ, ಪರಶುರಾಮ್ ಗುಮ್ಮನೂರು, ಬಸವರಾಜ್, ರವಿಕುಮಾರ್, ಮಾಧ್ಯಮ ರತ್ನ ಪ್ರಶಸ್ತಿ ಪುರಸ್ಕೃತ ಸಂಘಟಕ ಹೋರಾಟಗಾರ ಕಲಾವಿದ ಪುರಂದರ್ ಲೋಕಿಕೆರೆ ಸೇರಿದಂತೆ ಹಲವು ಕಲಾವಿದರು ಜಾಥಾದಲ್ಲಿ ಪಾಲ್ಗೊಂಡಿದ್ದರು.

ಈ ಸುದ್ದಿ ಓದಿದ್ದೀರಾ? ತುಮಕೂರು | ಕೆರೆ ಒತ್ತುವರಿ ತೆರವು ಮಾಡಿ ಕೆರೆಯಾಗಿಯೇ ಉಳಿಸಿ: ಬೈಚೇನಹಳ್ಳಿ ಗ್ರಾಮಸ್ಥರ ಮನವಿ

ಹಳ್ಳಿಗಳಲ್ಲಿಯ ದಲಿತ ಹಿಂದುಳಿದ ವರ್ಗಗಳ ಕೇರಿಗಳಲ್ಲಿ ಬಸ್ ನಿಲ್ದಾಣ ಆವರಣಗಳಲ್ಲಿ
“ಮೈಲಿಗೆ” ಬೀದಿ ನಾಟಕ, ನೆರೆದಿದ್ದ ಸಾವಿರಾರು ಮಂದಿ ಪ್ರೇಕ್ಷಕರ ಮನ ಸೆಳೆಯುವ ಮೂಲಕ ಅಸ್ಪೃಶ್ಯತೆಯ ಅರಿವು ಜಾಗೃತಿ ಮೂಡಿಸುವ ಪ್ರಯತ್ನ ಮಾಡಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...