ದಾವಣಗೆರೆ | ಹದಡಿ ರಸ್ತೆ ದುರಸ್ತಿಗೆ ವಿಶ್ವ ಕರ್ನಾಟಕ ರಕ್ಷಣಾ ವೇದಿಕೆ ಆಗ್ರಹ

Date:

ಹದಡಿ ರಸ್ತೆಯ ದುರಸ್ತಿಗಾಗಿ ಆಗ್ರಹಿಸಿ ಲೋಕೋಪಯೋಗಿ ಇಲಾಖೆ ವಿರುದ್ಧ ವಿಶ್ವ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ದಾವಣಗೆರೆ ನಗರದ ಜಯದೇವ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಶೀಘ್ರ ರಸ್ತೆ ನಿರ್ವಹಣೆ ಕಾಮಗಾರಿ ಕೈಗೊಳ್ಳಲು ಒತ್ತಾಯಿಸಿದರು.

ದಾವಣಗೆರೆ ನಗರದ ಜಯದೇವ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, “ಜಯದೇವ ವೃತ್ತದಿಂದ ಅಂಬೇಡ್ಕರ್ ವೃತ್ತದ ಮೂಲಕ ಹಾದು ಹೋಗುವ ಹದಡಿ ರಸ್ತೆಯು ಹಲವಾರು ದಿನಗಳಿಂದ ಹದಗೆಟ್ಟಿದೆ. ಇದರಿಂದಾಗಿ ಈ ರಸ್ತೆಯಲ್ಲಿ ಸಂಚರಿಸುವ ವಾಹನ ಚಾಲಕರು ಮತ್ತು ಪಾದಚಾರಿಗಳು ನರಕಯಾತನೆ ಅನುಭವಿಸುತ್ತಿದ್ದಾರೆ” ಎಂದು ಆಕೋಶ ವ್ಯಕ್ತಪಡಿಸಿದರು.

“ದಾವಣಗೆರೆಯಲ್ಲಿ ಹದಡಿ ರಸ್ತೆಯು ಅತಿಹೆಚ್ಚು ವಾಹನಗಳು ಸಂಚರಿಸುವ ರಸ್ತೆಯಾಗಿದ್ದು, ಹೆದ್ದಾರಿಗೆ ಸಂಪರ್ಕ ಕಲ್ಪಿಸುತ್ತದೆ. ದಿನಂಪ್ರತಿ ಅಲ್ಲಲ್ಲಿ ಅಪಘಾತಗಳು ಸಂಭವಿಸುತ್ತಿವೆ. ವಿದ್ಯಾರ್ಥಿ ಭವನದ ವೃತ್ತದಲ್ಲಿರುವ ಹತ್ತಾರು ಗುಂಡಿಗಳು ವಾಹನ ಸಂಚಾರಕ್ಕೆ ತೀವ್ರ ತೊಂದರೆಯನ್ನು ಉಂಟುಮಾಡುತ್ತಿವೆ. ಅಲ್ಲಿ ಓಡಾಡುವಾಗ ಜನರು ಅಂಗೈಯಲ್ಲಿ ಜೀವವನ್ನು ಇಟ್ಟುಕೊಂಡು ಸಂಚರಿಸುವಂತಾಗಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿಕರವೇ ರಾಜ್ಯಾಧ್ಯಕ್ಷ ಕೆ ಜಿ ಯಲ್ಲಪ್ಪ ಮಾತನಾಡಿ, “ದಾವಣಗೆರೆಯಲ್ಲಿ ಮುಖ್ಯರಸ್ತೆಯಾದ ಹದಡಿ ರಸ್ತೆಯು ಜಯದೇವ ವೃತ್ತದಿಂದ ಹೊರಭಾಗದವರೆಗೆ ಗುಂಡಿಗಳಿಂದ ತುಂಬಿದ್ದು, ತೀವ್ರ ಹದಗೆಟ್ಟಿದೆ. ಮಳೆಗಾಲದಿಂದ ಸುಮಾರು ಎರಡು ತಿಂಗಳಿನಿಂದಲೂ ಹದಡಿ ರಸ್ತೆಯಲ್ಲಿ ಗುಂಡಿಗಳಾಗಿದ್ದರೂ ನಿರ್ವಹಣೆ ಮಾಡಬೇಕಾದ ಲೋಕೋಪಯೋಗಿ ಇಲಾಖೆಯವರು ಕಣ್ಣುಮುಚ್ಚಿ ಕುಳಿತಿದ್ದಾರೆ. ಪ್ರತಿದಿನ ಇದೇ ರಸ್ತೆಯ ಮೂಲಕ ನೂರಾರು ಬಾರಿ ಹತ್ತಾರು ಆಸ್ಪತ್ರೆಗಳ ಆ್ಯಂಬುಲೆನ್ಸ್‌ಗಳು ಸಾಗುತ್ತವೆ. ಈ ಆ್ಯಂಬುಲೆನ್ಸ್‌ನಲ್ಲಿ ಜೀವನ್ಮರಣದ ಹೋರಾಟದಲ್ಲಿರುವ ರೋಗಿಗಳ ಗತಿ ಏನು? ಇಲಾಖೆಯು ಇಲ್ಲಿ ಪ್ರಾಣಬಲಿಯಾಗುವುದನ್ನೇ ಕಾಯುತ್ತಿದೆಯೇ” ಎಂದು ಪ್ರಶ್ನಿಸಿದರು.

ಈ ಸುದ್ದಿ ಓದಿದ್ದೀರಾ? ಬಾಗೇಪಲ್ಲಿ | ವಕೀಲ ವೃತ್ತಿ ಜಗತ್ತಿನಲ್ಲಿಯೇ ಶ್ರೇಷ್ಠ ವೃತ್ತಿ; ನ್ಯಾಯಾಧೀಶೆ ಎಂ.ಭಾರತಿ

“ಲೋಕೋಪಯೋಗಿ ಇಲಾಖೆಗೆ ಸಂಬಂಧಿಸಿದ ಅಧಿಕಾರಿಗಳು ಈ ರಸ್ತೆಯ ಮೂಲಕ ಸಂಚರಿಸುವುದಿಲ್ಲವೇ? ನಿಮ್ಮ ಕಣ್ಣಿಗೆ ಈ ರಸ್ತೆಯ ದುರಾವಸ್ಥೆ ಕಾಣುತ್ತಿಲ್ಲವೇ? ಹದಡಿ ರಸ್ತೆಯನ್ನು ಕೂಡಲೇ ದುರಸ್ತಿ ಮಾಡಬೇಕು. ತತ್‌ಕ್ಷಣವೇ ಕಾಮಗಾರಿಯನ್ನು ಪ್ರಾರಂಭಿಸದಿದ್ದರೆ ಬೃಹತ್ ಹೋರಾಟವನ್ನು ಹಮ್ಮಿಕೊಳ್ಳಬೇಕಾಗುತ್ತದೆ” ಎಂದು ವಿಶ್ವ ಕರ್ನಾಟಕ ರಕ್ಷಣಾ ವೇದಿಕೆಯಿಂದ ಎಚ್ಚರಿಕೆ ನೀಡಿದ್ದಾರೆ.

ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷ ಬಾಬುರಾವ್, ಕಾರ್ಯದರ್ಶಿ ಅಜಮ್ ರಜ್ವಿ, ಮುಖಂಡರಾದ ಸಿದ್ದೇಶ್, ದಯಾನಂದ, ಅಮ್ಜದ್, ಮೆಹಬೂಬ್, ಸೈಯದ್, ಗಿರೀಶ್, ಗದಿಗೆಪ್ಪ, ರಾಮಣ್ಣ ತೆಲಿಗಿ, ರವಿ, ಸಂತೋಷ್ ದೊಡ್ಮನಿ, ರಮೇಶ್ ಅಣ್ಣೇಶ್, ಪೃಥ್ವಿ, ಬಸವರಾಜು, ಯತರಾಜ್, ಆನಂದ್, ನವೀನ್, ಪ್ರಶಾಂತ್, ಪ್ರವೀಣ್, ನಾಗರಾಜ್ ಇತರ ಕಾರ್ಯಕರ್ತರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...