ದಾವಣಗೆರೆ | ಕೇಂದ್ರ, ರಾಜ್ಯ ಸರ್ಕಾರಗಳ ವಿರುದ್ಧ ನ.26ರಂದು ಎಚ್ಚರಿಕೆ ಜಾಥಾ

Date:

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಎಚ್ಚರಿಕೆ ನೀಡಲು ನವೆಂಬರ್ 26ರಂದು ಸಂಯುಕ್ತ ಹೋರಾಟ-ಕರ್ನಾಟಕ ಕರೆ ನೀಡಿರುವ ಹಿನ್ನೆಲೆಯಲ್ಲಿ ದೇಶಾದ್ಯಂತ ರೈತ ಕಾರ್ಮಿಕರ ಎಚ್ಚರಿಕೆ ಜಾಥಾ ಪೂರ್ವಭಾವಿಯಾಗಿ ಪೋಸ್ಟರ್ ಬಿಡುಗಡೆ ಮಾಡಿ ಪ್ರಚಾರ ಆರಂಭಿಸಲಾಯಿತು.

ದಾವಣಗೆರೆ ನಗರದ ಜಯದೇವ ವೃತ್ತದಲ್ಲಿ ಪೋಸ್ಟರ್ ಬಿಡುಗಡೆ ಮಾಡಿ ಮಾತನಾಡಿದ ಮುಖಂಡರು, “ಸಂಯುಕ್ತ ಹೋರಾಟ-ಕರ್ನಾಟಕ ಅಡಿಯಲ್ಲಿ ನವೆಂಬರ್ 26ರಂದು ಎಚ್ಚರಿಕೆ ಜಾಥಾ ಮೂಲಕ ನಾವು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಎಚ್ಚರಿಕೆ ನೀಡುತ್ತಿದ್ದೇವೆ. ಮೂರು ತಿಂಗಳಲ್ಲಿ ಕೊಟ್ಟ ಮಾತು ಈಡೇರಿಸದಿದ್ದರೆ ರೈತರು ಹಾಗೂ ದುಡಿಯುವ ಜನರ ಆಕ್ರೋಶವನ್ನು ನೀವು ಎದುರಿಸಬೇಕಾಗುತ್ತದೆ” ಎಂದು ಸರ್ಕಾರದ ವಿರುದ್ಧ ಕಿಡಿಕಾರಿದರು.

ಪ್ರತಿಭಟನೆಯಲ್ಲಿ ಕಾರ್ಮಿಕ ಮುಖಂಡ ಉಮೇಶ್ ಆವರಗೆರೆ ಮಾತನಾಡಿ, “ಈ ಹಿಂದೆ ಕೇಂದ್ರ ಸರ್ಕಾರ ಐತಿಹಾಸಿಕ ರೈತ ಹೋರಾಟದ ಸಂದರ್ಭದಲ್ಲಿ ಲಿಖಿತ ರೂಪದಲ್ಲಿ ಭರವಸೆಯನ್ನು ಕೊಟ್ಟಿದ್ದು, ಅದನ್ನು ಈಡೇರಿಸಬೇಕು. ಕೂಡಲೇ ರೈತ ಹಾಗೂ ಕಾರ್ಮಿಕ ಸಂಘಟನೆಗಳ ಜತೆಗೆ ಮಾತುಕತೆಯನ್ನು ಪುನರ್ ಆರಂಭಿಸಬೇಕು. ರೈತರ ಬೆಳೆಗಳಿಗೆ ಕನಿಷ್ಟ ಬೆಂಬಲ ಬೆಲೆ ಕಾಯ್ದೆಯಾಗಬೇಕು. ಎಲ್ಲ ಅಸಂಘಟಿತ ಕಾರ್ಮಿಕರಿಗೂ ಕನಿಷ್ಟ ₹27,000 ವೇತನ ಮತ್ತು ಸಾಮಾಜಿಕ ಭದ್ರತೆ ಖಾತ್ರಿಯಾಗಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಂಚಾಲಕ ಸತೀಶ್ ಅರವಿಂದ್ ಮಾತನಾಡಿ, “ದಮನಿತ ಸಮುದಾಯಗಳಿಗೆ ರಕ್ಷಣೆ, ಯುವಜನರಿಗೆ ಉದ್ಯೋಗ ಭದ್ರತೆ ಹಾಗೂ ಸಮಾಜದಲ್ಲಿ ಸೌಹಾರ್ದದ ವಾತಾವರಣ ಖಾತ್ರಿಪಡಿಸಲು ಸರ್ಕಾರಗಳು ಕ್ರಮ ಕೈಗೊಳ್ಳಬೇಕು. ಜಿಎಸ್‌ಟಿ ಮತ್ತು ಸೆಸ್‌ ತಗ್ಗಿಸುವ ಮೂಲಕ ಬೆಲೆ ಏರಿಕೆ ಇಳಿಸಬೇಕು. ಈ ಬೇಡಿಕೆಗಳ ಈಡೇರಿಕೆಗಾಗಿ ಸರ್ಕಾರ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದರು.

ಎಐಕೆಕೆಎಂಎಸ್ ಮುಖಂಡ ಮಧು ತೊಗಲೇರಿ ಮಾತನಾಡಿ, “ಸಂಯುಕ್ತ ಹೋರಾಟ-ಕರ್ನಾಟಕದ ಮೂಲಕ ರಾಜ್ಯ ಸರ್ಕಾರದ ಮುಂದೆ ಒಂದು ಹಕ್ಕೊತ್ತಾಯವನ್ನು ಇಡುತ್ತಿದ್ದು, ವಿವಿಧ ಜನವಿಭಾಗಗಳ ಬದುಕಿಗೆ ಸಂಬಂಧಿಸಿದ ಮೇಲ್ಕಂಡ ವಿಚಾರಗಳನ್ನು ಕೂಲಂಕುಷವಾಗಿ ಚರ್ಚಿಸಲು ಮೂರು ದಿನಗಳ ಅಧಿವೇಶನ ಕರೆಯಬೇಕು. ಅಧಿವೇಶನದಲ್ಲಿ ಪ್ರತಿಯೊಂದಕ್ಕೂ ನಿರ್ಧಿಷ್ಟ ತೀರ್ಮಾನಗಳನ್ನು ತೆಗೆದುಕೊಳ್ಳಲು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಎಲ್ಲ ಕ್ಯಾಬಿನೆಟ್ ಸಚಿವರು, ಸಂಬಂಧಿತ ಅಧಿಕಾರಿಗಳು ಹಾಗೂ ವಿವಿಧ ಜನಚಳವಳಿಗಳ ಮುಖಂಡರು ಹಾಜರಿದ್ದು, ಜನರ ಬದುಕಿನ ಮುಖ್ಯ ಸಮಸ್ಯೆಗಳ ಕುರಿತು ಕೂಲಂಕುಷ ಚರ್ಚೆಯಾಗಬೇಕು. ಅದರಲ್ಲಿ ಎರಡೂ ಕಡೆಯಿಂದ ಒಪ್ಪಿತವಾಗುವ ವಿಚಾರಗಳು ಸೂಕ್ತ ಸರ್ಕಾರಿ ಪ್ರಕ್ರಿಯೆ ಮೂಲಕ ಕೂಡಲೇ ಅನುಷ್ಠಾನಕ್ಕೆ ಬರಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ವಕೀಲ ಕಣ್ಣನ್ ಹತ್ಯೆ ಖಂಡಿಸಿ ಬೃಹತ್ ಪ್ರತಿಭಟನೆ

ಈ ಸಂದರ್ಭದಲ್ಲಿ ಸಂಯುಕ್ತ ಹೋರಾಟ ಕರ್ನಾಟಕ ದಾವಣಗೆರೆಯ ಸಂಚಾಲಕ ಹೊನ್ನೂರು ಮುನಿಯಪ್ಪ, ಸಂಚಾಲನಾ ಸಮಿತಿಯ ಸದಸ್ಯರಾದ ಶ್ರೀನಿವಾಸ್, ಆದಿಲ್ ಖಾನ್, ಗುಮ್ಮನೂರು ಬಸವರಾಜ್, ಬುಳ್ಳಾಪುರ ಹನುಮಂತಪ್ಪ, ಮಂಜುನಾಥ್ ರೆಡ್ಡಿ, ರಾಜು, ಐರಣಿ ಚಂದ್ರು, ಭರಮಪ್ಪ ಹಾಗೂ ಜೆಸಿಟಿಯು ಜಿಲ್ಲಾ ಮುಖಂಡರಾದ ಅವರಗೆರೆ ಚಂದ್ರು, ಮಂಜುನಾಥ್ ಕುಕ್ಕವಾಡ, ಆನಂದ್ ರಾಜು ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...