ದಾವಣಗೆರೆ | ಭದ್ರಾ ನಾಲೆಯ ಕೊನೆಯ ಭಾಗಕ್ಕೆ ದೊರೆಯದ ನೀರು; ರೈತರ ಆಕ್ರೋಶ

Date:

ಭದ್ರಾ ಡ್ಯಾಮ್‌ನಿಂದ ನೆಲೆಗೆ ಹರಿಸುವ ನೀರು, ನಾಲೆಯ ಕೊನೆ ಭಾಗಕ್ಕೆ ತಲುಪುತ್ತಿಲ್ಲ ಎಂದು ಆರೋಪಿಸಿ ದಾವಣಗೆರೆ ಜಿಲ್ಲೆಯ ಬೆಳ್ಳಿಗನೂಡು ವಿತರಣೆ ನಾಲೆ ಬಳಿ ರೈತರು ಪ್ರತಿಭಟನೆ ನಡೆಸಿದರು.

ರೈತ ಮುಖಂಡ ಕೊಳೇನಹಳ್ಳಿ ಬಿ ಎಂ ಸತೀಶ್ ಮಾತನಾಡಿ, “2ನೇ ನಾಲಾ ಉಪವಿಭಾಗದ ವ್ಯಾಪ್ತಿಯಲ್ಲಿ ಬರುವ ಕಂದಗಲ್, ಶಾಗಲೆ, ಹೂವಿನಮಡು, ಮತ್ತಿ, ಗೋಣಿವಾಡ, ಹೊನ್ನಮರಡಿ, ಕುಕ್ಕುವಾಡ, ಕೊಳೇನಹಳ್ಳಿ, ನಾಗರಸನಹಳ್ಳಿ ಭಾಗಕ್ಕೆ ನೀರು ತಲುಪಿಲ್ಲ. ದಾವಣಗೆರೆ ಮತ್ತು ಮಲೆಬೆನ್ನೂರು ವಿಭಾಗಕ್ಕೆ ಹರಿಸಬೇಕಾದ ಪ್ರಮಾಣದಲ್ಲಿ ಮುಖ್ಯ ನಾಲೆಯಲ್ಲಿ 11 ಅಡಿ ಬರುವ ಬದಲು ಕೇವಲ 8 ಅಡಿ ನೀರು ಹರಿಯುತ್ತದೆ. ಇದರಿಂದ ನೀರಾವರಿ ಎಂಜಿನಿಯರ್‌ಗಳಿಗೆ ಕೊನೆ ಭಾಗಕ್ಕೆ ನೀರು ತಲುಪಿಸಲು ಸಾಧ್ಯವಾಗುತ್ತಿಲ್ಲ” ಎಂದರು.

“12 ದಿನ ನೀರು ಹರಿಸುವುದೆಂಬ ಐಸಿಸಿಯ ತೀರ್ಮಾನ ಅವೈಜ್ಞಾನಿಕವಾಗಿದೆ. ನಾಳೆ ನೀರು ಹರಿಸಿ, 12 ದಿನಗಳಾದವು. ಆದ್ದರಿಂದ ನೀರು ಹರಿಸುವುದನ್ನು ನಿಲ್ಲಿಸಬಾರದು. 20 ದಿನಗಳವರೆಗೆ ಮುಂದುವರೆಸಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬೀದರ್‌ | ಅಲೆಮಾರಿ ಜನಾಂಗಕ್ಕೆ ಮೂಲ ಸೌಕರ್ಯದ ಭರವಸೆ ; ಉಪವಾಸ ಸತ್ಯಾಗ್ರಹ ಅಂತ್ಯ

ಕರ್ನಾಟಕ ನೀರಾವರಿ ನಿಗಮದ ದಾವಣಗೆರೆ ವಿಭಾಗದ ಎಕ್ಸಿಕ್ಯುಟೀವ್ ಎಂಜಿನಿಯರ್ ಆರ್ ಬಿ ಮಂಜುನಾಥ ಮಾತನಾಡಿ, “ಮುಖ್ಯ ನಾಲೆಯಲ್ಲಿ ನಿಗದಿತ ಪ್ರಮಾಣದಲ್ಲಿ ನೀರು ಹರಿಸುತ್ತಿಲ್ಲ. ಮುಖ್ಯ ನಾಲೆಯಲ್ಲಿ 11 ಅಡಿ ನೀರು ಹರಿಸಬೇಕು. ಆದರೆ ಕೇವಲ 8 ಅಡಿ ನೀರು ಹರಿಯುತ್ತಿದೆ. 12 ದಿನ ನೀರು ಹರಿಸಬೇಕೆಂಬ ವೇಳಾಪಟ್ಟಿಯಂತೆ ಕೊನೆ ಭಾಗಕ್ಕೆ ನೀರು ತಲುಪಿಸಲು ಸಾಧ್ಯವಾಗುತ್ತಿಲ್ಲ” ಎಂದು ಅಸಮಾಧಾನಪಟ್ಟರು.

ಈ ಸಂದರ್ಭದಲ್ಲಿ ನೂರಾರು ಸಂಖ್ಯೆಯಲ್ಲಿ ಭಾಗವಹಿಸಿದ ರೈತರು ಆಕ್ರೋಶ ವ್ಯಕ್ತಪಡಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...